AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಎಂದು ಹೇಳುವವರ ಕಪಾಳಕ್ಕೆ ಹೊಡೆಯಿರಿ: ಪ್ರಚೋದನಕಾರಿ ಹೇಳಿಕೆ ಸಮರ್ಥಿಸಿಕೊಂಡ ತಂಗಡಗಿ

ಮೋದಿ ಮೋದಿ ಎಂದು ಘೋಷಣೆ ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ನಡುವೆ, ತಮ್ಮ ಹೇಳಿಕೆಯನ್ನು ತಂಗಡಗಿ ಸಮರ್ಥಿಸಿಕೊಂಡಿದ್ದಾರೆ.

ಮೋದಿ ಎಂದು ಹೇಳುವವರ ಕಪಾಳಕ್ಕೆ ಹೊಡೆಯಿರಿ: ಪ್ರಚೋದನಕಾರಿ ಹೇಳಿಕೆ ಸಮರ್ಥಿಸಿಕೊಂಡ ತಂಗಡಗಿ
ಮೋದಿ ಎಂದು ಹೇಳುವವರ ಕಪಾಳಕ್ಕೆ ಹೊಡೆಯಿರಿ: ಪ್ರಚೋದನಕಾರಿ ಹೇಳಿಕೆ ಸಮರ್ಥಿಸಿಕೊಂಡ ತಂಗಡಗಿ Image Credit source: FILE PHOTO
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi|

Updated on:Mar 26, 2024 | 2:40 PM

Share

ಬೆಂಗಳೂರು, ಮಾ.26: ಮೋದಿ ಮೋದಿ ಎಂದು ಘೋಷಣೆ ಕೂಗುವವರ ಕಪಾಳಕ್ಕೆ ಹೊಡೆಯಿರಿ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ನಡುವೆ, ತಮ್ಮ ಹೇಳಿಕೆಯನ್ನು ತಂಗಡಗಿ ಸಮರ್ಥಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಷೆಯಲ್ಲಿ ನಾನು ಭಾಷಣ ಮಾಡಿದ್ದೆ. ಬಿಜೆಪಿಯವರು (BJP) ಯುವಕರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದೆ ಎಂದರು.

ಸಂಸ್ಕಾರದ ಬಗ್ಗೆ ನನಗೆ ಚೆನ್ನಾಗಿ ಗೊತ್ತು. ಬಿಜೆಪಿಯ ಭಾಷೆಯಲ್ಲಿ ಉತ್ತರ ಕೊಡುವುದೂ ಗೊತ್ತು. ನನಗೆ ನಮ್ಮ ಪಕ್ಷದ ನಾಯಕರು ಸಂಸ್ಕಾರ ಕಲಿಸಿಕೊಟ್ಟಿದ್ದಾರೆ. ಯುವಕರಿಗೆ ಬಿಜೆಪಿ ದಾರಿ ತಪ್ಪಿಸುತ್ತಿದ್ದಾರೆ ಅಂತ ನಾನು ಕಳಕಳಿಯ ಮಾತನಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಎಷ್ಟು ಸಲ ನೀವು ತ್ರಿಶೂಲ ಚಾಕು ಚೂರಿ ಹಿಡಿದುಕೊಂಡು ಓಡಾಡಿದ್ದೀರಿ ನಿಮ್ಮನ್ನು ಏನು ಮಾಡಬೇಕು ನಾವು ಸತ್ಯ ಹೇಳಿದರೆ ನಿಮಗೆ ಉರಿಯುತ್ತದೆ, ಮೆಣಸಿನಕಾಯಿ ತಿಂದಂತಾಗುತ್ತಾ? ನಾನು ಮೋದಿಯವರ 10 ವರ್ಷದ ಟ್ರ್ಯಾಕ್ ರೆಕಾರ್ಡ್ ಕೇಳಿದ್ದೇನೆ, ತಪ್ಪೇನಿದೆ? ನಾನು ಮಾತಾಡಿದ್ದರಲ್ಲಿ ಯಾವುದಾದರೂ ಅಶ್ಲೀಲ ಪದಗಳಿತ್ತಾ? ವಿರೋಧ ಪಕ್ಷದವನಾಗಿ ನಾನು ನಿಮ್ಮನ್ನು ಹಾಡಿ ಹೊಗಳಬೇಕೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

ನಾನು ಯಾವ ಕೆಟ್ಟ ಪದ ಬಳಕೆ ಮಾಡಿದ್ದೇನೆ ಹೇಳಿ? ಉದ್ಯೋಗ‌ ಕೊಡುವುದರ ಬಗ್ಗೆ ಮಾತ್ರ ಬಿಜೆಪಿ ಉತ್ತರ ಕೊಡಲಿ ನೋಡೋಣ. ನಾನು ಮಾಡಿದ ಭಾಷಣ ಇನ್ನೊಮ್ಮೆ ಕೇಳಿ ಉತ್ತರ ಕೊಡಲಿ. ಭದ್ರಾ ಮೇಲ್ದಂಡೆ ಯೋಜನೆ 5300 ಕೋಟಿಯ ರಾಷ್ಟ್ರೀಯ ಯೋಜನೆ ಅಂತ ಘೋಷಣೆ ಮಾಡಿದ್ದಾರೆ. ಆ ಹಣ ಬಿಡುಗಡೆ ಮಾಡಿದ್ದಾರಾ? ಇದಕ್ಕೆ ಪ್ರಲ್ಹಾದ ಜೋಶಿ, ಬಸವರಾಜ ಬೊಮ್ಮಾಯಿ, ಸಿಟಿ ರವಿ ಉತ್ತರ ನೀಡಲಿ. ನಾವು ಉತ್ತರ ಕರ್ನಾಟಕದವರು ನಮಗೆ ಪುಸ್ತಕದ ಕನ್ನಡ ಮಾತನಾಡಲು ಬರುವುದಿಲ್ಲ. ನಮ್ಮ ಭಾಷೆ ಒರಟು. ಬಿಜೆಪಿಯ ಸಂಸ್ಕಾರ ಏನು ಅಂತ ನನಗೂ ಗೊತ್ತಿದೆ, ಅವರಿಂದ ಕಲಿಬೇಕಿಲ್ಲ ಎಂದರು.

2 ಕೋಟಿ ಉದ್ಯೋಗಗಳನ್ನು ಮೋದಿ ಕೊಟ್ಟಿದ್ದರೆ ನಾನೂ ಮೋದಿಗೆ ಜೈ ಎಂದು ಹೇಳುತ್ತಿದೆ. ಸಂವಿಧಾನದ ಬಗ್ಗೆ ಗೌರವವೇ ಇಲ್ಲದವರು ನಿಮ್ಮ ಬಗ್ಗೆ ಮಾತಾಡಿದ್ದೇನೆ. ಬಸವರಾಜ ಜನ ಪಾಟ ಕಲಿಸ್ತಾರೆ ಅಂತ ಬೊಮ್ಮಾಯಿ ಹೇಳಿದ್ದಾರೆ. ಹೌದು ಜನ ಪಾಠ ಕಲಿಸಿದ್ದಕ್ಕೆ ನಿಮಗೆ 65, ನಮಗೆ 135 ಸ್ಥಾನಗಳು ಬಂದಿವೆ ಎಂದರು.

ಉತ್ತರ ಕರ್ನಾಟಕ ಭಾಷೆಯೊಳಗೆ ನಾನು ಭಾಷಣ ಮಾಡಿದ್ದೆ. ಸಹಜವಾದ ಮಾತುಗಳು ಬಂದಿದೆ. ಒಳ್ಳೆಯ ಗೆಳೆತನದೊಳಗೂ ನಾವು ಬೇರೆಬೇರೆ ಭಾಷೆ ಬಳಸುತ್ತೇವೆ. ಜನ ಏನು ಮಾಡುತ್ತಾರೆ ಅನ್ನೋದು ಜೂನ್ 4 ಕ್ಕೆ ನಿರ್ಧಾರ ಆಗಲಿದೆ ಎಂದರು.

ಸಿಟಿ ರವಿ ಹೇಳಿಕೆಗೆ ತಂಗಡಗಿ ತಿರುಗೇಟು

ಮೋದಿ ಮೋದಿ ಎಂದು ಹೇಳುತ್ತೇವೆ, ನೀವು ನಿಮ್ಮ ಅಪ್ಪನಿಗೆ ಹುಟ್ಟಿದವರಾದರೆ ಬಂದು ಹೊಡೆಯಿರಿ ಎಂಬ ಸಿಟಿ ರವಿ ಹೇಳಿಕೆಗೆ ತಿರುಗೇಟು ಕೊಟ್ಟ ತಂಗಡಗಿ, ಅವರಪ್ಪನಿಗೆ ಹುಟ್ಟಿದರೆ ಅಂತ ಸಿಟಿ ರವಿ ಒಂದು ಮಾತು ಹೇಳಿದ್ದಾರೆ. ನೀವು ಅಪ್ಪನಿಗೆ ಹುಟ್ಟಿದ್ರೆ ಅಂತ ನಾನು ಕೂಡ ಕೆಳಮಟ್ಟದಲ್ಲಿ ಕೇಳಬಹುದು. ಆದರೂ ನಿಮಗೆ ಉತ್ತರ ಬೇಕು ಅಂದರೆ ನನ್ನ ತಾಯಿಯನ್ನು ಕರೆದುಕೊಂಡು ಬಿಜೆಪಿ ಆಫೀಸಿಗೆ ಬರುತ್ತೇನೆ ಕೇಳಿಬಿಡಿ. ಸಿಟಿ ರವಿ ಮಾತಾಡಿದ್ದು ಅಸಂಬಂದ್ದ ಅಲ್ವಾ? ನೀನು ಹುಟ್ಟಿದ್ದು ನಾನು ಹುಟ್ಟಿದ್ದು ನಮ್ಮ ತಾಯಂದಿರಿಗೆ ಮಾತ್ರ ಗೊತ್ತಿರುತ್ತದೆ. ನಾನು ನನ್ನ ತಾಯಿ ಕರೆದುಕೊಂಡು ಬಿಜೆಪಿ ಆಫೀಸಿಗೆ ಬರುತ್ತೇನೆ ಎಂದರು.

ಈಶ್ವರಪ್ಪ ಎಷ್ಟು ಯೋಗ್ಯರು ಅಂತ ಬಿಜೆಪಿಯವರಿಗೆ ಗೊತ್ತಿದೆ. ಅದಕ್ಕೆ ಈಶ್ವರಪ್ಪ ಯೋಗ್ಯತೆಗೆ ಎಂಪಿ ಟಿಕೇಟ್, ಎಂಎಲ್ಎ ಟಿಕೇಟ್ ಸಿಕ್ಕಿಲ್ಲ. ಇವರ ಯೋಗ್ಯತೆ ಬಹಳ ಗೊತ್ತಿದೆ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Tue, 26 March 24

ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ