AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಮೇಶ್ ಕತ್ತಿ ವಿಧಿವಶ: ಇಂದಿನ ಕನ್ಯಾಕುಮಾರಿ ಪ್ರವಾಸ ರದ್ದು ಮಾಡಿದ ಸಿದ್ದರಾಮಯ್ಯ

ಕತ್ತಿ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಧ್ಯಾಹ್ನ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.

ಉಮೇಶ್ ಕತ್ತಿ ವಿಧಿವಶ: ಇಂದಿನ ಕನ್ಯಾಕುಮಾರಿ ಪ್ರವಾಸ ರದ್ದು ಮಾಡಿದ ಸಿದ್ದರಾಮಯ್ಯ
ಸಿದ್ದರಾಮಯ್ಯ
TV9 Web
| Edited By: |

Updated on:Sep 07, 2022 | 11:16 AM

Share

ಬೆಂಗಳೂರು: ಉಮೇಶ್ ಕತ್ತಿ(Umesh Katti) ವಿಧಿವಶ ಹಿನ್ನೆಲೆ ಸಿದ್ದರಾಮಯ್ಯನವರ(Siddaramaiah) ಇಂದಿನ ಕನ್ಯಾಕುಮಾರಿ ಪ್ರವಾಸ ರದ್ದು ಗೊಳಿಸಲಾಗಿದೆ. ಕತ್ತಿ ಅಂತ್ಯಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮಧ್ಯಾಹ್ನ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.

ರಾಜಕೀಯ ಗಣ್ಯರು ಹೆಚ್​ಎಎಲ್​ ಏರ್​ಪೋರ್ಟ್ ನಲ್ಲಿ ಉಮೇಶ್ ಕತ್ತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಬಿಸಿ. ಪಾಟೀಲ್, ಸಚಿವ ಭೈರತಿ ಬಸವರಾಜ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕೆಜೆ ಜಾರ್ಜ್, ಎಮ್.ಟಿ.ಬಿ. ನಾಗರಾಜ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದ್ರು.

ಈ ವೇಳೆ HALನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್​ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್​ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ನೇರ ನುಡಿಯ ವ್ಯಕ್ತಿಯಾಗಿದ್ದವ. ಕತ್ತಿ ಆರೋಗ್ಯದ ಬಗ್ಗೆ ಮೊದಲಿಂದ ನಿರ್ಲಕ್ಷ್ಯ ವಹಿಸಿದ್ರು. ಸರ್ಕಾರ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಯಾಕೆಂದರೆ ಉಮೇಶ್​ ಕತ್ತಿ ಹಾಲಿ ಸಚಿವರಾಗಿದ್ದವರು. ಹಾಗಾಗಿ ಮೂರು ದಿನ ಶೋಕಾಚರಣೆ ಮಾಡಬೇಕಾಗಿತ್ತು. ಉಮೇಶ್ ಕತ್ತಿ ನನ್ನ ಜೊತೆ ಬಹಳ ಆತ್ಮೀಯವಾಗಿದ್ದರು. ನಾನು ಕೂಡ ಬೆಳಗಾವಿಗೆ ಹೋಗುತ್ತೇನೆ ಎಂದರು. ಇದನ್ನೂ ಓದಿ: Umesh Katti Obituary: 6 ಪಕ್ಷದಿಂದ 8 ಬಾರಿ ಶಾಸಕರಾಗಿದ್ದ ಉಮೇಶ್ ಕತ್ತಿ

ಆತಂಕದ ನಡುವೆಯೋ ಜನೋತ್ಸವಕ್ಕೆ ಸಿದ್ಧತೆ

ಇನ್ನು ಉಮೇಶ್ ಕತ್ತಿ ವಿಧಿವಶ ಹಿನ್ನೆಲೆ ಜನೋತ್ಸವಕ್ಕೆ ಮತ್ತೆ ಆತಂಕ ಎದುರಾಗಿದೆ. ಆದ್ರೆ ಆತಂಕದ ನಡುವೆಯೇ BJP ಜನೋತ್ಸವ ಸಮಾವೇಶಕ್ಕೆ ಸಿದ್ಧತೆ ನಡೆಸಿದೆ. ನಾಳೆ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ನಡೆಯಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರ ಸಮೀಪ ಬೃಹತ್ ವೇದಿಕೆ ಸಿದ್ಧವಾಗುತ್ತಿದೆ. ಸದ್ಯ ಜನೋತ್ಸವ ಸಮಾವೇಶ ನಡೆಯುವ ಸ್ಥಳ ಬಿಕೋ ಎನ್ನುತ್ತಿದೆ.

ಸುಮಾರು 3 ಲಕ್ಷ ಜನ ಸೇರಿಸಲು ಬಿಜೆಪಿ ಪ್ಲಾನ್ ಮಾಡಿತ್ತು. ಪ್ರವೀಣ್ ಹತ್ಯೆ ಆದ ವೇಳೆ ಮೊದಲ ಜನೋತ್ಸವ ರದ್ದು ಮಾಡಿದ್ದರು. ಆದ್ರೆ ಈಗ ಮತ್ತೆ ಅದೇ ಜಾಗದಲ್ಲಿ ‌ಜನೋತ್ಸವಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ಜನೋತ್ಸವ ನಡೆಯುತ್ತೋ ಇಲ್ಲವೋ ಎಂಬ ಆತಂಕದಲ್ಲಿ ಸ್ಥಳೀಯ ನಾಯಕರಿದ್ದಾರೆ. ಈಗಾಗಲೇ 20 ಎಕ್ಕರೆಗೂ ಹೆಚ್ಚಿನ ಜಾಗದಲ್ಲಿ ಜರ್ಮನ್ ಮಾದರಿಯ ಪೆಂಡಲ್ ಹಾಕಲಾಗಿದೆ. ಚೇರ್ ಗಳನ್ನೂ ಹಾಕಿ ಸಿದ್ದಪಡಿಸಲಾಗಿದೆ. ರಸ್ತೆಯುದ್ದಕ್ಕೂ ಫ್ಲೆಕ್ಸ್​ಗಳನ್ನ ಹಾಕಿ ಸಿದ್ದತೆ ಮಾಡಿಕೊಳ್ಳಲಾಗಿದೆ.

Published On - 11:11 am, Wed, 7 September 22

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ