AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರಿ ಮೇಕೆಗಳಿಗೆ ಬ್ಲೂಟಂಗ್​ ಕಾಯಿಲೆ ಬರುತ್ತೆ, ಆದಷ್ಟು ಬೇಗ ಲಸಿಕೆ ನೀಡಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಆಗ್ರಹ

ವಿಧಾನಸಭೆಯಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆಗಳು ಬರುವ ಬಗ್ಗೆ ಚರ್ಚೆ ನಡೆದಿದ್ದು ಕಾಯಿಲೆಗೆ ಆದಷ್ಟು ಬೇಗ ಲಸಿಕೆ ನೀಡುವಂತೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕುರಿ ಮೇಕೆಗಳಿಗೆ ಬ್ಲೂಟಂಗ್​ ಕಾಯಿಲೆ ಬರುತ್ತೆ, ಆದಷ್ಟು ಬೇಗ ಲಸಿಕೆ ನೀಡಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ
TV9 Web
| Updated By: ಆಯೇಷಾ ಬಾನು|

Updated on:Sep 20, 2022 | 1:41 PM

Share

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆಗಳು ಬಂದು ಅವುಗಳು ಸಾಯುವ ಬಗ್ಗೆ, ಬ್ಲೂಟಂಗ್​ ಕಾಯಿಲೆಯ ಲಸಿಕೆ ಕೊರತೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆ ಹೆಚ್ಚಾಗಿದೆ. ಹೀಗಾಗಿ ಈ ಬಗ್ಗೆ ಗಮನ ಹರಿಸುವಂತೆ ಸಿದ್ದರಾಮಯ್ಯ(Siddaramaiah) ಮನವಿ ಮಾಡಿದ್ದಾರೆ.

ವಿಧಾನಸಭೆಯ ಶೂನ್ಯವೇಳೆಯಲ್ಲಿ ಸಿದ್ದರಾಮಯ್ಯ, ಕುರಿ ಮೇಕೆಗಳಿಗೆ ಮಳೆ ಶೀತ ಕಾರಣಕ್ಕಾಗಿ ಬ್ಲೂಟಂಗ್​ ಕಾಯಿಲೆ ಬರುತ್ತದೆ. ಇದರಿಂದ ಕುರಿಗಳು ಸಾವನ್ನಪ್ಪುತ್ತವೆ. ಕುರಿ ಮಾಲೀಕರಿಗೆ ಬಹಳ ನಷ್ಟವಾಗುತ್ತದೆ. ಹೀಗಾಗಿ ಬ್ಲೂಟಂಗ್​ ಕಾಯಿಲೆ ತಡೆಯಲು ಲಸಿಕೆ ಹಾಕಿಸಬೇಕು ಎಂದರು. ರಾಜ್ಯದಲ್ಲಿ ಒಂದು ಕೋಟಿ ಹತ್ತು ಲಕ್ಷ ಕುರಿ, 61 ಲಕ್ಷ ಮೇಕೆಗಳಿವೆ. ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ರೋಗದಿಂದ ಕುರಿಗಳು ಸಾಯುತ್ತವೆ. ಇದರಿಂದ ವ್ಯಾಪಕವಾಗಿ ಲಸಿಕೆ ಕುರಿಗಳಿಗೆ ಹಾಕಬೇಕು ಎಂದು ಆಗ್ರಹಿಸಿದರು. ಬಾಗಲಕೋಟೆಯಲ್ಲೇ ಎರಡೂವರೆ ಲಕ್ಷ ಕುರಿಗಳಿವೆ. ಆದ್ರೆ ಸರ್ಕಾರ ಕೇವಲ 50 ಸಾವಿರ ಲಸಿಕೆ ಮಾತ್ರ ಪೂರೈಸಿದೆ. ಉಳಿದದನ್ನೂ ಪೂರೈಸುವುದು ಯಾವಾಗ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: Protein Powder: ವಿಧಾನಸೌಧದಲ್ಲಿ ಪ್ರತಿಧ್ವನಿಸಿದ ಪ್ರೋಟೀನ್ ಪೌಡರ್ ದಂಧೆ: ಈ ಪುಡಿ ಅದೆಷ್ಟು ಅಪಾಯಕಾರಿ? ಇಲ್ಲಿದೆ ವಿವರ

ಸಿದ್ದರಾಮಯ್ಯ ಪ್ರಶ್ನೆಗೆ ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಉತ್ತರಿಸಿದ್ದು, ಕೋಲಾರ, ಬಾಗಲಕೋಟೆ, ಕೊಪ್ಪಳ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆ ಇದೆ. ಬಾಗಲಕೋಟೆ ಜಿಲ್ಲೆಯಲ್ಲಿ ಕುರಿಗಳಿಗೆ ಬ್ಲೂಟಂಗ್​ ಕಾಯಿಲೆ ಹೆಚ್ಚಾಗಿದೆ. ಶೀಘ್ರದಲ್ಲೇ ಕುರಿಗಳ ಕಾಯಿಲೆ ತಡೆಗೆ 1 ಲಕ್ಷ ಲಸಿಕೆ ಪೂರೈಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:41 pm, Tue, 20 September 22

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?