AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಗಲಭೆ: ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ

ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಹರ್ಷ ಸಮರ್ಪಿಸಿದ್ದಾನೆ. ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ಸಚಿವರು ಹೇಳಿದರು.

ಶಿವಮೊಗ್ಗ ಗಲಭೆ: ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ
ಸಚಿವ ಅಶ್ವತ್ಥ್ ನಾರಾಯಣ (ಸಂಗ್ರಹ ಚಿತ್ರ)
TV9 Web
| Edited By: |

Updated on: Feb 23, 2022 | 7:01 PM

Share

ಬೆಂಗಳೂರು: ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು 10 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ. ಈ ಬಗ್ಗೆ ಹೇಳಿಕೆ‌ ನೀಡಿರುವ ಅವರು ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್​ನಿಂದ ಪರಿಹಾರದ ಮೊತ್ತ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಚಿವರು ಬುಧವಾರ ಸಂಜೆ ಹರ್ಷ ಅವರ ತಾಯಿ ಜತೆ ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಹೇಳಿದರು.

ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಹರ್ಷ ಸಮರ್ಪಿಸಿದ್ದಾನೆ. ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯ. ಘೋಷಿಸಿರುವ ಹಣವನ್ನು ಹರ್ಷನ ತಾಯಿಯವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಎಂದು ಸಚಿವರು ತಿಳಿಸಿದರು. ಹರ್ಷನಂತಹ ಒಬ್ಬ ಸೇವಾ ಮನೋಭಾವದ ವ್ಯಕ್ತಿಯನ್ನು ಮೂಲಭೂತವಾದಿಗಳು ಬಲಿ ತೆಗೆದುಕೊಂಡಿದ್ದಾರೆ. ದುಷ್ಕರ್ಮಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗದಲ್ಲಿ ನಡೆದಿರುವ ಹೇಯ ಕೃತ್ಯವನ್ನು ಸಂವೇದನಾಶೀಲರೆಲ್ಲ ಖಂಡಿಸಬೇಕು ಎಂದು ಅವರು ಮನವಿ ಮಾಡಿದರು.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಸಮಾಜದಲ್ಲಿ ಸೌಹಾರ್ದ ಸ್ಥಾಪನೆಗೆ ಬದ್ಧವಾಗಿದೆ. ನಾಗರಿಕ ಸಮಾಜದಲ್ಲಿ ವಾದ-ವಿವಾದಗಳು ಸಹಜ. ಆದರೆ ಶಿವಮೊಗ್ಗದಲ್ಲಿ ನಡೆದಿರುವುದು ಬರ್ಬರ ಮತ್ತು ಅಮಾನವೀಯ ಘಟನೆ. ಸಮಾಜ ವಿರೋಧಿ ಶಕ್ತಿಗಳನ್ನು ಸರಕಾರವು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಲಿದೆ. ಈ ಘಟನೆಯ ಹಿಂದೆ ಯಾರೆಲ್ಲಾ ಇದ್ದಾರೆ ಮತ್ತು ಯಾವ್ಯಾವ ಸಂಘಟನೆಗಳ ಕುಮ್ಮಕ್ಕಿದೆ ಎನ್ನುವುದನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಇದನ್ನೂ ಓದಿ: ಹರ್ಷನ ಕೊಲೆ ವಿರುದ್ಧ ಹಿಂದೂ-ಪರ ಸಂಘಟನೆ ಕಾರ್ಯಕರ್ತರೊಂದಿಗೆ ಪ್ರತಿಭಟನೆಗಿಳಿದ ಬಿಜೆಪಿ ಶಾಸಕನಿಗೆ ಮುಖಭಂಗ

ಇದನ್ನೂ ಓದಿ: ಮೃತ ಹರ್ಷ ಕುಟುಂಬಸ್ಥರಿಗೆ 6 ಲಕ್ಷ ರೂ. ಕೊಡಲು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ನಿರ್ಧಾರ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!