AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಪಿ ರೇಣುಕಾಚಾರ್ಯ ಪುತ್ರಿಯ ಜಾತಿ ಪ್ರಮಾಣ ಪತ್ರದ ಬಗ್ಗೆ ವಿಧಾನಸಭೆಯಲ್ಲಿ ಜಟಾಪಟಿ; ಏನಿದು ವಿಚಾರ?

ರೇಣುಕಾಚಾರ್ಯ ಪುತ್ರಿ SC ಜಾತಿ ಪ್ರಮಾಣ ಪತ್ರ ಪಡೆದಿದ್ದರೆ, ಕಾನೂನು ಪ್ರಕಾರ ಏನು ನಡೆಯಬೇಕೋ ಅದು ಆಗಲಿ. ಅದಕ್ಕೆ ಸರ್ಕಾರ ಯಾವುದೇ ರೀತಿಯ ಅಡ್ಡಿಪಡಿಸುವುದಿಲ್ಲ ಎಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಎಂಪಿ ರೇಣುಕಾಚಾರ್ಯ ಪುತ್ರಿಯ ಜಾತಿ ಪ್ರಮಾಣ ಪತ್ರದ ಬಗ್ಗೆ ವಿಧಾನಸಭೆಯಲ್ಲಿ ಜಟಾಪಟಿ; ಏನಿದು ವಿಚಾರ?
ಎಂ.ಪಿ ರೇಣುಕಾಚಾರ್ಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Mar 23, 2022 | 2:17 PM

Share

ಬೆಂಗಳೂರು: ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರದ ಬಗ್ಗೆ ವಿಧಾನಸಭೆಯಲ್ಲಿ ಜಟಾಪಟಿ ನಡೆದಿದೆ. ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳಿಂದ ಪಟ್ಟು ಹಿಡಿಯಲಾಗಿದೆ. ನಿನ್ನೆ ಚರ್ಚೆ ಮಾಡಿದ್ದಾರೆ, ಇಂದು ಮತ್ತೆ ಚರ್ಚೆ ಏಕೆ ಎಂದು ಇದಕ್ಕೆ ವಿಧಾನಸಭೆಯಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ರೇಣುಕಾಚಾರ್ಯ ಪುತ್ರಿ ಜಾತಿ ಪ್ರಮಾಣ ಪತ್ರದ ಬಗ್ಗೆ ಚರ್ಚೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದ್ದಾರೆ. ರೇಣುಕಾಚಾರ್ಯ ಪುತ್ರಿ SC ಜಾತಿ ಪ್ರಮಾಣ ಪತ್ರ ಪಡೆದಿದ್ದರೆ ತಪ್ಪು. ಅದರ ಬಗ್ಗೆ ಮತ್ತೆ ಸ್ಪಷ್ಟನೆ ನೀಡಬೇಕಾದ ಅಗತ್ಯವಿಲ್ಲ. ರೇಣುಕಾಚಾರ್ಯ, ನಾನು ಸೌಲಭ್ಯ ಪಡೆದಿಲ್ಲ ಎಂದು ಹೇಳುವ ಅಗತ್ಯ ಇರಲ್ಲ. ಜಾತಿ ಪ್ರಮಾಣ ಪತ್ರ ಪಡೆದಿದ್ದರೆ ಅದು ಅಪರಾಧ ಎಂದು ಪುನರುಚ್ಛರಿಸಿದ್ದಾರೆ.

ಪುತ್ರಿ ಜಾತಿ ಪ್ರಮಾಣ ಪತ್ರದ ಬಗ್ಗೆ ಮಾತನಾಡಿದ್ದ ರೇಣುಕಾಚಾರ್ಯ, ನಾನು‌ ಜಾತ್ಯತೀತ ವ್ಯಕ್ತಿ, ಯಾವುದೇ ಸವಲತ್ತು ಪಡೆದಿಲ್ಲ. ನನ್ನ ಸಹೋದರ ಜಾತಿ ಪ್ರಮಾಣ ಪತ್ರ ತೆಗೆದುಕೊಂಡಿದ್ದಾನೆ. ನನ್ನ ಮಗಳಿಗೂ ಜಾತಿ ಪ್ರಮಾಣ ಪತ್ರ ಸೋದರ ಕೊಡಿಸಿದ್ದ. ಜಾತಿ ಪ್ರಮಾಣ ಪತ್ರವನ್ನ ನಾನೇ ವಾಪಸ್​ ಮಾಡಿಸಿರುವೆ. ನಾನು ಯಾವುದೇ ಸವಲತ್ತು ಪಡೆದಿದ್ದರೆ ಗಲ್ಲಿಗೆ ಬೇಕಿದ್ರೆ ಏರಿಸಿ ಎಂದು ವಿಧಾನಸಭೆಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ರೇಣುಕಾಚಾರ್ಯ ಪುತ್ರಿ SC ಜಾತಿ ಪ್ರಮಾಣ ಪತ್ರ ಪಡೆದಿದ್ದರೆ, ಕಾನೂನು ಪ್ರಕಾರ ಏನು ನಡೆಯಬೇಕೋ ಅದು ಆಗಲಿ. ಅದಕ್ಕೆ ಸರ್ಕಾರ ಯಾವುದೇ ರೀತಿಯ ಅಡ್ಡಿಪಡಿಸುವುದಿಲ್ಲ. ಅವರು ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ. ಹೀಗಾಗಿ ಈ ಚರ್ಚೆ ಇಲ್ಲಿಗೆ ನಿಲ್ಲಿಸಿ ಎಂದು ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ರೇಣುಕಾಚಾರ್ಯ ವಿರುದ್ದ ಸದನದ ಬಾವಿಗಿಳಿದ ಕಾಂಗ್ರೆಸ್ ಸದಸ್ಯರು ‌‌ ಬೇಡ ಜಂಗಮ ಸರ್ಟಿಫಿಕೇಟ್ ಪಡೆದ ಬಗ್ಗೆ ರೇಣುಕಾಚಾರ್ಯ ಒಪ್ಕೊಂಡಿದ್ದಾರೆ. ಅದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸದನ ಬಾವಿಯಲ್ಲಿ ಧರಣಿ ನಡೆಸಿದ್ದಾರೆ. ಈ ವೇಳೆ ಸದನದಲ್ಲಿ ತೀವ್ರ ಗದ್ದಲ, ಕೋಲಾಹಲ ಉಂಟಾಗಿದೆ.

ಇದನ್ನೂ ಓದಿ: ಸಿಎಂ ಬಸವರಾಜ ಬೊಮ್ಮಾಯಿ ಹೊನ್ನಾಳಿಗೆ ಬಂದ್ರೆ ನನ್ನ ಕ್ಷೇತ್ರ ಬಿಟ್ಟುಕೊಡ್ತೇನೆ – ಶಾಸಕ M.P.ರೇಣುಕಾಚಾರ್ಯ

ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡದವರು ದೇಶವಿರೋಧಿಗಳು; ವಿವಾದಾತ್ಮಕ ಹೇಳಿಕೆ ಕೊಟ್ಟ ಶಾಸಕ ರೇಣುಕಾಚಾರ್ಯ

Published On - 2:16 pm, Wed, 23 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?