ಬೆಂಗಳೂರು, ಡಿಸೆಂಬರ್ 16: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (kuwj) ದಾವಣಗೆರೆಯಲ್ಲಿ 2024 ಫೆಬ್ರವರಿ 3 ಮತ್ತು 4 ರಂದು 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಆಯೋಜಿಸಿದ್ದು, ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಕರಪತ್ರ ಬಿಡುಗಡೆ ಮಾಡಿದ್ದಾರೆ. ಫೆಬ್ರವರಿ 3 ರಂದು ಸಮ್ಮೇಳನ ಉದ್ಘಾಟನೆ ನೆರವೇರಿಸಿಕೊಡುವಂತೆ ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಿದ್ದರಾಮಯ್ಯ ಅವರು ಆಹ್ವಾನಿಸಿದ್ದಾರೆ.
ತಾವು ಸಮ್ಮೇಳನಕ್ಕೆ ಬರುವುದಾಗಿ ಸಿಎಂ ಸಮ್ಮತಿ ವ್ಯಕ್ತಪಡಿಸಿದ್ದು, ಇದೇ ಸಂದರ್ಭದಲ್ಲಿ ರಾಜ್ಯ ಸಮ್ಮೇಳನಕ್ಕೆ ಶುಭ ಕೋರಿದ್ದಾರೆ.
ಮೈಸೂರು ಪತ್ರಕರ್ತರ ಸಂಘದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಇದೇ ಡಿ. 22ರಂದು ಶಂಕುಸ್ಥಾಪನಾ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಲಾಗಿದೆ. 2 ದಿನ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಬರುವುದಾಗಿ ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ: Belagavi Session: ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ: ಚರ್ಚೆ ಆಗಿದ್ದೇನು, ಬಾಕಿ ಉಳಿದಿದ್ದೇನು?
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.