AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ನಿವೃತ್ತ ಕೆಇಬಿ ನೌಕರ ಬಲಿ; 4 ಲಕ್ಷ ಹಣ ಕಟ್ಟಿ ಬಾಡಿ ತೆಗೆದುಕೊಂಡು ಹೋಗಿ ಅಂತಿರೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ನಿನ್ನೆ ರಾತ್ರಿ ಕೊರೊನಾದಿಂದ ನಮ್ಮ ಅಪ್ಪ ಅಸುನೀಗಿದ್ದಾರೆ. ಈ ಮಧ್ಯೆ, ಅವರ ಚಿಕಿತ್ಸೆಗಾಗಿ 4 ಲಕ್ಷದ 80 ಸಾವಿರ ಬಿಲ್ ಪಾವತಿ ಮಾಡಲಾಗಿದೆ. ಇನ್ನೂ 4 ಲಕ್ಷದ 72 ಸಾವಿರ ರೂಪಾಯಿ ಪಾವತಿ ಮಾಡಿದರೆ ಮಾತ್ರವೇ ಶವ ನೀಡುವುದಾಗಿ ಆಸ್ಪತ್ರೆಯವರು ಹೇಳುತ್ತಿದ್ದಾರೆ ಎಂದು ಗಿರಿಯಪ್ಪ ಪುತ್ರ ಶಿವಕುಮಾರ್ ಅವರು ಶಂಕರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ.

ಕೊರೊನಾಗೆ ನಿವೃತ್ತ ಕೆಇಬಿ ನೌಕರ ಬಲಿ; 4 ಲಕ್ಷ ಹಣ ಕಟ್ಟಿ ಬಾಡಿ ತೆಗೆದುಕೊಂಡು ಹೋಗಿ ಅಂತಿರೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಕೊರೊನಾಗೆ ನಿವೃತ್ತ ಕೆಇಬಿ ನೌಕರ ಬಲಿ; 4 ಲಕ್ಷ ಹಣ ಕಟ್ಟಿ ಬಾಡಿ ತೆಗೆದುಕೊಂಡು ಹೋಗಿ ಅಂತಿರೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಸಾಧು ಶ್ರೀನಾಥ್​
|

Updated on: Jun 01, 2021 | 10:46 AM

Share

ಬೆಂಗಳೂರು: ಕೊರೊನಾದಿಂದ ಮೃತಪಟ್ಟರೆ ಸಂಬಂಧಿಕರಿಗೆ ಆ ವ್ಯಕ್ತಿಯ ಶವ ನೀಡದೇ ಸತಾಯಿಸುವ ಆಸ್ಪತ್ರೆಗಳ ವಿರುದ್ಧ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶವಿದೆ. ಚಿಕಿತ್ಸೆಯ ಬಾಕಿ ಬಿಲ್‌ ಕಟ್ಟಲು ಒತ್ತಡ ಹೇರಬಾರದು. ಒಂದು ವೇಳೆ ಅಂತಹ ಪ್ರಸಂಗ ನಡೆದರೆ ಲೈಸೆನ್ಸ್ ರದ್ದು ಮಾಡುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ. ಆದರೆ ರಾಜಧಾನಿಯ ಹೃದಯ ಭಾಗದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದು ಸರ್ಕಾರಿ ಆದೇಶಕ್ಕೂ ಡೋಂಟ್‌ಕೇರ್, ಮಾನವೀಯತೆಗೂ ಡೋಂಟ್‌ಕೇರ್ ಅನ್ನುತ್ತಿದೆ.

ಮಾರಕ ಕೊರೊನಾ ಸೋಂಕಿನಿಂದ ನಿವೃತ್ತ ಕೆಇಬಿ ನೌಕರ ಗಿರಿಯಪ್ಪ (67) ಎಂಬುವವರು ಕನಕಪುರ ರಸ್ತೆಯಲ್ಲಿರುವ ಶಂಕರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 7-30 ಕ್ಕೆ ಸಾವಿಗೀಡಾಗಿದ್ದಾರೆ. ಕೆಂಗೇರಿಯ ಬಳಿಯ ನಾಗದೇವನಹಳ್ಳಿ ನಿವಾಸಿ ಗಿರಿಯಪ್ಪ ಕಳೆದ 19 ರಂದು ಶಂಕರ್ ಆಸ್ಪತ್ರೆ ಸೇರಿದ್ದರು. ಒಂದು ತಿಂಗಳಿನಿಂದ ಅವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು.

ಆದರೆ ಕೊನೆಗೂ ಅವರು ಬದುಕುಳಿಯಲಿಲ್ಲ. ನಿನ್ನೆ ರಾತ್ರಿ ಅಸುನೀಗಿದ್ದಾರೆ. ಈ ಮಧ್ಯೆ, ಗಿರಿಯಪ್ಪ ಚಿಕಿತ್ಸೆಗಾಗಿ 4 ಲಕ್ಷದ 80 ಸಾವಿರ ಬಿಲ್ ಪಾವತಿ ಮಾಡಲಾಗಿದೆ. ಇನ್ನೂ 4 ಲಕ್ಷದ 72 ಸಾವಿರ ರೂಪಾಯಿ ಪಾವತಿ ಮಾಡಿದರೆ ಮಾತ್ರವೇ ಶವ ನೀಡುವುದಾಗಿ ಆಸ್ಪತ್ರೆಯವರು ಹೇಳುತ್ತಿದ್ದಾರೆ ಎಂದು ಗಿರಿಯಪ್ಪ ಪುತ್ರ ಶಿವಕುಮಾರ್ ಅವರು ಶಂಕರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ. ಸರ್ಕಾರದ ಆದೇಶದ ಬಗ್ಗೆ ಆಸ್ಪತ್ರೆಯ ಗಮನ ಸೆಳೆದರೂ ಡೋಂಟ್‌ಕೇರ್ ಅನ್ನುತ್ತಿದ್ದಾರೆ ಎಂದು ಶಿವಕುಮಾರ್ ಚಿಂತಾಕ್ರಾಂತರಾಗಿದ್ದಾರೆ.

shankar super speciality hospital in shankarapuram allegedly demand arrears from covid patient family (1)

ಗಿರಿಯಪ್ಪ ಚಿಕಿತ್ಸೆಗಾಗಿ 4 ಲಕ್ಷದ 80 ಸಾವಿರ ಬಿಲ್ ಪಾವತಿ ಮಾಡಲಾಗಿದೆ. ಇನ್ನೂ 4 ಲಕ್ಷದ 72 ಸಾವಿರ ರೂಪಾಯಿ ಪಾವತಿ ಮಾಡಿದರೆ ಮಾತ್ರವೇ ಶವ ನೀಡುವುದಾಗಿ ಆಸ್ಪತ್ರೆಯವರು ಹೇಳುತ್ತಿದ್ದಾರೆ

(shankar super speciality hospital in shankarapuram allegedly demand arrears from covid patient family)

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್​ ರಿಪೇರಿ ಮಾಡಲಿದೆ ಬಾಷ್ ಕಂಪನಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್