AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈದ್ಗಾ ಮೈದಾನದಲ್ಲೇ ಗಣೇಶ ಕೂರಿಸಬೇಕಾ? ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ

ಈದ್ಗಾ ಮೈದಾನದಲ್ಲೇ ಗಣೇಶ ಕೂರಿಸಬೇಕಾ? ನಿಮ್ಮ ನಿಮ್ಮ ಮನೆಗಳಲ್ಲಿ ಗಣೇಶನನ್ನ ಪ್ರತಿಷ್ಠಾನೆ ಮಾಡಿ. ನಿಮ್ಮ ಮನೆಗಳಲ್ಲಿ ಭಕ್ತಿ ತೋರಿಸಿ ಆಗ ದೇವ್ರು ಒಪ್ಪುತ್ತಾನೆ ಎಂದರು.

ಈದ್ಗಾ ಮೈದಾನದಲ್ಲೇ ಗಣೇಶ ಕೂರಿಸಬೇಕಾ? ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ
ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್
TV9 Web
| Edited By: |

Updated on: Aug 10, 2022 | 3:05 PM

Share

ಬೆಂಗಳೂರು: ನಮಾಜ್ ಮಾಡೋಕೆ ನಾವೂ ಯಾವತ್ತೂ ಯಾರಿಗೂ ಅನುಮತಿ ಕೇಳಿಲ್ಲ, ಕೇಳೋದೂ ಇಲ್ಲ. ಈದ್ಗಾ ಮೈದಾನದಲ್ಲಿ (chamrajpet Idgah Maidan) ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ನಿಮಗೆ ಪಾಪ ಬರುತ್ತೆ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ ನೀಡಿದರು. ಈದ್ಗಾ ಮೈದಾನದಲ್ಲೇ ಗಣೇಶ ಕೂರಿಸಬೇಕಾ? ನಿಮ್ಮ ನಿಮ್ಮ ಮನೆಗಳಲ್ಲಿ ಗಣೇಶನನ್ನ ಪ್ರತಿಷ್ಠಾನೆ ಮಾಡಿ. ನಿಮ್ಮ ಮನೆಗಳಲ್ಲಿ ಭಕ್ತಿ ತೋರಿಸಿ ಆಗ ದೇವ್ರು ಒಪ್ಪುತ್ತಾನೆ. ಈದ್ಗಾ ಮೈದಾನ ವಕ್ಫ್ ಬೋರ್ಡ್ ಆಸ್ತಿ. ಕಂದಾಯ ಇಲಾಖೆಯ ಆಸ್ತಿ ಅಂತ ಹೇಳೋಕೆ ಬಿಬಿಎಂಪಿಗೆ ಏನ್ ಹಕ್ಕು ಇದೆ? ನಾವೇ 75 ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಮಾಡ್ತೀವಿ. ಬೇರೆ ಯಾರಿಗೂ ಅವಕಾಶ ನೀಡೋದಿಲ್ಲ. ಮುಸಲ್ಮಾನರ ಕೆಣಕೋಕೆ ಇದೆಲ್ಲ ಪಿತೂರಿ ಅಷ್ಟೇ. ರಾಜಕಾರಣವನ್ನ ಬಳಸಿ ಏನೇನೋ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬಾಬ್ರಿ ಮಸೀದಿ ರೀತಿ ಮೈದಾನದ ಗೋಡೆ ಕೆಡುವುದಾಗಿ ಹೇಳಿಕೆ ನೀಡಿದ್ದ ವಿಶ್ವ ಸನಾತನ ಪರಿಷತ್ ಅಧ್ಯಕ್ಷ ಭಾಸ್ಕರನ್ ವಿರುದ್ಧ ಎಫ್ಐಆರ್ ದಾಖಲು

ಗಣೇಶ ಹಬ್ಬ ಆಚರಿಸಬೇಕು ಅಂದರೆ ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮಾಡಿ. ಮುಸ್ಲಂ ಭಾವನೆಗಳ ಜೊತೆ ಯಾಕೆ ಆಟ ಆಡ್ತೀರಿ. ಹಿಂದೂ ಸಂಘಟಬೆಗಳಿಗೆ ಬೇರೆ ಕೆಲಸ ಇಲ್ಲ. ನಾವು ಮದರಸಾಗಳಲ್ಲಿ ಧ್ವಜಾರೋಹಣ ಮಾಡಿದ್ವಿ. ಈಗ ಆ.15ರಂದು ಈದ್ಗಾದಲ್ಲಿ ನಾವೇ ರಾಷ್ಟ್ರ ಧ್ವಜ ಹಾರಿಸ್ತೀವಿ. ಆದರೆ ಯಾರು ಧ್ವಜಾರೋಹಣ ಮಾಡ್ಬೇಕು ಅಂತ ಆ.12ರಂದು ಸಭೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

ಜಮೀರ್ ಧ್ವಜಾರೋಹಣ ಮಾಡುವುದು ಬೇಡ: ಹಿಂದೂ ಸಂಘಟನೆಗಳು ಪಟ್ಟು

ಚಾಮರಾಜಪೇಟೆ ಮೈದಾನದಲ್ಲಿ  ಗಣೇಶ ಮೂರ್ತಿ ಪ್ರತಿಷ್ಠಾಪನೆ ಗಲಾಟೆ ಆಯ್ತು‌. ಈಗ ಧ್ವಜಾರೋಹಣ ವಿಚಾರವಾಗಿ ಸಮರ ಶುರುವಾಗಿದ್ದು, ಜಮೀರ್ ಧ್ವಜಾರೋಹಣ ಮಾಡುವುದು ಬೇಡವೇ ಬೇಡ ಎಂದು ಹಿಂದೂ ಸಂಘಟನೆಗಳು ಮತ್ತು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಪಟ್ಟು ಹಿಡಿದಿದೆ. ಜಮ್ಮೀರ್ ಧ್ವಜಾರೋಹಣ ಮಾಡಿದ್ರೆ ನಾವು ಬಿಡೋದಿಲ್ಲ. ಜಮೀರ್ 20 ವರ್ಷ ಧ್ವಜಾರೋಹಣಕ್ಕೆ ಅಡ್ಡಿ ಮಾಡಿದವರು. ಈಗ ಇವರು ಧ್ವಜಾರೋಹಣ ಮಾಡೋದು ಬೇಡ.

ಜಮೀರ್ ಬರ್ಲಿ, ಸೆಲ್ಯೂಟ್ ಮಾಡಿ ಹೋಗ್ಲಿ. ಜಮೀರ್ ಸಲ್ಯೂಟ್​ಗೆ ಮಾತ್ರ ಸೀಮಿತವಾಗಿರಲಿ. ನಾವೇ ಧ್ವಜಾರೋಹಣ ಮಾಡುತ್ತೇವೆ ಎಂದು ಹೇಳಿದರು. ಇದಕ್ಕೆ ಒಪ್ಪಿಗೆ ನೀಡದಿದ್ರೆ ಅಶಾಂತಿ ಸೃಷ್ಟಿಯಾಗುವ ಎಚ್ಚರಿಕೆ ನೀಡಿದ್ದು, ಈ ಅಶಾಂತಿಗೆ ಸರ್ಕಾರವೇ ನೇರ ಹಣೆ ಆಗಲಿದೆ ಎಂದು ಸಂಘಟನೆಗಳು ಹೇಳುತ್ತಿವೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ