AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬಹುತೇಕ ಕೆರೆಗಳ ನೀರಲ್ಲಿ ಯುರೇನಿಯಂ ಪತ್ತೆ: ಆತಂಕಕಾರಿ ಸತ್ಯ ಬಿಚ್ಚಿಟ್ಟ ಐಐಎಸ್ಸಿ ವರದಿ

ಸಿಲಿಕಾನ್​​ ಸಿಟಿ ಬೆಂಗಳೂರಿನ ನಿವಾಸಿಗಳಿಗೆ ಗಂಭೀರ ಎಚ್ಚರಿಕೆಯೊಂದನ್ನು ತಜ್ಞರು ನೀಡಿದ್ದು, ನಗರದ ಬಹುತೇಕ ಕೆರೆಗಳ ನೀರು ಕಲುಷಿತವಾಗಿರುವ ಕಾರಣ ಅವುಗಳ ಅಕ್ಕಪಕ್ಕವಿರುವ ಇತರ ಜಲಮೂಲಗಳೂ ಮಲಿನಗೊಳ್ಳುತ್ತಿವೆ ಎಂದು ತಿಳಿಸಿದ್ದಾರೆ. ಸಾವಿರಾರು ಮೀನುಗಳು ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನೆಲೆ ಪ್ರಮುಖ ಕೆರೆಗಳ ನೀರನ್ನು ಪರೀಕ್ಷಿಸಿದಾಗ ಅವುಗಳಲ್ಲಿ ಯುರೇನಿಯಂ ಪತ್ತೆಯಾಗಿದೆಯಂತೆ. ಅಷ್ಟಕ್ಕೂ ಯಾವೆಲ್ಲ ಕೆರೆಗಳ ನೀರನ್ನು ಪರೀಕ್ಷಿಸಲಾಗಿದೆ ಎಂಬ ಕಂಪ್ಲೀಟ್​​​​ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಬಹುತೇಕ ಕೆರೆಗಳ ನೀರಲ್ಲಿ ಯುರೇನಿಯಂ ಪತ್ತೆ: ಆತಂಕಕಾರಿ ಸತ್ಯ ಬಿಚ್ಚಿಟ್ಟ ಐಐಎಸ್ಸಿ ವರದಿ
ಸಾಂದರ್ಭಿಕ ಚಿತ್ರImage Credit source: Google
ಕಿರಣ್​ ಸೂರ್ಯ
| Edited By: |

Updated on: May 31, 2026 | 7:27 AM

Share

ಬೆಂಗಳೂರು, ಮೇ 31: ನಗರದ ಬಹುತೇಕ ಕೆರೆಗಳಲ್ಲಿ ಇತ್ತೀಚೆಗೆ ಸಾವಿರಾರು ಮೀನುಗಳು ನಿಗೂಢವಾಗಿ ಮೃತಪಟ್ಟಿದ್ದವು. ಈ ಹಿನ್ನೆಲೆ ಐಐಎಸ್ಸಿ ತಜ್ಞರು ಕೆರೆಗಳ ನೀರನ್ನು ಪರೀಕ್ಷೆ ಮಾಡಿದ್ದು, ಆಘಾತಕಾರಿ ಸತ್ಯವೊಂದನ್ನು ಬಯಲು ಮಾಡಿದ್ದಾರೆ.  ಬೆಂಗಳೂರಿನ (Bengaluru) ಅಂತರ್ಜಲ ಕಲುಷಿತಗೊಂಡಿರುವ ಬಗ್ಗೆ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದು, ನಗರದ ಬಹುತೇಕ ಕೆರೆಗಳ ನೀರಲ್ಲಿ ಯುರೇನಿಯಂ ಪತ್ತೆಯಾಗಿದೆಯಂತೆ. ಈ ಕೆರಗಳ ನೀರು ಇತರ ಜಲ ಮೂಲಗಳಿಗೂ ಸೇರುತ್ತಿರುವ ಕಾರಣ ಜನರು ಕುಡಿಯುತ್ತಿರೋದು ನೀರಲ್ಲ ವಿಷ ಎಂಬುದೀಗ ಬಹಿರಂಗಗೊಂಡಿದೆ.

ಮುಖ್ಯಾಂಶಗಳು

  • ತೀವ್ರ ಕಲುಷಿತಗೊಂಡಿರುವ ಬೆಂಗಳೂರು ನಗರದ ಅಂತರ್ಜಲ
  • ನಗರದ ಬಹುತೇಕ ಕೆರೆಗಳ ನೀರಲ್ಲಿ ವಿಷಕಾರಿ ಅಂಶ ಪತ್ತೆ
  • ಐಐಎಸ್ಸಿ ತಜ್ಞರ ವರದಿಯಲ್ಲಿ ಶಾಕಿಂಗ್​​ ವಿಚಾರ ಬಹಿರಂಗ

ಯಾವೆಲ್ಲ ಕೆರೆಗಳ ನೀರು ಪರೀಕ್ಷೆ?

ನಗರದ ಸಾಕಷ್ಟು ಕೆರೆಗಳಲ್ಲಿ ನೀರು ಬಹಳ ಕಲುಷಿತವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದ ಹಿನ್ನೆಲೆ ಜಕ್ಕೂರು, ಯಲಹಂಕ, ಲಕ್ಷ್ಮೀಪುರ, ರಾಮಸಂದ್ರ, ಹೆಸರಘಟ್ಟ, ಹಲಸೂರು, ಮಡಿವಾಳ, ವರ್ತೂರು, ಘಟ್ಟಹಳ್ಳಿ ಕೆರೆಯ ನೀರನ್ನು ಐಐಎಸ್ಸಿ ತಜ್ಞರು ಪರೀಕ್ಷಿಸಿದ್ದರು. ಈ ವರದಿಯಲ್ಲಿ ನಗರದ ಕೆರೆಗಳ ನೀರು ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿದ್ದು, ಹೆವಿ ಮೆಟಲ್‌ ಯುರೇನಿಯಂ ನೀರಲ್ಲಿ ಸೇರಿಕೊಂಡಿವೆ ಎಂಬುದು ದೃಢವಾಗಿದೆಯಂತೆ.

ಇದನ್ನೂ ಓದಿ: ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ; ಅಲೋಕ್ ಕುಮಾರ್ ಎಂಟ್ರಿ ಬೆನ್ನಲ್ಲೇ ಎಫ್‌ಐಆರ್

ನೀರು ಮಲಿನಗೊಳ್ಳಲು ಕಾರಣ ಏನು?

ಕೊಳಚೆ ನೀರರನ್ನು ಸಂಸ್ಕರಣೆ ಮಾಡದೆ ನೇರವಾಗಿ ಕೆರೆಗಳಿಗೆ ಬಿಡುತ್ತಿರುವುದೇ ವಿಷಕಾರಿ ಅಂಶಗಳ ಪತ್ತೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಹೀಗಾಗಿ ಕೆರೆಗಳ ನೀರಲ್ಲಿದ್ದ ಸಾವಿರಾರು ಮೀನುಗಳು ಪ್ರಾಣ ಕಳೆದುಕೊಂಡಿವೆ. ಇನ್ನು ತಜ್ಞರು ನೀರಿನ ಪರೀಕ್ಷೆ ನಡೆಸಿರುವ ಕೆರೆಗಳ ಪೈಕಿ ವರ್ತೂರು ಕೆರೆ ಅತಿಹೆಚ್ಚು ಕಲುಷಿತಗೊಂಡಿದೆಯಂತೆ. ಕೆರೆಗಳ ನೀರು ಮಲಿನಗೊಂಡ ಪರಿಣಾಮ ಇವುಗಳ ಅಕ್ಕಪಕ್ಕದ ಬೋರ್ವೆಲ್​​ಗಳ ನೀರಲ್ಲಿಯೂ ವಿಷಕಾರಿ ಅಂಶಗಳು ಪತ್ತೆಯಾಗುತ್ತಿವೆ ಎನ್ನಲಾಗಿದೆ. ಈ ನೀರು ಬಳಕೆ ಮಾಡುವುದರಿಂದ ಅನಾರೋಗ್ಯದ ಸಮಸ್ಯೆ ಎದುರಾಗುವ ಸಾಧ್ಯತೆ ಬಗ್ಗೆಯೂ ಎಚ್ಚರಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ