AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾ ಟ್ವೀಟ್ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಶೇಪ್ಔಟ್ ಆಗಿದೆ; ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ -ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

ವ್ಯಕ್ತಿಯ ಸ್ವಾತಂತ್ರ್ಯ ಪರಸ್ಪರ ಸಂಬಂಧ ಸ್ನೇಹ ಪ್ರಶ್ನಿಸುವ ಕೀಳುಮಟ್ಟಕ್ಕೆ ಹೋದಂತ ವ್ಯಕ್ತಿ ಡಿಕೆಶಿ. ಅವರ ಬಗ್ಗೆ ಅವರದೇ ಎಲ್ಲ ನಾಯಕರು ಸಂಪೂರ್ಣ ಖಂಡಿಸಿದ್ದಾರೆ. ಏನೋ ಆಪಾದನೆ ಮಾಡಬೇಕು, ಅದಕ್ಕೊಂಡು ಅರ್ಥ ಕಲ್ಪಿಸಿ ದಿಕ್ಕು ತಪ್ಪಿಸಬೇಕು ಅಂತ ಹೊರಟಿದ್ದವರಿಗೆ ಅವರ ಪಕ್ಷದವರೇ ತಕ್ಕ ಪಾಠ ಕಲಿಸಿದ್ದಾರೆ.

ರಮ್ಯಾ ಟ್ವೀಟ್ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಶೇಪ್ಔಟ್ ಆಗಿದೆ; ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ -ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ
ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
TV9 Web
| Edited By: |

Updated on:May 13, 2022 | 3:13 PM

Share

ಬೆಂಗಳೂರು: ಮಾಜಿ ಸಂಸದೆ ರಮ್ಯಾ(Ramya) ಟ್ವೀಟ್ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ(DK Shivakumar) ಶೇಪ್ಔಟ್ ಆಗಿದೆ ಎಂದು ಬೆಂಗಳೂರಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಟಾಂಗ್ ಕೊಟ್ಟಿದ್ದಾರೆ. ತಾನು ಯಾರಿಗೆ ಬೇಕಾದರೂ ತಾಗ್ತೀನಿ ಅಂತ ಬಿಲ್ಡಪ್ ಕೊಡ್ತಿದ್ರು. ಆದರೆ ಈಗ ಡಿಕೆಶಿವಕುಮಾರ್ಗೆ ಶೇಪ್ಔಟ್ ಆಗಿದೆ. ರಮ್ಯಾ ಟ್ವೀಟ್ ಬಳಿಕ ಕಾಂಗ್ರೆಸ್ ನಾಯಕರು ಟೀಕೆ ಮಾಡಿದ್ದಾರೆ. ಇಂಥವರು ನಮ್ಮ ಅಧ್ಯಕ್ಷರಾ ಎಂದು ಮುಜುಗರ ಅನುಭವಿಸ್ತಿದ್ದಾರೆ. ಅಶ್ವತ್ಥ್ ನಾರಾಯಣನನ್ನು ಮುಗಿಸುತ್ತೇನೆ ಎಂದು ಹೊರಟಿದ್ರು. ಈಗ ಡಿಕೆಶಿಯೇ ರಾಜಕೀಯವಾಗಿ ಮುಗಿದು ಹೋಗುತ್ತಿದ್ದಾರೆ. ನಟಿ ರಮ್ಯಾ ಪಾಪ ಹೆಣ್ಣುಮಗಳು, ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಡಿಕೆ ಶಿವಕುಮಾರ್ಗೆ ಟಾಂಗ್ ಕೊಟ್ಟಿದ್ದಾರೆ.

ವ್ಯಕ್ತಿಯ ಸ್ವಾತಂತ್ರ್ಯ ಪರಸ್ಪರ ಸಂಬಂಧ ಸ್ನೇಹ ಪ್ರಶ್ನಿಸುವ ಕೀಳುಮಟ್ಟಕ್ಕೆ ಹೋದಂತ ವ್ಯಕ್ತಿ ಡಿಕೆಶಿ. ಅವರ ಬಗ್ಗೆ ಅವರದೇ ಎಲ್ಲ ನಾಯಕರು ಸಂಪೂರ್ಣ ಖಂಡಿಸಿದ್ದಾರೆ. ಏನೋ ಆಪಾದನೆ ಮಾಡಬೇಕು, ಅದಕ್ಕೊಂಡು ಅರ್ಥ ಕಲ್ಪಿಸಿ ದಿಕ್ಕು ತಪ್ಪಿಸಬೇಕು ಅಂತ ಹೊರಟಿದ್ದವರಿಗೆ ಅವರ ಪಕ್ಷದವರೇ ತಕ್ಕ ಪಾಠ ಕಲಿಸಿದ್ದಾರೆ. ಇನ್ಮುಂದೆ ಡಿಕೆ ಶಿವಕುಮಾರ್ ಇಂಥ ಮಾತನಾಡಲ್ಲ ಅನಿಸುತ್ತದೆ. ಡಿಕೆ ಶಿವಕುಮಾರ್ ಇದನ್ನು ಅರ್ಥ ಮಾಡ್ಕೋತಾರೆ ಅನ್ಸತ್ತೆ. ಈ ರೀತಿಯ ಹೇಳಿಕೆ ಮೂಲಕ ಅವರ ವ್ಯಕ್ತಿತ್ವ ಮನೋಭಾವ ಏನು ಅನ್ನೋದು ಬಹಳ ಸ್ಪಷ್ಟವಾಗಿ ಗೊತ್ತಾಗ್ತಿದೆ. ಹೀಗಾಗಿ ನನಗೆ ಸಂತೋಷ ಆಗ್ತಿದೆ.

ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ ಅವರ ಆಂತರಿಕ ವಿಚಾರ, ಆದರೂ ಮಾಧ್ಯಮಗಳು ನನ್ನನ್ನೂ ಇದರಲ್ಲಿ ಸೇರಿಸಿದ್ದೀರಾ. ಡಿಕೆ ಶಿವಕುಮಾರ್ ರಾಂಗ್ ನಂಬರ್ ಡಯಲ್ ಮಾಡಿದ್ದು ಅವರ ತಪ್ಪು. ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ. ಎಂಥ ವ್ಯಕ್ತಿ ಅಧ್ಯಕ್ಷರಾಗಿದ್ದಾರಪ್ಪ ಅನ್ನೋ ಮುಜುಗರ ಕಾಂಗ್ರೆಸ್ ನಾಯಕರಿಗೆ ಆಗಿದೆ. ಅನುಕಂಪ ಒಳ್ಳೆಯವರ ಮೇಲೆ ಇರತ್ತೆ, ಸಜ್ಜನರ ಮೇಲೆ ಇರತ್ತೆ, ಡಿಕೆ ಶಿವಕುಮಾರ್ ಅಂಥವರ ಮೇಲಲ್ಲ. ಅವರದೇ ಪಕ್ಷದ ಹೆಣ್ಣು ಮಗಳ ಮೇಲೆಯೇ ತೇಜೋವಧೆ ಮಾಡಿದರೆ ಏನಾಗತ್ತೆ ಎನ್ನುವ ಬಿಸಿ ಡಿಕೆ ಶಿವಕುಮಾರ್ಗೆ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಸಚಿವ ಅಶ್ವತ್ಥ್ ನಾರಾಯಣ ತಿರುಗೇಟು ಕೊಟ್ಟಿದ್ದಾರೆ.

ಡಿಕೆ ಶಿವಕುಮಾರ್ ಮತ್ತು ರಮ್ಯಾ ಟ್ವೀಟ್ ವಾರ್ ವಿಚಾರಕ್ಕೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:13 pm, Fri, 13 May 22

Follow Us
Web contact
Web contact

TV9 Kannada

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?