AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರಿಗೆ ಮತ್ತೊಂದು ಶಾಕ್​: ಬಿಎಂಟಿಸಿ ಬಸ್ ಪಾಸ್​​ ದರ ಏರಿಕೆ!

ಕರ್ನಾಟಕ ಸರ್ಕಾರವು ಹೊಸ ವರ್ಷದ ಆರಂಭದಲ್ಲಿಯೇ ರಾಜ್ಯದ ಬಸ್ ಟಿಕೆಟ್ ದರಗಳನ್ನು ಶೇಕಡಾ 15ರಷ್ಟು ಏರಿಕೆ ಮಾಡಿತ್ತು. KSRTC, BMTC, NWKRTC ಮತ್ತು KKRTC ಬಸ್‌ಗಳ ಟಿಕೆಟ್ ದರ ಹೆಚ್ಚಿಗೆ ಮಾಡಿತ್ತು. ಇದರ ಬೆನ್ನಲ್ಲೇ ಸಾರಿಗೆ ಇಲಾಖೆ ಪ್ರಯಾಣಿಕರಿಗೆ ಮತ್ತೊಂದು ಶಾಕ್​ ನೀಡಿದೆ. ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಬಿಸಿ ತಟ್ಟಿದೆ.

ಪ್ರಯಾಣಿಕರಿಗೆ ಮತ್ತೊಂದು ಶಾಕ್​: ಬಿಎಂಟಿಸಿ ಬಸ್ ಪಾಸ್​​ ದರ ಏರಿಕೆ!
ಬಿಎಂಟಿಸಿ ಬಸ್​ ಪಾಸ್​​
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jan 09, 2025 | 7:53 AM

Share

ಬೆಂಗಳೂರು, ಜನವರಿ 09: ಹೊಸ ವರ್ಷಕ್ಕೆ (New Year) ಹೊರೆ ​ಎಂಬಂತೆ ಕರ್ನಾಟಕ ಸಾರಿಗೆ ಇಲಾಖೆ (Karnataka Transport Department) ಕೆಲ ದಿನಗಳ ಹಿಂದೆಷ್ಟೇ ನಾಲ್ಕೂ ನಿಗಮಗಳ ಬಸ್​ ಟಿಕೆಟ್​ ದರ ಶೇ 15 ರಷ್ಟು ಏರಿಕೆ (Karnataka Bus Ticket Price Hike) ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಪಾಸ್​​ ದರವನ್ನೂ ಏರಿಕೆ ಮಾಡಿದೆ. ದರ ಏರಿಕೆ ಬಿಸಿ ಪ್ರಯಾಣಿಕರಿಗೆ ತಟ್ಟಿದೆ. ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಪಾಸ್​ ದರ ಏರಿಕೆ ಮಾಡಿ ಬಿಎಂಟಿಸಿ ಇಂದಿನಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ಬಸ್​​ ಪಾಸ್​ ದರ ಏರಿಕೆ ಪಟ್ಟಿ

  • ಸಾಮಾನ್ಯ ದಿನದ ಪಾಸು 70 ರೂಪಾಯಿಯಿಂದ 80 ರೂ. ಏರಿಕೆ
  • ವಾರದ ಪಾಸು 300 ರೂಪಾಯುಯಿಂದ 350 ರೂ. ಏರಿಕೆ
  • ಮಾಸಿಕ ಪಾಸು 1050 ರೂಪಾಯಿಯಿಂದ 1200 ರೂ. ಏರಿಕೆ
  • ನೈಸ್ ರಸ್ತೆಯ ಟೋಲ್ ಶುಲ್ಕ ಸೇರಿ 2200 ರೂ. 2350 ರೂ. ಏರಿಕೆಯಾಗಿದೆ.
  • ವಜ್ರ ಬಸ್ಸಿನ ದಿನದ ಪಾಸು 120 ರೂಪಾಯಿಯಿಂದ 140 ರೂ. ಏರಿಕೆ
  • ವಜ್ರ ಬಸ್ಸಿನ ಮಾಸಿಕ ಪಾಸು 1800 ರೂಪಾಯಿಯಿಂದ 2000 ರೂ. ಏರಿಕೆ
  • ವಾಯುವಜ್ರ ಬಸ್ಸಿನ – 3755 ರಿಂದ 4000 ರೂ ಏರಿಕೆ
  • ವಿದ್ಯಾರ್ಥಿ ವಜ್ರ ಮಾಸಿಕ ಪಾಸು- 1200 ರಿಂದ 1400 ರೂ ಗೆ ಏರಿಕೆಯಾಗಿದೆ.

ಸರ್ಕಾರಿ ಬಸ್​ಗಳ ಟಿಕೆಟ್​ ದರ ಶೇ 15 ರಷ್ಟು ಅಂದರೆ 7 ರೂಪಾಯಿಂದ 115 ರೂ.ವರೆಗೆ ಏರಿಕೆಯಾಗಿದ್ದು, ಸಾರ್ವಜನಿಕರ ಜೇಬು ಸುಡುತ್ತಿದೆ.

ಬಿಎಂಟಿಸಿ ಬಸ್​ಗಳ ಹಳೆಯ ಮತ್ತು ಹೊಸ ಟಿಕೆಟ್​​ ದರ ಪಟ್ಟಿ

  • ಮೆಜೆಸ್ಟಿಕ್-ಜೆ.ಪಿ.ನಗರ 20 ರೂ. ಇತ್ತು, ಹೊಸ ದರ 24 ರೂ.
  • ಮೆಜೆಸ್ಟಿಕ್-ನಂದಿನಿ ಲೇಔಟ್ 25 ರೂ. ಇತ್ತು, ಹೊಸ ದರ 28 ರೂ.
  • ಮೆಜೆಸ್ಟಿಕ್-ಯಶವಂತಪುರ ರೈಲ್ವೆ ಸ್ಟೇಷನ್ 20 ರೂ. ಇತ್ತು, ಹೊಸ ದರ 23 ರೂ.
  • ಮೆಜೆಸ್ಟಿಕ್-ಪೀಣ್ಯ ಎರಡನೇ ಹಂತ 25 ರೂ. ಇತ್ತು, ಹೊಸ ದರ 28 ರೂ.
  • ಮೆಜೆಸ್ಟಿಕ್-ಅತ್ತಿಬೆಲೆ 25 ರೂ. ಇತ್ತು, ಹೊಸ ದರ 30 ರೂ.
  • ಮೆಜೆಸ್ಟಿಕ್-ವಿದ್ಯಾರಣ್ಯಪುರ 25 ರೂ. ಇತ್ತು, ಹೊಸ ದರ 28 ರೂ.
  • ಮೆಜೆಸ್ಟಿಕ್-ದೊಡ್ಡಬಳ್ಳಾಪುರ 25 ರೂ. ಇತ್ತು, ಹೊಸ ದರ 30 ರೂ.
  • ಮೆಜೆಸ್ಟಿಕ್-ಬಿಇಎಂಎಲ್ 5ನೇ ಹಂತ 20 ರೂ. ಇತ್ತು, ಹೊಸ ದರ 24 ರೂ.
  • ಮೆಜೆಸ್ಟಿಕ್-ಕುಮಾರಸ್ವಾಮಿ ಲೇಔಟ್ 25 ರೂ. ಇತ್ತು, ಹೊಸ ದರ 28 ರೂ.
  • ಮೆಜೆಸ್ಟಿಕ್-ಬಿಟಿಎಂ ಲೇಔಟ್ 25 ರೂ. ಇತ್ತು, ಹೊಸ ದರ 28 ರೂ.

ಟಿಕೆಟ್​ ದರ ಏರಿಕೆಗೆ ಸರ್ಕಾರದ ಸ್ಪಷ್ಟೀಕರಣ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2015ರಲ್ಲಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳಲ್ಲಿ 2020ರಲ್ಲಿ ಪ್ರಯಾಣದ ದರ ಪರಿಷ್ಕರಣೆ ಮಾಡಲಾಗಿತ್ತು. ಪ್ರಯಾಣ ದರ ಪರಿಷ್ಕರಣೆಗಾಗಿ ನಿಗಮದ ಸಿಬ್ಬಂದಿ ವೇತನ ವೆಚ್ಚ, ಇಂಧನ ವೆಚ್ಚ ಹಾಗೂ ನಿರ್ವಹಣಾ ವೆಚ್ಚವನ್ನು ಪರಿಗಣಿಸಲಾಗುತ್ತಿದೆ. ಪ್ರಸ್ತುತ 9.56 ಕೋಟಿ ರೂ. ಮೊತ್ತವನ್ನು ಹೆಚ್ಚುವರಿಯಾಗಿ ವೆಚ್ಚ ಮಾಡುತ್ತಿದ್ದು, ಸಿಬ್ಬಂದಿ ವೆಚ್ಚ ಸೇರಿ ವಾರ್ಷಿಕವಾಗಿ 3650.00 ಕೋಟಿ ರೂ. ನಿಗಮಕ್ಕೆ ಹೊರೆಯಾಗುತ್ತಿದೆ. ಆದ್ದರಿಂದ, ಶೇ 15ರಷ್ಟು ಪ್ರಯಾಣದ ದರ ಹೆಚ್ಚಳ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿತ್ತು.

ಸಚಿವರ ಸ್ಪಷ್ಟನೆ

ರಾಜ್ಯ ಸರ್ಕಾರಕ್ಕೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಮಾಡುವುದಕ್ಕೆ ಇಷ್ಟ ಇರಲಿಲ್ಲ. ಪ್ರತಿನಿತ್ಯ ವೆಚ್ಚ ಜಾಸ್ತಿ ಆಗುತ್ತಿದೆ. ಇಷ್ಟ ಕಷ್ಟದಲ್ಲಿ ಹೊಸ ಬಸ್ ಕೊಟ್ಟಿದ್ದೀವಿ. 1000 ನೇಮಕಾತಿ ಮಾಡಿದ್ದೀವಿ. ಹೊಸ ನಿಯಮಗಳನ್ನು ಆರೋಗ್ಯ ವಿಮೆ ಮಾಡುತ್ತಿದ್ದೇವೆ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದ್ದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:51 am, Thu, 9 January 25

Follow Us
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ