AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ಗಾ ಮೈದಾನದಲ್ಲೇ ಗಣೇಶ ಕೂರಿಸಬೇಕಾ? ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ

ಈದ್ಗಾ ಮೈದಾನದಲ್ಲೇ ಗಣೇಶ ಕೂರಿಸಬೇಕಾ? ನಿಮ್ಮ ನಿಮ್ಮ ಮನೆಗಳಲ್ಲಿ ಗಣೇಶನನ್ನ ಪ್ರತಿಷ್ಠಾನೆ ಮಾಡಿ. ನಿಮ್ಮ ಮನೆಗಳಲ್ಲಿ ಭಕ್ತಿ ತೋರಿಸಿ ಆಗ ದೇವ್ರು ಒಪ್ಪುತ್ತಾನೆ ಎಂದರು.

ಈದ್ಗಾ ಮೈದಾನದಲ್ಲೇ ಗಣೇಶ ಕೂರಿಸಬೇಕಾ? ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ
ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್
TV9 Web
| Edited By: |

Updated on: Aug 10, 2022 | 3:05 PM

Share

ಬೆಂಗಳೂರು: ನಮಾಜ್ ಮಾಡೋಕೆ ನಾವೂ ಯಾವತ್ತೂ ಯಾರಿಗೂ ಅನುಮತಿ ಕೇಳಿಲ್ಲ, ಕೇಳೋದೂ ಇಲ್ಲ. ಈದ್ಗಾ ಮೈದಾನದಲ್ಲಿ (chamrajpet Idgah Maidan) ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ನಿಮಗೆ ಪಾಪ ಬರುತ್ತೆ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ ನೀಡಿದರು. ಈದ್ಗಾ ಮೈದಾನದಲ್ಲೇ ಗಣೇಶ ಕೂರಿಸಬೇಕಾ? ನಿಮ್ಮ ನಿಮ್ಮ ಮನೆಗಳಲ್ಲಿ ಗಣೇಶನನ್ನ ಪ್ರತಿಷ್ಠಾನೆ ಮಾಡಿ. ನಿಮ್ಮ ಮನೆಗಳಲ್ಲಿ ಭಕ್ತಿ ತೋರಿಸಿ ಆಗ ದೇವ್ರು ಒಪ್ಪುತ್ತಾನೆ. ಈದ್ಗಾ ಮೈದಾನ ವಕ್ಫ್ ಬೋರ್ಡ್ ಆಸ್ತಿ. ಕಂದಾಯ ಇಲಾಖೆಯ ಆಸ್ತಿ ಅಂತ ಹೇಳೋಕೆ ಬಿಬಿಎಂಪಿಗೆ ಏನ್ ಹಕ್ಕು ಇದೆ? ನಾವೇ 75 ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡ್ತೀವಿ. ಬೇರೆ ಯಾರಿಗೂ ಅವಕಾಶ ನೀಡೋದಿಲ್ಲ. ಮುಸಲ್ಮಾನರ ಕೆಣಕೋಕೆ ಇದೆಲ್ಲ ಪಿತೂರಿ ಅಷ್ಟೇ. ರಾಜಕಾರಣವನ್ನ ಬಳಸಿ ಏನೇನೋ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬಾಬ್ರಿ ಮಸೀದಿ ರೀತಿ ಮೈದಾನದ ಗೋಡೆ ಕೆಡುವುದಾಗಿ ಹೇಳಿಕೆ ನೀಡಿದ್ದ ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ ವಿರುದ್ಧ ಎಫ್ಐಆರ್ ದಾಖಲು

ಗಣೇಶ ಹಬ್ಬ ಆಚರಿಸಬೇಕು ಅಂದರೆ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮಾಡಿ. ಮುಸ್ಲಂ ಭಾವನೆಗಳ ಜೊತೆ ಯಾಕೆ ಆಟ ಆಡ್ತೀರಿ. ಹಿಂದೂ ಸಂಘಟಬೆಗಳಿಗೆ ಬೇರೆ ಕೆಲಸ ಇಲ್ಲ. ನಾವು ಮದರಸಾಗಳಲ್ಲಿ ಧ್ವಜಾರೋಹಣ ಮಾಡಿದ್ವಿ. ಈಗ ಆ.15ರಂದು ಈದ್ಗಾದಲ್ಲಿ ನಾವೇ ರಾಷ್ಟ್ರ ಧ್ವಜ ಹಾರಿಸ್ತೀವಿ. ಆದರೆ ಯಾರು ಧ್ವಜಾರೋಹಣ ಮಾಡ್ಬೇಕು ಅಂತ ಆ.12ರಂದು ಸಭೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಜಮೀರ್ ಧ್ವಜಾರೋಹಣ ಮಾಡುವುದು ಬೇಡ: ಹಿಂದೂ ಸಂಘಟನೆಗಳು ಪಟ್ಟು

ಚಾಮರಾಜಪೇಟೆ ಮೈದಾನದಲ್ಲಿ  ಗಣೇಶ ಮೂರ್ತಿ ಪ್ರತಿಷ್ಠಾಪನೆ ಗಲಾಟೆ ಆಯ್ತು‌. ಈಗ ಧ್ವಜಾರೋಹಣ ವಿಚಾರವಾಗಿ ಸಮರ ಶುರುವಾಗಿದ್ದು, ಜಮೀರ್ ಧ್ವಜಾರೋಹಣ ಮಾಡುವುದು ಬೇಡವೇ ಬೇಡ ಎಂದು ಹಿಂದೂ ಸಂಘಟನೆಗಳು ಮತ್ತು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಟ್ಟು ಹಿಡಿದಿದೆ. ಜಮ್ಮೀರ್ ಧ್ವಜಾರೋಹಣ ಮಾಡಿದ್ರೆ ನಾವು ಬಿಡೋದಿಲ್ಲ. ಜಮೀರ್ 20 ವರ್ಷ ಧ್ವಜಾರೋಹಣಕ್ಕೆ ಅಡ್ಡಿ ಮಾಡಿದವರು. ಈಗ ಇವರು ಧ್ವಜಾರೋಹಣ ಮಾಡೋದು ಬೇಡ.

ಜಮೀರ್ ಬರ್ಲಿ, ಸೆಲ್ಯೂಟ್ ಮಾಡಿ ಹೋಗ್ಲಿ. ಜಮೀರ್ ಸಲ್ಯೂಟ್​ಗೆ ಮಾತ್ರ ಸೀಮಿತವಾಗಿರಲಿ. ನಾವೇ ಧ್ವಜಾರೋಹಣ ಮಾಡುತ್ತೇವೆ ಎಂದು ಹೇಳಿದರು. ಇದಕ್ಕೆ ಒಪ್ಪಿಗೆ ನೀಡದಿದ್ರೆ ಅಶಾಂತಿ ಸೃಷ್ಟಿಯಾಗುವ ಎಚ್ಚರಿಕೆ ನೀಡಿದ್ದು, ಈ ಅಶಾಂತಿಗೆ ಸರ್ಕಾರವೇ ನೇರ ಹಣೆ ಆಗಲಿದೆ ಎಂದು ಸಂಘಟನೆಗಳು ಹೇಳುತ್ತಿವೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್