ಶಾಕಿಂಗ್! ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್ ಬಳಸುತ್ತಿರುವುದು ದೃಢ

ರಾಜ್ಯ-ರಾಜಧಾನಿಯಲ್ಲಿ‌ ದಿನದಿಂದ‌‌ ದಿನಕ್ಕೆ ಆಹಾರ ಪದಾರ್ಥಗಳಲ್ಲಿ‌ ಕಲಬೆರಕೆ ಮಾಡುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಇದೀಗ ಅದರ ಸಾಲಿಗೆ ಬೆಲ್ಲವು ಸೇರಿಕೊಂಡಿದೆ. ಇನ್ಮುಂದೆ ಬೆಲ್ಲವನ್ನ ಬಳಕೆ ಮಾಡುವವರು ಒಂದು ಬಾರಿ ಯೋಚನೆ ಮಾಡಬೇಕಾದ ಅನಿವಾರ್ಯತೆ ಶುರುವಾಗಿದೆ. ಆ ಕುರಿತು ಒಂದು ಸ್ಟೋರಿ ಇಲ್ಲಿದೆ.

ಶಾಕಿಂಗ್! ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್ ಬಳಸುತ್ತಿರುವುದು ದೃಢ
ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್ ಬಳಸುತ್ತಿರುವುದು ದೃಢ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 24, 2024 | 10:48 PM

ಬೆಂಗಳೂರು, ಸೆ.24: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ‌ ಆಹಾರ ಪದಾರ್ಥಗಳಲ್ಲಿ‌ ಕೆಮಿಕಲ್ ಬಣ್ಣ(Chemical color) ಬಳಸುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ನಾವು ಸೇವಿಸುವ ಆಹಾರ ಆರೋಗ್ಯಕ್ಕೆ ಒಳ್ಳೆಯದಾ, ಇಲ್ಲವಾ ಎನ್ನುವ ಬಗ್ಗೆ ಅನುಮಾನ ಶುರುವಾಗಿದೆ. ಹೌದು, ಇಷ್ಟು ದಿನ ಪಾನಿಪುರಿ, ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್ ಹಾಗೂ ಕಾಫಿಪುಡಿಯಲ್ಲಿ ಕೆಮಿಕಲ್ ಬಳಸುತ್ತಿರುವುದು ಧೃಡವಾಗಿತ್ತು. ಈ ಕುರಿತಾಗಿ ಆಹಾರ ಗುಣಮಟ್ಟ ಇಲಾಖೆ ಅಗತ್ಯ ಕ್ರಮಗಳನ್ನ ಕೂಡ ತೆಗೆದುಕೊಂಡಿದೆ.‌ ಇದರ ಬೆನ್ನಲ್ಲೇ ಇದೀಗ ಬೆಲ್ಲದಲ್ಲಿಯೂ ಕೂಡ ಕಲಬೆರಕೆ ಬಣ್ಣ ಬಳಸಿರುವುದು ದೃಢವಾಗಿದೆ.

ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್ ಬಳಸುತ್ತಿರುವುದು ದೃಢ

ಹೌದು, ಸಧ್ಯ ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ ಮಾಡಿದ್ದು ಖಚಿತವಾಗಿದ್ದು, ಇದರ ಬೆನ್ನಲ್ಲೇ ಬೆಲ್ಲದಲ್ಲಿಯೂ ಕಲಬೆರಕೆಯ ಕೃತಕ ಬಣ್ಣ ಬಳಕೆ ಮಾಡಿರುವುದು ದೃಢವಾಗಿವಾಗಿದೆ. ಕೆಲ ದಿನಗಳ ಹಿಂದೆ ಆಹಾರ ಹಾಗೂ ಗುಣಮಟ್ಟ ಇಲಾಖೆ ವಿವಿಧ ಬೆಲ್ಲವನ್ನ ಸಂಗ್ರಹಿಸಿ ಬೆಲ್ಲವನ್ನ ಲ್ಯಾಬ್ ರಿಪೋರ್ಟ್​ಗೆ ಕಳುಹಿಸಲಾಗಿತ್ತು. ಈ ವೇಳೆ ಬೆಲ್ಲದಲ್ಲಿ ಕೃತಕ ಬಣ್ಣ ಬಳಕೆ ಮಾಡಿರುವುದು ಪತ್ತೆಯಾಗಿದೆ. ಇನ್ನು ಸದರಿ ಬೆಲ್ಲವನ್ನ ಉಪಯೋಗಿಸಿದರೆ ಆರೋಗ್ಯದ ಮೇಲೆ ಮಾರಕ ಪರಿಣಾಮಗಳು ಉಂಟಾಗಲಿದೆಯಂತೆ.‌

ಇದನ್ನೂ ಓದಿ:ಕೃತಕ ಬಣ್ಣ, ರಾಸಾಯನಿಕ ಬಳಸುವ ಹೋಟೆಲ್​ಗಳಿಗೆ ಕಾದಿದೆ ಸಂಕಷ್ಟ: ಆಹಾರ ಇಲಾಖೆಯಿಂದ ವಿಶೇಷ ಕಾರ್ಯಾಚರಣೆ

ಬೆಲ್ಲವನ್ನ ಬಳಸುವಾಗ ಪರಿಶೀಲಿಸಿ ಬಳಸಲು ಸೂಚನೆ

ದೇವಸ್ಥಾನಗಳಲ್ಲಿ ಹೆಚ್ಚಾಗಿ ಪ್ರಸಾದಕ್ಕೆ ಬೆಲ್ಲ ಬಳಕೆಯಾಗಲಿದ್ದು, ಹೀಗಾಗಿ ಬೆಲ್ಲವನ್ನ ಬಳಸುವಾಗ ಪರಿಶೀಲಿಸಿ ಬಳಸಲು ಮುಜರಾಯಿ ಇಲಾಖೆ ಧಾರ್ಮಿಕ ಹಾಗೂ ದತ್ತಿ ಇಲಾಖೆ ಆಯುಕ್ತರಿಗೆ ಆಹಾರ ಸುರಕ್ಷತೆ ಆಯುಕ್ತರು ಪತ್ರ ಬರೆದಿದ್ದಾರೆ. ಇನ್ನು ಈ ಕುರಿತು ಮಾತನಾಡಿದ ಸಾರ್ವಜನಿಕರು, ‘ಬೆಲ್ಲದಲ್ಲಿ ಕಲಬೆರಕೆಯ ಬಣ್ಣ ಬಳಸಿದ್ದಾರೆ ಎಂದು ಹೇಳುತ್ತಿದ್ದಾರೆ.‌ ಬೆಲ್ಲವನ್ನ ಸಿಹಿ ಅಡುಗೆಗಳಿಗೆ ಹೆಚ್ಚಾಗಿ ಬಳಸುತ್ತೇವೆ. ಆದ್ರೆ, ಇದರಲ್ಲೂ ಬಣ್ಣ ಬಳಕೆ ಮಾಡಿದರೆ ಹೇಗೆ ಬಳಸೋದು.‌ ಈ ಕುರಿತಾಗಿ ಸರ್ಕಾರ ಹಾಗೂ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳುತ್ತಿದ್ದಾರೆ.

ಒಟ್ಟಿನಲ್ಲಿ, ದಿನದಿಂದ ದಿನಕ್ಕೆ ಕಲಬೆರಕೆಯ ಹಾವಳಿ ಹೆಚ್ಚಾಗುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ಆಹಾರ ಮತ್ತು ಗುಣಮಟ್ಟ ಇಲಾಖೆ‌ ಅಗತ್ಯ ಕ್ರಮ ತೆಗೆದುಕೊಳ್ಳಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು
ಮುಡಾ ಪ್ರಾಸಿಕ್ಯೂಷನ್ ಕೇಸ್​: ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು