AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಿ ಮೇಕೆಗಳಿಗೆ ಬ್ಲೂಟಂಗ್​ ಕಾಯಿಲೆ ಬರುತ್ತೆ, ಆದಷ್ಟು ಬೇಗ ಲಸಿಕೆ ನೀಡಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಆಗ್ರಹ

ವಿಧಾನಸಭೆಯಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆಗಳು ಬರುವ ಬಗ್ಗೆ ಚರ್ಚೆ ನಡೆದಿದ್ದು ಕಾಯಿಲೆಗೆ ಆದಷ್ಟು ಬೇಗ ಲಸಿಕೆ ನೀಡುವಂತೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕುರಿ ಮೇಕೆಗಳಿಗೆ ಬ್ಲೂಟಂಗ್​ ಕಾಯಿಲೆ ಬರುತ್ತೆ, ಆದಷ್ಟು ಬೇಗ ಲಸಿಕೆ ನೀಡಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ
TV9 Web
| Edited By: |

Updated on:Sep 20, 2022 | 1:41 PM

Share

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆಗಳು ಬಂದು ಅವುಗಳು ಸಾಯುವ ಬಗ್ಗೆ, ಬ್ಲೂಟಂಗ್​ ಕಾಯಿಲೆಯ ಲಸಿಕೆ ಕೊರತೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆ ಹೆಚ್ಚಾಗಿದೆ. ಹೀಗಾಗಿ ಈ ಬಗ್ಗೆ ಗಮನ ಹರಿಸುವಂತೆ ಸಿದ್ದರಾಮಯ್ಯ(Siddaramaiah) ಮನವಿ ಮಾಡಿದ್ದಾರೆ.

ವಿಧಾನಸಭೆಯ ಶೂನ್ಯವೇಳೆಯಲ್ಲಿ ಸಿದ್ದರಾಮಯ್ಯ, ಕುರಿ ಮೇಕೆಗಳಿಗೆ ಮಳೆ ಶೀತ ಕಾರಣಕ್ಕಾಗಿ ಬ್ಲೂಟಂಗ್​ ಕಾಯಿಲೆ ಬರುತ್ತದೆ. ಇದರಿಂದ ಕುರಿಗಳು ಸಾವನ್ನಪ್ಪುತ್ತವೆ. ಕುರಿ ಮಾಲೀಕರಿಗೆ ಬಹಳ ನಷ್ಟವಾಗುತ್ತದೆ. ಹೀಗಾಗಿ ಬ್ಲೂಟಂಗ್​ ಕಾಯಿಲೆ ತಡೆಯಲು ಲಸಿಕೆ ಹಾಕಿಸಬೇಕು ಎಂದರು. ರಾಜ್ಯದಲ್ಲಿ ಒಂದು ಕೋಟಿ ಹತ್ತು ಲಕ್ಷ ಕುರಿ, 61 ಲಕ್ಷ ಮೇಕೆಗಳಿವೆ. ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ರೋಗದಿಂದ ಕುರಿಗಳು ಸಾಯುತ್ತವೆ. ಇದರಿಂದ ವ್ಯಾಪಕವಾಗಿ ಲಸಿಕೆ ಕುರಿಗಳಿಗೆ ಹಾಕಬೇಕು ಎಂದು ಆಗ್ರಹಿಸಿದರು. ಬಾಗಲಕೋಟೆಯಲ್ಲೇ ಎರಡೂವರೆ ಲಕ್ಷ ಕುರಿಗಳಿವೆ. ಆದ್ರೆ ಸರ್ಕಾರ ಕೇವಲ 50 ಸಾವಿರ ಲಸಿಕೆ ಮಾತ್ರ ಪೂರೈಸಿದೆ. ಉಳಿದದನ್ನೂ ಪೂರೈಸುವುದು ಯಾವಾಗ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: Protein Powder: ವಿಧಾನಸೌಧದಲ್ಲಿ ಪ್ರತಿಧ್ವನಿಸಿದ ಪ್ರೋಟೀನ್ ಪೌಡರ್ ದಂಧೆ: ಈ ಪುಡಿ ಅದೆಷ್ಟು ಅಪಾಯಕಾರಿ? ಇಲ್ಲಿದೆ ವಿವರ

ಸಿದ್ದರಾಮಯ್ಯ ಪ್ರಶ್ನೆಗೆ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಉತ್ತರಿಸಿದ್ದು, ಕೋಲಾರ, ಬಾಗಲಕೋಟೆ, ಕೊಪ್ಪಳ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆ ಇದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆ ಹೆಚ್ಚಾಗಿದೆ. ಶೀಘ್ರದಲ್ಲೇ ಕುರಿಗಳ ಕಾಯಿಲೆ ತಡೆಗೆ 1 ಲಕ್ಷ ಲಸಿಕೆ ಪೂರೈಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:41 pm, Tue, 20 September 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್