AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಎಂದು ಹೇಳುವವರ ಕಪಾಳಕ್ಕೆ ಹೊಡೆಯಿರಿ: ಪ್ರಚೋದನಕಾರಿ ಹೇಳಿಕೆ ಸಮರ್ಥಿಸಿಕೊಂಡ ತಂಗಡಗಿ

ಮೋದಿ ಮೋದಿ ಎಂದು ಘೋಷಣೆ ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ನಡುವೆ, ತಮ್ಮ ಹೇಳಿಕೆಯನ್ನು ತಂಗಡಗಿ ಸಮರ್ಥಿಸಿಕೊಂಡಿದ್ದಾರೆ.

ಮೋದಿ ಎಂದು ಹೇಳುವವರ ಕಪಾಳಕ್ಕೆ ಹೊಡೆಯಿರಿ: ಪ್ರಚೋದನಕಾರಿ ಹೇಳಿಕೆ ಸಮರ್ಥಿಸಿಕೊಂಡ ತಂಗಡಗಿ
ಮೋದಿ ಎಂದು ಹೇಳುವವರ ಕಪಾಳಕ್ಕೆ ಹೊಡೆಯಿರಿ: ಪ್ರಚೋದನಕಾರಿ ಹೇಳಿಕೆ ಸಮರ್ಥಿಸಿಕೊಂಡ ತಂಗಡಗಿ Image Credit source: FILE PHOTO
ಪ್ರಸನ್ನ ಗಾಂವ್ಕರ್​
| Edited By: Rakesh Nayak Manchi|

Updated on:Mar 26, 2024 | 2:40 PM

Share

ಬೆಂಗಳೂರು, ಮಾ.26: ಮೋದಿ ಮೋದಿ ಎಂದು ಘೋಷಣೆ ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ನಡುವೆ, ತಮ್ಮ ಹೇಳಿಕೆಯನ್ನು ತಂಗಡಗಿ ಸಮರ್ಥಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಷೆಯಲ್ಲಿ ನಾನು ಭಾಷಣ ಮಾಡಿದ್ದೆ. ಬಿಜೆಪಿಯವರು (BJP) ಯುವಕರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದೆ ಎಂದರು.

ಸಂಸ್ಕಾರದ ಬಗ್ಗೆ ನನಗೆ ಚೆನ್ನಾಗಿ ಗೊತ್ತು. ಬಿಜೆಪಿಯ ಭಾಷೆಯಲ್ಲಿ ಉತ್ತರ ಕೊಡುವುದೂ ಗೊತ್ತು. ನನಗೆ ನಮ್ಮ ಪಕ್ಷದ ನಾಯಕರು ಸಂಸ್ಕಾರ ಕಲಿಸಿಕೊಟ್ಟಿದ್ದಾರೆ. ಯುವಕರಿಗೆ ಬಿಜೆಪಿ ದಾರಿ ತಪ್ಪಿಸುತ್ತಿದ್ದಾರೆ ಅಂತ ನಾನು ಕಳಕಳಿಯ ಮಾತನಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಎಷ್ಟು ಸಲ ನೀವು ತ್ರಿಶೂಲ ಚಾಕು ಚೂರಿ ಹಿಡಿದುಕೊಂಡು ಓಡಾಡಿದ್ದೀರಿ ನಿಮ್ಮನ್ನು ಏನು ಮಾಡಬೇಕು ನಾವು ಸತ್ಯ ಹೇಳಿದರೆ ನಿಮಗೆ ಉರಿಯುತ್ತದೆ, ಮೆಣಸಿನಕಾಯಿ ತಿಂದಂತಾಗುತ್ತಾ? ನಾನು ಮೋದಿಯವರ 10 ವರ್ಷದ ಟ್ರ್ಯಾಕ್ ರೆಕಾರ್ಡ್ ಕೇಳಿದ್ದೇನೆ, ತಪ್ಪೇನಿದೆ? ನಾನು ಮಾತಾಡಿದ್ದರಲ್ಲಿ ಯಾವುದಾದರೂ ಅಶ್ಲೀಲ ಪದಗಳಿತ್ತಾ? ವಿರೋಧ ಪಕ್ಷದವನಾಗಿ ನಾನು ನಿಮ್ಮನ್ನು ಹಾಡಿ ಹೊಗಳಬೇಕೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

ನಾನು ಯಾವ ಕೆಟ್ಟ ಪದ ಬಳಕೆ ಮಾಡಿದ್ದೇನೆ ಹೇಳಿ? ಉದ್ಯೋಗ‌ ಕೊಡುವುದರ ಬಗ್ಗೆ ಮಾತ್ರ ಬಿಜೆಪಿ ಉತ್ತರ ಕೊಡಲಿ ನೋಡೋಣ. ನಾನು ಮಾಡಿದ ಭಾಷಣ ಇನ್ನೊಮ್ಮೆ ಕೇಳಿ ಉತ್ತರ ಕೊಡಲಿ. ಭದ್ರಾ ಮೇಲ್ದಂಡೆ ಯೋಜನೆ 5300 ಕೋಟಿಯ ರಾಷ್ಟ್ರೀಯ ಯೋಜನೆ ಅಂತ ಘೋಷಣೆ ಮಾಡಿದ್ದಾರೆ. ಆ ಹಣ ಬಿಡುಗಡೆ ಮಾಡಿದ್ದಾರಾ? ಇದಕ್ಕೆ ಪ್ರಲ್ಹಾದ ಜೋಶಿ, ಬಸವರಾಜ ಬೊಮ್ಮಾಯಿ, ಸಿಟಿ ರವಿ ಉತ್ತರ ನೀಡಲಿ. ನಾವು ಉತ್ತರ ಕರ್ನಾಟಕದವರು ನಮಗೆ ಪುಸ್ತಕದ ಕನ್ನಡ ಮಾತನಾಡಲು ಬರುವುದಿಲ್ಲ. ನಮ್ಮ ಭಾಷೆ ಒರಟು. ಬಿಜೆಪಿಯ ಸಂಸ್ಕಾರ ಏನು ಅಂತ ನನಗೂ ಗೊತ್ತಿದೆ, ಅವರಿಂದ ಕಲಿಬೇಕಿಲ್ಲ ಎಂದರು.

2 ಕೋಟಿ ಉದ್ಯೋಗಗಳನ್ನು ಮೋದಿ ಕೊಟ್ಟಿದ್ದರೆ ನಾನೂ ಮೋದಿಗೆ ಜೈ ಎಂದು ಹೇಳುತ್ತಿದೆ. ಸಂವಿಧಾನದ ಬಗ್ಗೆ ಗೌರವವೇ ಇಲ್ಲದವರು ನಿಮ್ಮ ಬಗ್ಗೆ ಮಾತಾಡಿದ್ದೇನೆ. ಬಸವರಾಜ ಜನ ಪಾಟ ಕಲಿಸ್ತಾರೆ ಅಂತ ಬೊಮ್ಮಾಯಿ ಹೇಳಿದ್ದಾರೆ. ಹೌದು ಜನ ಪಾಠ ಕಲಿಸಿದ್ದಕ್ಕೆ ನಿಮಗೆ 65, ನಮಗೆ 135 ಸ್ಥಾನಗಳು ಬಂದಿವೆ ಎಂದರು.

ಉತ್ತರ ಕರ್ನಾಟಕ ಭಾಷೆಯೊಳಗೆ ನಾನು ಭಾಷಣ ಮಾಡಿದ್ದೆ. ಸಹಜವಾದ ಮಾತುಗಳು ಬಂದಿದೆ. ಒಳ್ಳೆಯ ಗೆಳೆತನದೊಳಗೂ ನಾವು ಬೇರೆಬೇರೆ ಭಾಷೆ ಬಳಸುತ್ತೇವೆ. ಜನ ಏನು ಮಾಡುತ್ತಾರೆ ಅನ್ನೋದು ಜೂನ್ 4 ಕ್ಕೆ ನಿರ್ಧಾರ ಆಗಲಿದೆ ಎಂದರು.

ಸಿಟಿ ರವಿ ಹೇಳಿಕೆಗೆ ತಂಗಡಗಿ ತಿರುಗೇಟು

ಮೋದಿ ಮೋದಿ ಎಂದು ಹೇಳುತ್ತೇವೆ, ನೀವು ನಿಮ್ಮ ಅಪ್ಪನಿಗೆ ಹುಟ್ಟಿದವರಾದರೆ ಬಂದು ಹೊಡೆಯಿರಿ ಎಂಬ ಸಿಟಿ ರವಿ ಹೇಳಿಕೆಗೆ ತಿರುಗೇಟು ಕೊಟ್ಟ ತಂಗಡಗಿ, ಅವರಪ್ಪನಿಗೆ ಹುಟ್ಟಿದರೆ ಅಂತ ಸಿಟಿ ರವಿ ಒಂದು ಮಾತು ಹೇಳಿದ್ದಾರೆ. ನೀವು ಅಪ್ಪನಿಗೆ ಹುಟ್ಟಿದ್ರೆ ಅಂತ ನಾನು ಕೂಡ ಕೆಳಮಟ್ಟದಲ್ಲಿ ಕೇಳಬಹುದು. ಆದರೂ ನಿಮಗೆ ಉತ್ತರ ಬೇಕು ಅಂದರೆ ನನ್ನ ತಾಯಿಯನ್ನು ಕರೆದುಕೊಂಡು ಬಿಜೆಪಿ ಆಫೀಸಿಗೆ ಬರುತ್ತೇನೆ ಕೇಳಿಬಿಡಿ. ಸಿಟಿ ರವಿ ಮಾತಾಡಿದ್ದು ಅಸಂಬಂದ್ದ ಅಲ್ವಾ? ನೀನು ಹುಟ್ಟಿದ್ದು ನಾನು ಹುಟ್ಟಿದ್ದು ನಮ್ಮ ತಾಯಂದಿರಿಗೆ ಮಾತ್ರ ಗೊತ್ತಿರುತ್ತದೆ. ನಾನು ನನ್ನ ತಾಯಿ ಕರೆದುಕೊಂಡು ಬಿಜೆಪಿ ಆಫೀಸಿಗೆ ಬರುತ್ತೇನೆ ಎಂದರು.

ಈಶ್ವರಪ್ಪ ಎಷ್ಟು ಯೋಗ್ಯರು ಅಂತ ಬಿಜೆಪಿಯವರಿಗೆ ಗೊತ್ತಿದೆ. ಅದಕ್ಕೆ ಈಶ್ವರಪ್ಪ ಯೋಗ್ಯತೆಗೆ ಎಂಪಿ ಟಿಕೇಟ್, ಎಂಎಲ್ಎ ಟಿಕೇಟ್ ಸಿಕ್ಕಿಲ್ಲ. ಇವರ ಯೋಗ್ಯತೆ ಬಹಳ ಗೊತ್ತಿದೆ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Tue, 26 March 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ