AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಭರ್ಜರಿ ಕಾರ್ಯಚರಣೆ, ದಿಲ್ಲಿಯಿಂದ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಜಾಲ ಪತ್ತೆ, 7 ಪೆಡ್ಲರ್​​ಗಳ ಬಂಧನ

ರಾಷ್ಟ್ರ ರಾಜಧಾನಿಯಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ಡ್ರಗ್ಸ್​ ಆಮದು ಮಾಡಿಕೊಂಡು ನಗರದಲ್ಲಿ ಸಪ್ಲೈ ಮಾಡುತ್ತಿದ್ದ ಜಾಲವನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಪತ್ತೆ ಮಾಡಿದ್ದು, ದೇಶಿ ಪ್ರಜೆ ಸೇರಿ 7 ಡ್ರಗ್​​ ಪೆಡ್ಲರ್​​ಗಳನ್ನು ಬಂಧಿಸಿದ್ದಾರೆ.

ಪೊಲೀಸರ ಭರ್ಜರಿ ಕಾರ್ಯಚರಣೆ, ದಿಲ್ಲಿಯಿಂದ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಜಾಲ ಪತ್ತೆ, 7 ಪೆಡ್ಲರ್​​ಗಳ ಬಂಧನ
ಬಂಧಿತ ಡ್ರಗ್ ಪೆಡ್ಲರ್ಸ್
ಪ್ರಜ್ವಲ್​ ಕುಮಾರ್ ಎನ್​ ವೈ
| Updated By: ರಮೇಶ್ ಬಿ. ಜವಳಗೇರಾ|

Updated on: Aug 10, 2023 | 11:59 AM

Share

ಬೆಂಗಳೂರು, (ಆಗಸ್ಟ್ 10): ರಾಜ್ಯ ರಾಜಧಾನಿ, ಸಿಲಿಕಾನ್​ ಸಿಟಿ ದಿನ ದಿನಕ್ಕೆ ಬೆಳೆಯುತ್ತಲೇ ಇದೆ. ಇದರ ಜೊತೆಗೆ ನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಲೇ ಇವೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಡ್ರಗ್ಸ್‌ ದಂಧೆಯ ಕಬಂಧ ಬಾಹುಗಳು ದಿನದಿಂದ ದಿನಕ್ಕೆ ಹಬ್ಬುತ್ತಲೇ ಇವೆ. ಇದರಿಂದ ಮಾದಕ ವ್ಯಸನಿಗಳ ಸಂಖ್ಯೆಯೂ ಹೆಚ್ಚುತ್ತಿದೆ. ಒಂದೆಡೆ ಪೊಲೀಸರು ಡ್ರಗ್​ ಪೆಡ್ಲರ್​ಗಳನ್ನು ಸೆರೆಯುತ್ತಿದ್ದರೆ, ಮತ್ತೊಂದೆಡೆ ಹೊಸ ಪೆಡ್ಲರ್​ಗಳು ಹುಟ್ಟಿಕೊಳ್ಳುತ್ತಿದ್ದಾರೆ. ಡ್ರಗ್, ಜಾಂಗಾ ಸೇರಿದಂತೆ ಮಾದಕ ದ್ರವ್ಯಗಳನ್ನು ಬೇರೆ-ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ತಂದು ಸಪ್ಲೈ ಮಾಡಲಾಗುತ್ತದೆ. ಇದೀಗ ಅಂತದ್ದೇ ಒಂದು ಸಪ್ಲೈ ಮಾಡುತ್ತಿದ್ದ ಜಾಲವನ್ನು ಶೇಷಾದ್ರಿಪುರ ಪೊಲೀಸರು ಪತ್ತೆ ಮಾಡಿ ಸೆರೆ ಹಿಡಿದಿದ್ದಾರೆ.

ಶೇಷಾದ್ರಿಪುರ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ವಿದೇಶಿ ಪ್ರಜೆ ಸೇರಿ 7 ಡ್ರಗ್​​ ಪೆಡ್ಲರ್​​ಗಳನ್ನು ಬಂಧಿಸಿದ್ದಾರೆ. ಆರೋಪಿಗಳಾದ ಸಾಹಿಲ್, ನಾಸಿರ್, ಆದಂ ಖಾನ್, ಸಮೀರ್, ನೈಜೀರಿಯಾ ಮೂಲದ ಹ್ಯಾಪಿನೆಸ್ ಎಂಬ ಮಹಿಳೆ ಸೇರಿ 7 ಜನರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 300 ಗ್ರಾಂ ಎಂಡಿಎಂಎ ಮಾತ್ರೆ ಜಪ್ತಿ ಮಾಡಿಕೊಂಡಿದ್ದಾರೆ. ದೆಹಲಿಯಿಂದ ಡ್ರಗ್ಸ್​ ಆಮದು ಮಾಡಿಕೊಳ್ಳುತ್ತಿದ್ದ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಪ್ಲೈ ಮಾಡುತ್ತಿರುವ ಜಾಲವನ್ನು ಪತ್ತೆ ಮಾಡಲು ಪೊಲೀಸರು ಸೂಕ್ಷ್ಮವಾಗಿ ಕಾರ್ಯಚರಣೆ ನಡೆಸುತ್ತಿದ್ದರು. ಕೊನೆಗೆ ಪೆಡ್ಲರ್​ಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ವಿದ್ಯಾರ್ಥಿಗಳಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದವನ ಬಂಧನ

ಬೆಂಗಳೂರು, ವಿದ್ಯಾರ್ಥಿಗಳಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದವನನ್ನು ಸೋಲವೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಚಿಕ್ಕಬಾಣಾವರ ರೈಲ್ವೆ ನಿಲ್ದಾಣದ ಬಳಿ ಕೇರಳ ಮೂಲದ ಉನ್ನಿಸುರೇಶ್(24) ಎನ್ನುವಾತನ್ನು ಬಂಧಿಸಿದ್ದಾರೆ. ಬಂಧಿತನ ಬಳಿ ಇದ್ದ 70 ಸಾವಿರ ಮೌಲ್ಯದ MDMA ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನಲ್ಲಿ ಗಾಂಜಾ ಮಾರಟ ಯತ್ನ ಆರೋಪಿ ಬಂಧನ

ಮೈಸೂರು: ಕೆಆರ್​ಎಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ ರಾಜೀವ್ ನಗರದ ಆರೋಪಿ ಜುಬೇರ್(21) ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಳಿಯಿದ್ದ 9 ಕೆಜಿ ಗಾಂಜಾ ಜಪ್ತಿ ಮಾಡಿಕೊಂಡಿದ್ದು, ಪರಾರಿಯಾಗಿರುವ ಮತ್ತೊಬ್ಬ ಆರೋಪಿ ಆಸೀಫ್ ಗಾಗಿ ಹುಡಾಟ ನಡೆಸಿದ್ದಾರೆ. ದೇವರಾಜ ಠಾಣೆ ಇನ್ಸ್​ಪೆಕ್ಟರ್ ಟಿ.ಬಿ.ಶಿವಕುಮಾರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಈ ಬ್ಗಗೆ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಕ್ರೈಂ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ