
ಬೆಂಗಳೂರು, ಆಗಸ್ಟ್ 29: ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯಲಿರುವ ಸಂತ ಮೇರಿ ಜಯಂತಿ ಹಾಗೂ ಆರೋಗ್ಯ ಮಾತೆಯ ಧ್ವಜಾರೋಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ನಗರ ಸಂಚಾರ ಪೊಲೀಸರು (Traffic Police) ಆಯಕಟ್ಟಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿದ್ದಾರೆ. ಸಾವಿರಾರು ಭಕ್ತರು ಸೇರುವ ನಿರೀಕ್ಷೆಯಿರುವುದರಿಂದ, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಇಂದು ಮಧ್ಯಾಹ್ನ 1.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
“ಸಂಚಾರ ಸಲಹೆ” pic.twitter.com/xZ50jPo3vw
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) August 27, 2026
ಕ್ವೀನ್ಸ್ ರಸ್ತೆಯಿಂದ ಬರುವ ಬಿಎಂಟಿಸಿ ಬಸ್ಗಳು ಟ್ರಾಫಿಕ್ ಹೆಡ್ ಕ್ವಾರ್ಟರ್ಸ್ ಜಂಕ್ಷನ್ ಬಳಿ ಎಡ ತಿರುವು ಪಡೆದು ಇನ್ಫ್ಯಾಂಟ್ರಿ ರಸ್ತೆ ಮೂಲಕ ಶಿವಾಜಿನಗರ ಬಸ್ ನಿಲ್ದಾಣ ತಲುಪಬಹುದು. ಅನಿಲ್ ಕುಂಭ್ಳೆ ಹಾಗೂ ಮಣಿಪಾಲ್ ಜಂಕ್ಷನ್ ಕಡೆಯಿಂದ ಬರುವ ಬಸ್ಗಳಿಗೆ ಬಿಆರ್ವಿ ಜಂಕ್ಷನ್ ಬಳಿ ಪ್ರಯಾಣಿಕರನ್ನು ಇಳಿಸಲು ವ್ಯವಸ್ಥೆ ಮಾಡಲಾಗಿದೆ.
ರಸಲ್ ಮಾರ್ಕೆಟ್, ಬ್ರಾಡ್ವೇ ರಸ್ತೆ, ಇನ್ಫ್ಯಾಂಟ್ರಿ ರಸ್ತೆ ಮತ್ತು ಕಬ್ಬನ್ ರಸ್ತೆ ಸುತ್ತಮುತ್ತ ವಾಹನ ನಿಲುಗಡೆ ಸಂಪೂರ್ಣ ನಿಷೇಧಿಸಲಾಗಿದೆ. ಸಾರ್ವಜನಿಕರು ತಮ್ಮ ವಾಹನಗಳನ್ನು ಚೋಟಾ ಮೈದಾನ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ 1ನೇ ಮಹಡಿ, ಸಫೀನಾ ಪ್ಲಾಜಾ ಮುಂಭಾಗ ಮತ್ತು ರಮಡಾ ಹೋಟೆಲ್ ಆವರಣದಲ್ಲಿ ಪಾರ್ಕ್ ಮಾಡಲು ಸೂಚಿಸಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ