AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು; ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು, ಮಾಲೀಕ ಸೇರಿ ಇಬ್ಬರಿಗೆ ಗಾಯ

ಬೆಂಗಳೂರಿನ ದೇವಿನಗರದಲ್ಲಿರುವ ಲಕ್ಷ್ಮಿ ಜ್ಯುವೆಲ್ಲರಿ ಶಾಪ್​ಗೆ ಇಬ್ಬರು ದುಷ್ಕರ್ಮಿಗಳು ನುಗ್ಗಿ ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಚಿನ್ನಾಭರಣ ಮಳಿಗೆಯ ಮಾಲೀಕ ಹಾಗೂ ದುಷ್ಕರ್ಮಿಗಳ ನಡುವೆ ಜಗಳವಾಗಿದ್ದು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇದರಿಂದ ಮಾಲೀಕ ಮತ್ತು ಇನ್ನೊಬ್ಬ ಸಿಬ್ಬಂದಿಗೆ ಗಾಯಗಳಾಗಿವೆ.

ಬೆಂಗಳೂರು; ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು, ಮಾಲೀಕ ಸೇರಿ ಇಬ್ಬರಿಗೆ ಗಾಯ
ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ಗುಂಡು ಹಾರಿಸಿದ ದುಷ್ಕರ್ಮಿಗಳು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 14, 2024 | 1:33 PM

Share

ಬೆಂಗಳೂರು, ಮಾರ್ಚ್​.14: ಬೆಂಗಳೂರಿನ ಕೊಡಿಗೇಹಳ್ಳಿಯ ಲಕ್ಷ್ಮೀ ಬ್ಯಾಂಕರ್ಸ್ & ಜ್ಯುವೆಲ್ಲರಿ ಶಾಪ್​​ನಲ್ಲಿ ಗುರುವಾರ ಗುಂಡಿನ ದಾಳಿ (Open Fire) ನಡೆದಿದ್ದು ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಎರಡು ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ದೇವಿನಗರದಲ್ಲಿರುವ ಲಕ್ಷ್ಮಿ ಜ್ಯುವೆಲ್ಲರಿ ಶಾಪ್​ಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಚಿನ್ನಾಭರಣ ಮಳಿಗೆಯ ಮಾಲೀಕ ಹಣ ನೀಡುವುದಕ್ಕೆ ವಿರೋಧಿಸಿದ್ದು ದುಷ್ಕರ್ಮಿಗಳು ಹಾಗೂ ಮಾಲೀನ ನಡುವೆ ಮಾತಿನ ಚಕಮಕಿಯಾಗಿದೆ. ಆಗ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಅಪ್ಪುರಾಮ್, ಅಭಿರಾಮ್​ ಎಂಬುವವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಅಪ್ಪುರಂ ಮತ್ತು ಆನಂದರಾಮ್ ಅವರನ್ನು M.S.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಟ್ಟು ಮೂರು ಸುತ್ತು ಗುಂಡು ಹಾರಿಸಲಾಗಿದೆ ಎನ್ನಲಾಗುತ್ತಿದೆ. ಇನ್ನು ಮತ್ತೊಂದೆಡೆ ದುಷ್ಕರ್ಮಿಗಳು ದರೋಡೆ ಅಲ್ಲದೆ ಸುಪಾರಿ ಪಡೆದು ಜ್ಯುವೆಲ್ಲರಿ ಅಂಗಡಿ ಮಾಲೀಕನನ್ನು ಕೊಲೆ ಮಾಡಲು ಬಂದಿದ್ದರು ಎಂಬ ಶಂಕೆ ಕೂಡ ವ್ಯಕ್ತವಾಗಿದೆ.

ಇದನ್ನೂ ಓದಿ: ಕನ್ನಡಿಗರು ‘ರೇಸಿಸ್ಟ್’ ಎಂದ ಯೂಟ್ಯೂಬರ್, ಹಾಕಿದ್ದಾನೆ ಸವಾಲು

ಆರೋಪಿಗಳು ಏನು ದೋಚಲು ಆಗಿಲ್ಲ. ಕೇವಲ ಗುಂಡು ಹಾರಿಸಿದ್ದಾರೆ. ಓರ್ವನಿಗೆ ಕಾಲಿಗೆ, ಮತ್ತೋರ್ವನಿಗೆ ಹೊಟ್ಟೆಗೆ ಗುಂಡು ತಾಕಿದೆ. ಆರೋಪಿಗಳು ಚಿನ್ನದಂಗಡಿಯೊಳಗೆ ಕೇವಲ ಒಂದು ನಿಮಿಷಗಳ ಕಾಲ ಇದ್ದರು. ಸದ್ಯಕ್ಕೆ ಆಭರಣ ಮಳಿಗೆಯಲ್ಲಿ ಕಳ್ಳತನ ನಡೆದಿರುವುದು ಪತ್ತೆಯಾಗಿಲ್ಲ. ಆರೋಪಿಗಳು ಬಂದು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಆರೋಪಿಗಳು ಪಿಸ್ತೂಲ್ ಅನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಡಿಜಿ, ಐಜಿಪಿ ಅಲೋಕ್ ಮೋಹನ್ ಮತ್ತು ನಗರ ಪೊಲೀಸ್ ಆಯುಕ್ತ ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಯನ್ನು ಪರಿಶೀಲಿಸುತ್ತಿದ್ದಾರೆ. ಸ್ಥಳದಲ್ಲಿ ಒಂದು ಮಚ್ಚು ಸಹ ಪತ್ತೆಯಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:10 pm, Thu, 14 March 24

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು