AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ವಿವಾದ; ಕಾಲೇಜು ನಡೆ ವಿರೋಧಿಸಿ ಸಿಎಂ ಬೊಮ್ಮಾಯಿಗೆ ಶಿರೋಮಣಿ ಗುರುದ್ವಾರ ಸಮಿತಿ ಪತ್ರ

ವಿದ್ಯಾರ್ಥಿನಿಗೆ ಟರ್ಬನ್ ತಗೆಯುವಂತೆ ಹೇಳಿರುವ ಕಾಲೇಜು ನಡೆ ವಿರೋಧಿಸಿ ಶಿರೋಮಣಿ ಗುರುದ್ವಾರ ಪರಬಂಧಕ್ ಸಮಿತಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ. ಹಾಗೂ ಸಿಎಂಗೆ ಪತ್ರ ಬರೆದು ಟರ್ಬನ್ ಹಕ್ಕುಗಳ ಬಗ್ಗೆ ತಿಳಿಸಿದೆ.

ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ವಿವಾದ; ಕಾಲೇಜು ನಡೆ ವಿರೋಧಿಸಿ ಸಿಎಂ ಬೊಮ್ಮಾಯಿಗೆ ಶಿರೋಮಣಿ ಗುರುದ್ವಾರ ಸಮಿತಿ ಪತ್ರ
ಸಿಎಂ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Feb 25, 2022 | 11:02 AM

Share

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್(Hijab) ಕೇಸರಿ ಶಾಲು(Kesari Row) ವಿವಾದ ದಿನದಿಂದ ದಿನಕ್ಕೇ ಬೇರೆ ಬೇರೆ ತಿರುವು ಪಡೆಯುತ್ತಿದೆ. ಸಿಂಧೂರ, ಬಳೆ ಕುಂಕುಮದ ಬಳಿಕ ಟರ್ಬನ್(Turban) ಪ್ರಶ್ನೆ ಎದ್ದಿದೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ(Mount Carmel College) ಟರ್ಬನ್ ವಿವಾದ ಹುಟ್ಟಿಕೊಂಡಿದೆ. ನಿನ್ನೆ (ಫೆ.24) ಸಿಖ್ ವಿದ್ಯಾರ್ಥಿನಿಯೊಬ್ಬರು ಧರಿಸಿದ್ದ ಟರ್ಬಲ್ ತೆಗೆಸುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ಆಡಳಿತ ಮಂಡಳಿಗೆ ತಗಾದ ತೆಗೆದಿದ್ದರು. ಈ ವಿಚಾರವಾಗಿ ಆಡಳಿ ಮಂಡಳಿ ಮತ್ತು ಪೋಷಕರ ನಡುವೆ ಚರ್ಚೆ ವಾಗ್ವಾದ ನಡೆದಿತ್ತು. ಸದ್ಯ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿಗೆ ಸೂಚನೆ ವಿಚಾರಕ್ಕೆ ಸಂಬಂಧಿಸಿ ಸಿಎಂ ಬಸವರಾಜ ಬೊಮ್ಮಾಯಿಗೆ(Basavaraj Bommai )ಶಿರೋಮಣಿ ಗುರುದ್ವಾರ ಪರಬಂಧಕ್ ಸಮಿತಿ(Shiromani Gurdwara Parbandhak Committee) ಪತ್ರ ಬರೆದಿದೆ.

ವಿದ್ಯಾರ್ಥಿನಿಗೆ ಟರ್ಬನ್ ತಗೆಯುವಂತೆ ಹೇಳಿರುವ ಕಾಲೇಜು ನಡೆ ವಿರೋಧಿಸಿ ಶಿರೋಮಣಿ ಗುರುದ್ವಾರ ಪರಬಂಧಕ್ ಸಮಿತಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ. ಹಾಗೂ ಸಿಎಂಗೆ ಪತ್ರ ಬರೆದು ಟರ್ಬನ್ ಹಕ್ಕುಗಳ ಬಗ್ಗೆ ತಿಳಿಸಿದೆ. ಅಮೃತ್‌ಧಾರಿ ದೀಕ್ಷಾಸ್ನಾನ ಪಡೆದ ಸಿಖ್ ವಿದ್ಯಾರ್ಥಿನಿಗೆ ಟರ್ಬನ್‌ ತೆಗೆಯಬೇಕು ಅಂತಾ ಕಾಲೇಜು ಹೇಳಿದೆ. ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಮಂಡಳಿ ಸಿಖ್ ವಿದ್ಯಾರ್ಥಿನಿಗೆ ಟರ್ಬನ್ ತೆಗೆಯುವಂತೆ ಹೇಳಿದೆ.

ಸಿಖ್ ರೆಹತ್ ಮರ್ಯಾದಾ ಪ್ರಕಾರ ಸಿಖ್ ಸಮುದಾಯವು ತಮ್ಮ ನಂಬಿಕೆಯನ್ನು ಮುಕ್ತವಾಗಿ ಅನುಸರಿಸಲು ಅವಕಾಶ ಇದೆ. ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ ಸಿಖ್ ಪುರುಷರು ಮತ್ತು ಮಹಿಳೆಯರು ದ್ವಿಚಕ್ರ ವಾಹನ ಓಡಿಸುವಾಗ ಟರ್ಬನ್ ಧರಿಸುತ್ತಾರೆ. ಭಾರತೀಯ ಸೇನೆ ಮತ್ತು ಇತರ ದೇಶಗಳಲ್ಲಿ ಸಿಖ್ ಸೈನಿಕರು ಕ್ಯಾಪ್ ಅಥವಾ ಹೆಲ್ಮೆಟ್ ಬದಲಿಗೆ ಟರ್ಬನ್ ಧರಿಸುತ್ತಾರೆ. ಯುದ್ಧದ ನಡುವೆಯೂ ಸಹ ಹೆಲ್ಮೆಟ್ ಬದಲಿಗೆ ಟರ್ಬನ್ ಧರಿಸುತ್ತಾರೆ ಎಂದು ಪತ್ರದಲ್ಲಿ ತಿಳಿಸಿದ್ದು ಟರ್ಬನ್ ಪ್ರಶ್ನಿಸುವವರ ವಿರುದ್ಧ ಸೂಕ್ತ ಕ್ರಮವಹಿಸುವಂತೆ ಸಿಎಂಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ‘ಮೊದಲ ಪ್ಯಾನ್​ ಇಂಡಿಯಾ ಚಿತ್ರ ನಮ್ಮ ಕನ್ನಡದ್ದು’: ದಶಕಗಳ ಹಿಂದಿನ ಮಾಹಿತಿ ತಿಳಿಸಿದ ಎಸ್​. ನಾರಾಯಣ್​

Hijab; ಹಿಜಾಬ್ ಮೂಲಭೂತ ಹಕ್ಕೆಂದು ನೀವು ಸಾಬೀತು ಮಾಡಬೇಕು; ಅರ್ಜಿದಾರರಿಗೆ ಸಿಜೆ ಸೂಚನೆ

Published On - 9:37 am, Fri, 25 February 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ