AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮ್ಯಾ ಟ್ವೀಟ್ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಶೇಪ್ಔಟ್ ಆಗಿದೆ; ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ -ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

ವ್ಯಕ್ತಿಯ ಸ್ವಾತಂತ್ರ್ಯ ಪರಸ್ಪರ ಸಂಬಂಧ ಸ್ನೇಹ ಪ್ರಶ್ನಿಸುವ ಕೀಳುಮಟ್ಟಕ್ಕೆ ಹೋದಂತ ವ್ಯಕ್ತಿ ಡಿಕೆಶಿ. ಅವರ ಬಗ್ಗೆ ಅವರದೇ ಎಲ್ಲ ನಾಯಕರು ಸಂಪೂರ್ಣ ಖಂಡಿಸಿದ್ದಾರೆ. ಏನೋ ಆಪಾದನೆ ಮಾಡಬೇಕು, ಅದಕ್ಕೊಂಡು ಅರ್ಥ ಕಲ್ಪಿಸಿ ದಿಕ್ಕು ತಪ್ಪಿಸಬೇಕು ಅಂತ ಹೊರಟಿದ್ದವರಿಗೆ ಅವರ ಪಕ್ಷದವರೇ ತಕ್ಕ ಪಾಠ ಕಲಿಸಿದ್ದಾರೆ.

ರಮ್ಯಾ ಟ್ವೀಟ್ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಶೇಪ್ಔಟ್ ಆಗಿದೆ; ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ -ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ
ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ
TV9 Web
| Edited By: ಆಯೇಷಾ ಬಾನು|

Updated on:May 13, 2022 | 3:13 PM

Share

ಬೆಂಗಳೂರು: ಮಾಜಿ ಸಂಸದೆ ರಮ್ಯಾ(Ramya) ಟ್ವೀಟ್ನಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ(DK Shivakumar) ಶೇಪ್ಔಟ್ ಆಗಿದೆ ಎಂದು ಬೆಂಗಳೂರಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಟಾಂಗ್ ಕೊಟ್ಟಿದ್ದಾರೆ. ತಾನು ಯಾರಿಗೆ ಬೇಕಾದರೂ ತಾಗ್ತೀನಿ ಅಂತ ಬಿಲ್ಡಪ್ ಕೊಡ್ತಿದ್ರು. ಆದರೆ ಈಗ ಡಿಕೆಶಿವಕುಮಾರ್ಗೆ ಶೇಪ್ಔಟ್ ಆಗಿದೆ. ರಮ್ಯಾ ಟ್ವೀಟ್ ಬಳಿಕ ಕಾಂಗ್ರೆಸ್ ನಾಯಕರು ಟೀಕೆ ಮಾಡಿದ್ದಾರೆ. ಇಂಥವರು ನಮ್ಮ ಅಧ್ಯಕ್ಷರಾ ಎಂದು ಮುಜುಗರ ಅನುಭವಿಸ್ತಿದ್ದಾರೆ. ಅಶ್ವತ್ಥ್ ನಾರಾಯಣನನ್ನು ಮುಗಿಸುತ್ತೇನೆ ಎಂದು ಹೊರಟಿದ್ರು. ಈಗ ಡಿಕೆಶಿಯೇ ರಾಜಕೀಯವಾಗಿ ಮುಗಿದು ಹೋಗುತ್ತಿದ್ದಾರೆ. ನಟಿ ರಮ್ಯಾ ಪಾಪ ಹೆಣ್ಣುಮಗಳು, ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಡಿಕೆ ಶಿವಕುಮಾರ್ಗೆ ಟಾಂಗ್ ಕೊಟ್ಟಿದ್ದಾರೆ.

ವ್ಯಕ್ತಿಯ ಸ್ವಾತಂತ್ರ್ಯ ಪರಸ್ಪರ ಸಂಬಂಧ ಸ್ನೇಹ ಪ್ರಶ್ನಿಸುವ ಕೀಳುಮಟ್ಟಕ್ಕೆ ಹೋದಂತ ವ್ಯಕ್ತಿ ಡಿಕೆಶಿ. ಅವರ ಬಗ್ಗೆ ಅವರದೇ ಎಲ್ಲ ನಾಯಕರು ಸಂಪೂರ್ಣ ಖಂಡಿಸಿದ್ದಾರೆ. ಏನೋ ಆಪಾದನೆ ಮಾಡಬೇಕು, ಅದಕ್ಕೊಂಡು ಅರ್ಥ ಕಲ್ಪಿಸಿ ದಿಕ್ಕು ತಪ್ಪಿಸಬೇಕು ಅಂತ ಹೊರಟಿದ್ದವರಿಗೆ ಅವರ ಪಕ್ಷದವರೇ ತಕ್ಕ ಪಾಠ ಕಲಿಸಿದ್ದಾರೆ. ಇನ್ಮುಂದೆ ಡಿಕೆ ಶಿವಕುಮಾರ್ ಇಂಥ ಮಾತನಾಡಲ್ಲ ಅನಿಸುತ್ತದೆ. ಡಿಕೆ ಶಿವಕುಮಾರ್ ಇದನ್ನು ಅರ್ಥ ಮಾಡ್ಕೋತಾರೆ ಅನ್ಸತ್ತೆ. ಈ ರೀತಿಯ ಹೇಳಿಕೆ ಮೂಲಕ ಅವರ ವ್ಯಕ್ತಿತ್ವ ಮನೋಭಾವ ಏನು ಅನ್ನೋದು ಬಹಳ ಸ್ಪಷ್ಟವಾಗಿ ಗೊತ್ತಾಗ್ತಿದೆ. ಹೀಗಾಗಿ ನನಗೆ ಸಂತೋಷ ಆಗ್ತಿದೆ.

ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ ಅವರ ಆಂತರಿಕ ವಿಚಾರ, ಆದರೂ ಮಾಧ್ಯಮಗಳು ನನ್ನನ್ನೂ ಇದರಲ್ಲಿ ಸೇರಿಸಿದ್ದೀರಾ. ಡಿಕೆ ಶಿವಕುಮಾರ್ ರಾಂಗ್ ನಂಬರ್ ಡಯಲ್ ಮಾಡಿದ್ದು ಅವರ ತಪ್ಪು. ನನ್ನನ್ನು ಟಚ್ ಮಾಡಿ ಅಯ್ಯೋ ಪಾಪ ಅನ್ನೋ ಸ್ಥಿತಿಗೆ ಬಂದಿದ್ದಾರೆ. ಎಂಥ ವ್ಯಕ್ತಿ ಅಧ್ಯಕ್ಷರಾಗಿದ್ದಾರಪ್ಪ ಅನ್ನೋ ಮುಜುಗರ ಕಾಂಗ್ರೆಸ್ ನಾಯಕರಿಗೆ ಆಗಿದೆ. ಅನುಕಂಪ ಒಳ್ಳೆಯವರ ಮೇಲೆ ಇರತ್ತೆ, ಸಜ್ಜನರ ಮೇಲೆ ಇರತ್ತೆ, ಡಿಕೆ ಶಿವಕುಮಾರ್ ಅಂಥವರ ಮೇಲಲ್ಲ. ಅವರದೇ ಪಕ್ಷದ ಹೆಣ್ಣು ಮಗಳ ಮೇಲೆಯೇ ತೇಜೋವಧೆ ಮಾಡಿದರೆ ಏನಾಗತ್ತೆ ಎನ್ನುವ ಬಿಸಿ ಡಿಕೆ ಶಿವಕುಮಾರ್ಗೆ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಸಚಿವ ಅಶ್ವತ್ಥ್ ನಾರಾಯಣ ತಿರುಗೇಟು ಕೊಟ್ಟಿದ್ದಾರೆ.

ಡಿಕೆ ಶಿವಕುಮಾರ್ ಮತ್ತು ರಮ್ಯಾ ಟ್ವೀಟ್ ವಾರ್ ವಿಚಾರಕ್ಕೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:13 pm, Fri, 13 May 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು