AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ತುಂತುರು ಮಳೆ: ಬಿಸಿಲಿನಿಂದ ರೋಸಿ ಹೋಗಿದ್ದ ಸಿಲಿಕಾನ್ ಸಿಟಿ ಮಂದಿ ಖುಷ್​

ರಾಜ್ಯದ ಹಲವೆಡೆ ವರುಣನ ಆಗಮನವಾಗಿದೆ. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಮಳೆರಾಯ ಮುನಿಸಿಕೊಂಡಿದ್ದ. ಇಂದು(ಏ.20) ಬೆಂಗಳೂರಿನ ಹಲವೆಡೆ ತುಂತುರು ಮಳೆಯಾಗಿದ್ದು, ಬಿಸಿಲಿನ ಬೇಗೆಗೆ ಕಂಗೆಟ್ಟಿದ್ದ ಸಿಲಿಕಾನ್​ ಸಿಟಿ ಮಂದಿ ಫುಲ್​ ಖುಷ್​ ಆಗಿದ್ದಾರೆ.

ಬೆಂಗಳೂರಿನಲ್ಲಿ ತುಂತುರು ಮಳೆ: ಬಿಸಿಲಿನಿಂದ ರೋಸಿ ಹೋಗಿದ್ದ ಸಿಲಿಕಾನ್ ಸಿಟಿ ಮಂದಿ ಖುಷ್​
ಬೆಂಗಳೂರಿನಲ್ಲಿ ತುಂತುರು ಮಳೆ
TV9 Web
| Edited By: |

Updated on:Apr 20, 2024 | 3:40 PM

Share

ಬೆಂಗಳೂರು, ಏ.20: ಬಿಸಿಲಿನಿಂದ ರೋಸಿ ಹೋಗಿದ್ದ ಬೆಂಗಳೂರಿಗೆ ವರುಣ(Bengaluru Rain) ಆಗಮನವಾಗಿದ್ದು, ಸಿಟಿಯಲ್ಲಿ ತುಂತುರು ಮಳೆ ಆರಂಭವಾಗಿದೆ. ನಗರದ ಟೌನ್ ಹಾಲ್, ಮಾರ್ಕೆಟ್, ಕೆಆರ್ ಸರ್ಕಲ್, ವಿಧಾನಸೌಧ, ಜೆ.ಪಿ.ನಗರ, ಕಾರ್ಪೊರೇಷನ್ ಸರ್ಕಲ್, ಮೈಸೂರ್ ಬ್ಯಾಂಕ್ ಸರ್ಕಲ್ , ಸೇರಿದಂತೆ ಹಲವೆಡೆ ತುಂತುರು ಮಳೆ ಶುರುವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಮಂದಿ ಫುಲ್​ ಖುಷ್​ ಆಗಿದ್ದಾರೆ.

ಬೆಳಿಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣ

ಮುಂಜಾನೆಯಿಂದಲೂ ಕೆಲವೆಡೆ ಮೋಡ ಕವಿದ ವಾತಾವರಣ ಹಿನ್ನಲೆ ನಗರದ ಕೆಲವೆಡೆ ಲಘು ಮಳೆಯಾಗಿದೆ. ಎರಡು ದಿನ ಕಾಲ ಬೆಂಗಳೂರಿನಲ್ಲಿ ಹಗುರ ಮಳೆ ಕುರಿತು ಹವಾಮಾನ ಇಲಾಖೆ‌ ಮೂನ್ಸುಚನೆ ನೀಡಿತ್ತು. ನಿನ್ನೆ ಕೂಡ ನಗರದ ಕೆಂಗೇರಿ, ಆರ್ ಆರ್ ನಗರದಲ್ಲಿ ಮಳೆಯಾಗಿತ್ತು. ಇವತ್ತು ಕೂಡ ನಗರದ ಹಲವೆಡೆ ಲಘು ಮಳೆಯಾಗಿದೆ.

ಇದನ್ನೂ ಓದಿ:ಕೊಪ್ಪಳ ಮತ್ತು ಸುತ್ತಮುತ್ತಲ ಏರಿಯಾಗಳಲ್ಲಿ ಜೋರು ಮಳೆ, ಬೇಸಿಗೆಯ ಧಗೆಯಿಂದ ಕಂಗೆಟ್ಟಿದ್ದ ಜನರಲ್ಲಿ ಸಂತಸ

ಹವಾಮಾನ ಇಲಾಖೆಯಿಂದ ಯಾವುದೇ ಅಲರ್ಟ್ ಘೋಷಣೆ ಇಲ್ಲ. ಇನ್ನು ನಗರದ ಉಷ್ಣತಾಮಾನದಲ್ಲಿ ಇಳಿಕೆ ಕಂಡಿದೆ. ಸುಮಾರು 2 ತಿಂಗಳ ಬಳಿಕ ನಗರದಲ್ಲಿ ತಾಪಮಾನದಲ್ಲಿ ಇಳಿಕೆಯಾಗಿದ್ದು, ಸಧ್ಯ ಬೆಂಗಳೂರಿನಲ್ಲಿ ವಾತಾವರಣ ತಂಪಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:21 pm, Sat, 20 April 24

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್