AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನಿಗೆ ಶಾಕ್; ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದ್ದು, ಇದರ ಬೆನ್ನಲ್ಲೇ ಇದೀಗ ಯುವ ಕಾಂಗ್ರೆಸ್ ನಾಯಕನಿಗೆ ಎಸ್​ಐಟಿ(SIT) ಅಧಿಕಾರಿಗಳು ಶಾಕ್ ಕೊಟ್ಟಿದೆ. ಇಂದು(ಜೂ.12) ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Nalapad) ಅವರನ್ನು ವಿಚಾರಣೆಗೆ ಮಾಡಲಾಗಿದೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನಿಗೆ ಶಾಕ್; ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್
ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್​ಗೆ ಶಾಕ್​
ಕಿರಣ ಹೆಚ್​. ವಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jun 12, 2024 | 6:50 PM

Share

ಬೆಂಗಳೂರು, ಜೂ.12: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕನಿಗೆ ಎಸ್​ಐಟಿ(SIT) ಅಧಿಕಾರಿಗಳು ಶಾಕ್ ಕೊಟ್ಟಿದ್ದು, ಇಂದು(ಜೂ.12) ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ (Mohammed Nalapad) ಅವರನ್ನು ವಿಚಾರಣೆಗೆ ಮಾಡಲಾಗಿದೆ. ಬಿಟ್​ಕಾಯಿನ್ ಕೇಸ್​ನ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತನಾಗಿದ್ದ. ಈ ಹಿನ್ನಲೆ ಬೆಂಗಳೂರಿನ ಕಾಟನ್​ಪೇಟೆ ಹ್ಯಾಕಿಂಗ್ ಕೇಸ್​ನಲ್ಲಿ ಶ್ರೀಕಿ ಜೊತೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ವಿಚಾರಣೆ ನಡೆಸಲಾಗಿದೆ.

ಎಸ್​ಐಟಿ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ

ಇದೇ ಜೂ.06 ರಂದು ಎಸ್​ಐಟಿ ಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಕೆಜಿ ನಗರ ಡ್ರಗ್ಸ್ ಕೇಸ್​ನಲ್ಲಿ ಶ್ರೀಖಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಸೇರಿ ಒಟ್ಟು 6 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಮೂರು ಎಫ್​ಐಆರ್​ಗಳನ್ನು ಎಸ್​ಐಟಿ ತನಿಖೆ ಮಾಡುತ್ತಿತ್ತು. ಬಿಟ್ ಕಾಯಿನ್ ಹಗರಣದ ಮುನ್ನ ಡ್ರಗ್ಸ್ ಕೇಸ್ ಬಂದಿದ್ದ ಹಿನ್ನಲೆ ಆ ಕುರಿತು ತನಿಖೆ ನಡೆಸಿದಾಗ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಜೂ.06 ರಂದು ಎಸ್​ಐಟಿ ಮೊದಲನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು.

ಇದನ್ನೂ ಓದಿ:ಬಿಟ್ ಕಾಯಿನ್ ಪ್ರಕರಣದ ಆರೋಪಿಗಳ ವಿರುದ್ದ ಕೋಕಾ ಅಸ್ತ್ರ ಬಳಕೆ; ಏನಿದು ಕಾಯ್ದೆ?

ಇನ್ನು ಇದರ ಜೊತೆಗೆ 2017ರಲ್ಲಿ ತುಮಕೂರು ಸೆನ್ ಠಾಣೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದ ಹಿನ್ನಲೆ ಇತ್ತೀಚೆಗಷ್ಟೇ ಶ್ರೀಕಿ ಅಂಡ್ ಟೀಮ್ ಮೇಲೆ ಕೋಕಾ ಕಾಯಿದೆ ಜಾರಿ ಮಾಡಲಾಗಿತ್ತು. ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲಾಗಲಿದೆ. ಈ ಕಾಯ್ದೆಯಲ್ಲಿ ಕನಿಷ್ಠ ಒಂದು ವರ್ಷ ಅಪರಾಧಿಗಳಿಗೆ ಜಾಮೀನು ಸಿಗುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Wed, 12 June 24

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ