AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು; ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು, ಮಾಲೀಕ ಸೇರಿ ಇಬ್ಬರಿಗೆ ಗಾಯ

ಬೆಂಗಳೂರಿನ ದೇವಿನಗರದಲ್ಲಿರುವ ಲಕ್ಷ್ಮಿ ಜ್ಯುವೆಲ್ಲರಿ ಶಾಪ್​ಗೆ ಇಬ್ಬರು ದುಷ್ಕರ್ಮಿಗಳು ನುಗ್ಗಿ ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಚಿನ್ನಾಭರಣ ಮಳಿಗೆಯ ಮಾಲೀಕ ಹಾಗೂ ದುಷ್ಕರ್ಮಿಗಳ ನಡುವೆ ಜಗಳವಾಗಿದ್ದು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇದರಿಂದ ಮಾಲೀಕ ಮತ್ತು ಇನ್ನೊಬ್ಬ ಸಿಬ್ಬಂದಿಗೆ ಗಾಯಗಳಾಗಿವೆ.

ಬೆಂಗಳೂರು; ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು, ಮಾಲೀಕ ಸೇರಿ ಇಬ್ಬರಿಗೆ ಗಾಯ
ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 14, 2024 | 1:33 PM

Share

ಬೆಂಗಳೂರು, ಮಾರ್ಚ್​.14: ಬೆಂಗಳೂರಿನ ಕೊಡಿಗೇಹಳ್ಳಿಯ ಲಕ್ಷ್ಮೀ ಬ್ಯಾಂಕರ್ಸ್ & ಜ್ಯುವೆಲ್ಲರಿ ಶಾಪ್​​ನಲ್ಲಿ ಗುರುವಾರ ಗುಂಡಿನ ದಾಳಿ (Open Fire) ನಡೆದಿದ್ದು ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಎರಡು ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ದೇವಿನಗರದಲ್ಲಿರುವ ಲಕ್ಷ್ಮಿ ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಚಿನ್ನಾಭರಣ ಮಳಿಗೆಯ ಮಾಲೀಕ ಹಣ ನೀಡುವುದಕ್ಕೆ ವಿರೋಧಿಸಿದ್ದು ದುಷ್ಕರ್ಮಿಗಳು ಹಾಗೂ ಮಾಲೀನ ನಡುವೆ ಮಾತಿನ ಚಕಮಕಿಯಾಗಿದೆ. ಆಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಅಪ್ಪುರಾಮ್, ಅಭಿರಾಮ್​ ಎಂಬುವವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಅಪ್ಪುರಂ ಮತ್ತು ಆನಂದರಾಮ್ ಅವರನ್ನು M.S.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು ಮೂರು ಸುತ್ತು ಗುಂಡು ಹಾರಿಸಲಾಗಿದೆ ಎನ್ನಲಾಗುತ್ತಿದೆ. ಇನ್ನು ಮತ್ತೊಂದೆಡೆ ದುಷ್ಕರ್ಮಿಗಳು ದರೋಡೆ ಅಲ್ಲದೆ ಸುಪಾರಿ ಪಡೆದು ಜ್ಯುವೆಲ್ಲರಿ ಅಂಗಡಿ ಮಾಲೀಕನನ್ನು ಕೊಲೆ ಮಾಡಲು ಬಂದಿದ್ದರು ಎಂಬ ಶಂಕೆ ಕೂಡ ವ್ಯಕ್ತವಾಗಿದೆ.

ಇದನ್ನೂ ಓದಿ: ಕನ್ನಡಿಗರು ‘ರೇಸಿಸ್ಟ್’ ಎಂದ ಯೂಟ್ಯೂಬರ್, ಹಾಕಿದ್ದಾನೆ ಸವಾಲು

ಆರೋಪಿಗಳು ಏನು ದೋಚಲು ಆಗಿಲ್ಲ. ಕೇವಲ ಗುಂಡು ಹಾರಿಸಿದ್ದಾರೆ. ಓರ್ವನಿಗೆ ಕಾಲಿಗೆ, ಮತ್ತೋರ್ವನಿಗೆ ಹೊಟ್ಟೆಗೆ ಗುಂಡು ತಾಕಿದೆ. ಆರೋಪಿಗಳು ಚಿನ್ನದಂಗಡಿಯೊಳಗೆ ಕೇವಲ ಒಂದು ನಿಮಿಷಗಳ ಕಾಲ ಇದ್ದರು. ಸದ್ಯಕ್ಕೆ ಆಭರಣ ಮಳಿಗೆಯಲ್ಲಿ ಕಳ್ಳತನ ನಡೆದಿರುವುದು ಪತ್ತೆಯಾಗಿಲ್ಲ. ಆರೋಪಿಗಳು ಬಂದು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಆರೋಪಿಗಳು ಪಿಸ್ತೂಲ್ ಅನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಡಿಜಿ, ಐಜಿಪಿ ಅಲೋಕ್ ಮೋಹನ್ ಮತ್ತು ನಗರ ಪೊಲೀಸ್ ಆಯುಕ್ತ ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದಾರೆ. ಸ್ಥಳದಲ್ಲಿ ಒಂದು ಮಚ್ಚು ಸಹ ಪತ್ತೆಯಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Thu, 14 March 24

Follow Us
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು