AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಿ ಮೇಕೆಗಳಿಗೆ ಬ್ಲೂಟಂಗ್​ ಕಾಯಿಲೆ ಬರುತ್ತೆ, ಆದಷ್ಟು ಬೇಗ ಲಸಿಕೆ ನೀಡಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಆಗ್ರಹ

ವಿಧಾನಸಭೆಯಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆಗಳು ಬರುವ ಬಗ್ಗೆ ಚರ್ಚೆ ನಡೆದಿದ್ದು ಕಾಯಿಲೆಗೆ ಆದಷ್ಟು ಬೇಗ ಲಸಿಕೆ ನೀಡುವಂತೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕುರಿ ಮೇಕೆಗಳಿಗೆ ಬ್ಲೂಟಂಗ್​ ಕಾಯಿಲೆ ಬರುತ್ತೆ, ಆದಷ್ಟು ಬೇಗ ಲಸಿಕೆ ನೀಡಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ
TV9 Web
| Edited By: ಆಯೇಷಾ ಬಾನು|

Updated on:Sep 20, 2022 | 1:41 PM

Share

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆಗಳು ಬಂದು ಅವುಗಳು ಸಾಯುವ ಬಗ್ಗೆ, ಬ್ಲೂಟಂಗ್​ ಕಾಯಿಲೆಯ ಲಸಿಕೆ ಕೊರತೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆ ಹೆಚ್ಚಾಗಿದೆ. ಹೀಗಾಗಿ ಈ ಬಗ್ಗೆ ಗಮನ ಹರಿಸುವಂತೆ ಸಿದ್ದರಾಮಯ್ಯ(Siddaramaiah) ಮನವಿ ಮಾಡಿದ್ದಾರೆ.

ವಿಧಾನಸಭೆಯ ಶೂನ್ಯವೇಳೆಯಲ್ಲಿ ಸಿದ್ದರಾಮಯ್ಯ, ಕುರಿ ಮೇಕೆಗಳಿಗೆ ಮಳೆ ಶೀತ ಕಾರಣಕ್ಕಾಗಿ ಬ್ಲೂಟಂಗ್​ ಕಾಯಿಲೆ ಬರುತ್ತದೆ. ಇದರಿಂದ ಕುರಿಗಳು ಸಾವನ್ನಪ್ಪುತ್ತವೆ. ಕುರಿ ಮಾಲೀಕರಿಗೆ ಬಹಳ ನಷ್ಟವಾಗುತ್ತದೆ. ಹೀಗಾಗಿ ಬ್ಲೂಟಂಗ್​ ಕಾಯಿಲೆ ತಡೆಯಲು ಲಸಿಕೆ ಹಾಕಿಸಬೇಕು ಎಂದರು. ರಾಜ್ಯದಲ್ಲಿ ಒಂದು ಕೋಟಿ ಹತ್ತು ಲಕ್ಷ ಕುರಿ, 61 ಲಕ್ಷ ಮೇಕೆಗಳಿವೆ. ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ರೋಗದಿಂದ ಕುರಿಗಳು ಸಾಯುತ್ತವೆ. ಇದರಿಂದ ವ್ಯಾಪಕವಾಗಿ ಲಸಿಕೆ ಕುರಿಗಳಿಗೆ ಹಾಕಬೇಕು ಎಂದು ಆಗ್ರಹಿಸಿದರು. ಬಾಗಲಕೋಟೆಯಲ್ಲೇ ಎರಡೂವರೆ ಲಕ್ಷ ಕುರಿಗಳಿವೆ. ಆದ್ರೆ ಸರ್ಕಾರ ಕೇವಲ 50 ಸಾವಿರ ಲಸಿಕೆ ಮಾತ್ರ ಪೂರೈಸಿದೆ. ಉಳಿದದನ್ನೂ ಪೂರೈಸುವುದು ಯಾವಾಗ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: Protein Powder: ವಿಧಾನಸೌಧದಲ್ಲಿ ಪ್ರತಿಧ್ವನಿಸಿದ ಪ್ರೋಟೀನ್ ಪೌಡರ್ ದಂಧೆ: ಈ ಪುಡಿ ಅದೆಷ್ಟು ಅಪಾಯಕಾರಿ? ಇಲ್ಲಿದೆ ವಿವರ

ಸಿದ್ದರಾಮಯ್ಯ ಪ್ರಶ್ನೆಗೆ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಉತ್ತರಿಸಿದ್ದು, ಕೋಲಾರ, ಬಾಗಲಕೋಟೆ, ಕೊಪ್ಪಳ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆ ಇದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆ ಹೆಚ್ಚಾಗಿದೆ. ಶೀಘ್ರದಲ್ಲೇ ಕುರಿಗಳ ಕಾಯಿಲೆ ತಡೆಗೆ 1 ಲಕ್ಷ ಲಸಿಕೆ ಪೂರೈಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:41 pm, Tue, 20 September 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ