AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಕಿಂಗ್! ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್ ಬಳಸುತ್ತಿರುವುದು ದೃಢ

ರಾಜ್ಯ-ರಾಜಧಾನಿಯಲ್ಲಿ‌ ದಿನದಿಂದ‌‌ ದಿನಕ್ಕೆ ಆಹಾರ ಪದಾರ್ಥಗಳಲ್ಲಿ‌ ಕಲಬೆರಕೆ ಮಾಡುವುದು ಹೆಚ್ಚಾಗಿ ಕಂಡುಬರುತ್ತಿದ್ದು, ಇದೀಗ ಅದರ ಸಾಲಿಗೆ ಬೆಲ್ಲವು ಸೇರಿಕೊಂಡಿದೆ. ಇನ್ಮುಂದೆ ಬೆಲ್ಲವನ್ನ ಬಳಕೆ ಮಾಡುವವರು ಒಂದು ಬಾರಿ ಯೋಚನೆ ಮಾಡಬೇಕಾದ ಅನಿವಾರ್ಯತೆ ಶುರುವಾಗಿದೆ. ಆ ಕುರಿತು ಒಂದು ಸ್ಟೋರಿ ಇಲ್ಲಿದೆ.

ಶಾಕಿಂಗ್! ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್ ಬಳಸುತ್ತಿರುವುದು ದೃಢ
ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್ ಬಳಸುತ್ತಿರುವುದು ದೃಢ
Poornima Agali Nagaraj
| Edited By: |

Updated on: Sep 24, 2024 | 10:48 PM

Share

ಬೆಂಗಳೂರು, ಸೆ.24: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ‌ ಆಹಾರ ಪದಾರ್ಥಗಳಲ್ಲಿ‌ ಕೆಮಿಕಲ್ ಬಣ್ಣ(Chemical color) ಬಳಸುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದ್ದು, ನಾವು ಸೇವಿಸುವ ಆಹಾರ ಆರೋಗ್ಯಕ್ಕೆ ಒಳ್ಳೆಯದಾ, ಇಲ್ಲವಾ ಎನ್ನುವ ಬಗ್ಗೆ ಅನುಮಾನ ಶುರುವಾಗಿದೆ. ಹೌದು, ಇಷ್ಟು ದಿನ ಪಾನಿಪುರಿ, ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ, ಕಬಾಬ್ ಹಾಗೂ ಕಾಫಿಪುಡಿಯಲ್ಲಿ ಕೆಮಿಕಲ್ ಬಳಸುತ್ತಿರುವುದು ಧೃಡವಾಗಿತ್ತು. ಈ ಕುರಿತಾಗಿ ಆಹಾರ ಗುಣಮಟ್ಟ ಇಲಾಖೆ ಅಗತ್ಯ ಕ್ರಮಗಳನ್ನ ಕೂಡ ತೆಗೆದುಕೊಂಡಿದೆ.‌ ಇದರ ಬೆನ್ನಲ್ಲೇ ಇದೀಗ ಬೆಲ್ಲದಲ್ಲಿಯೂ ಕೂಡ ಕಲಬೆರಕೆ ಬಣ್ಣ ಬಳಸಿರುವುದು ದೃಢವಾಗಿದೆ.

ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್ ಬಳಸುತ್ತಿರುವುದು ದೃಢ

ಹೌದು, ಸಧ್ಯ ತಿರುಪತಿ ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ ಮಾಡಿದ್ದು ಖಚಿತವಾಗಿದ್ದು, ಇದರ ಬೆನ್ನಲ್ಲೇ ಬೆಲ್ಲದಲ್ಲಿಯೂ ಕಲಬೆರಕೆಯ ಕೃತಕ ಬಣ್ಣ ಬಳಕೆ ಮಾಡಿರುವುದು ದೃಢವಾಗಿವಾಗಿದೆ. ಕೆಲ ದಿನಗಳ ಹಿಂದೆ ಆಹಾರ ಹಾಗೂ ಗುಣಮಟ್ಟ ಇಲಾಖೆ ವಿವಿಧ ಬೆಲ್ಲವನ್ನ ಸಂಗ್ರಹಿಸಿ ಬೆಲ್ಲವನ್ನ ಲ್ಯಾಬ್ ರಿಪೋರ್ಟ್​ಗೆ ಕಳುಹಿಸಲಾಗಿತ್ತು. ಈ ವೇಳೆ ಬೆಲ್ಲದಲ್ಲಿ ಕೃತಕ ಬಣ್ಣ ಬಳಕೆ ಮಾಡಿರುವುದು ಪತ್ತೆಯಾಗಿದೆ. ಇನ್ನು ಸದರಿ ಬೆಲ್ಲವನ್ನ ಉಪಯೋಗಿಸಿದರೆ ಆರೋಗ್ಯದ ಮೇಲೆ ಮಾರಕ ಪರಿಣಾಮಗಳು ಉಂಟಾಗಲಿದೆಯಂತೆ.‌

ಇದನ್ನೂ ಓದಿ:ಕೃತಕ ಬಣ್ಣ, ರಾಸಾಯನಿಕ ಬಳಸುವ ಹೋಟೆಲ್​ಗಳಿಗೆ ಕಾದಿದೆ ಸಂಕಷ್ಟ: ಆಹಾರ ಇಲಾಖೆಯಿಂದ ವಿಶೇಷ ಕಾರ್ಯಾಚರಣೆ

ಬೆಲ್ಲವನ್ನ ಬಳಸುವಾಗ ಪರಿಶೀಲಿಸಿ ಬಳಸಲು ಸೂಚನೆ

ದೇವಸ್ಥಾನಗಳಲ್ಲಿ ಹೆಚ್ಚಾಗಿ ಪ್ರಸಾದಕ್ಕೆ ಬೆಲ್ಲ ಬಳಕೆಯಾಗಲಿದ್ದು, ಹೀಗಾಗಿ ಬೆಲ್ಲವನ್ನ ಬಳಸುವಾಗ ಪರಿಶೀಲಿಸಿ ಬಳಸಲು ಮುಜರಾಯಿ ಇಲಾಖೆ ಧಾರ್ಮಿಕ ಹಾಗೂ ದತ್ತಿ ಇಲಾಖೆ ಆಯುಕ್ತರಿಗೆ ಆಹಾರ ಸುರಕ್ಷತೆ ಆಯುಕ್ತರು ಪತ್ರ ಬರೆದಿದ್ದಾರೆ. ಇನ್ನು ಈ ಕುರಿತು ಮಾತನಾಡಿದ ಸಾರ್ವಜನಿಕರು, ‘ಬೆಲ್ಲದಲ್ಲಿ ಕಲಬೆರಕೆಯ ಬಣ್ಣ ಬಳಸಿದ್ದಾರೆ ಎಂದು ಹೇಳುತ್ತಿದ್ದಾರೆ.‌ ಬೆಲ್ಲವನ್ನ ಸಿಹಿ ಅಡುಗೆಗಳಿಗೆ ಹೆಚ್ಚಾಗಿ ಬಳಸುತ್ತೇವೆ. ಆದ್ರೆ, ಇದರಲ್ಲೂ ಬಣ್ಣ ಬಳಕೆ ಮಾಡಿದರೆ ಹೇಗೆ ಬಳಸೋದು.‌ ಈ ಕುರಿತಾಗಿ ಸರ್ಕಾರ ಹಾಗೂ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳುತ್ತಿದ್ದಾರೆ.

ಒಟ್ಟಿನಲ್ಲಿ, ದಿನದಿಂದ ದಿನಕ್ಕೆ ಕಲಬೆರಕೆಯ ಹಾವಳಿ ಹೆಚ್ಚಾಗುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ಆಹಾರ ಮತ್ತು ಗುಣಮಟ್ಟ ಇಲಾಖೆ‌ ಅಗತ್ಯ ಕ್ರಮ ತೆಗೆದುಕೊಳ್ಳಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್