AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ನಿಂದ ಪಾದಯಾತ್ರೆ: ಸಿದ್ದರಾಮಯ್ಯ ಮಾಹಿತಿ

ಡಿಸೆಂಬರ್​ ಮೊದಲ ವಾರದಲ್ಲಿ ಪಾದಯಾತ್ರೆ ಮಾಡುತ್ತೇವೆ. ಮೇಕೆದಾಟುನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತೇವೆ. ಎಷ್ಟು ದಿನ ಪಾದಯಾತ್ರೆ ಎಂಬುದನ್ನು ಶೀಘ್ರದಲ್ಲೇ ತಿಳಿಸ್ತೇವೆ. ಇದು ವೋಟಿಗಾಗಿ ಮಾಡುತ್ತಿರುವ ಪಾದಯಾತ್ರೆ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ನಿಂದ ಪಾದಯಾತ್ರೆ: ಸಿದ್ದರಾಮಯ್ಯ ಮಾಹಿತಿ
ಸಿದ್ದರಾಮಯ್ಯ
TV9 Web
| Edited By: |

Updated on: Nov 07, 2021 | 7:28 PM

Share

ಬೆಂಗಳೂರು: ಮೇಕೆದಾಟು ಕುಡಿವ ನೀರಿನ ಯೋಜನೆಗೆ ಡಿಪಿಆರ್ ಮಾಡಿದ್ದೆವು. ನಮ್ಮ ಸರ್ಕಾರದ ಅವಧಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ಪರಿಸರ ಇಲಾಖೆಗೆ ಕಳುಹಿಸಿಕೊಟ್ಟಿದ್ದೆವು. ತಮಿಳುನಾಡು ಸರ್ಕಾರ ಸುಮ್ಮನೆ ಕ್ಯಾತೆ ತೆಗೆಯುತ್ತಿದೆ. ಮೇಕೆದಾಟು ಯೋಜನೆಯಿಂದ 2 ರಾಜ್ಯಗಳಿಗೂ ನೆರವಾಗುತ್ತೆ. ಕರ್ನಾಟಕ, ತಮಿಳುನಾಡು ರಾಜ್ಯದ ಜನರಿಗೆ ಸಹಾಯವಾಗುತ್ತೆ. ತಮಿಳುನಾಡಿಗೆ ನೀರು ಬೇಕೆಂದರೆ ಇಲ್ಲಿಂದಲೂ ಹರಿಸಬಹುದು ಎಂದು ಬೆಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು (ನವೆಂಬರ್ 7) ಹೇಳಿಕೆ ನೀಡಿದ್ದಾರೆ.

ರಾಜಕೀಯ ಕಾರಣಕ್ಕಾಗಿ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ. ನಮ್ಮ ಜಾಗದಲ್ಲಿ ಯೋಜನೆ ಜಾರಿಮಾಡಲು, ಕಾನೂನಾತ್ಮಕವಾಗಿ ಯೋಜನೆ ಮಾಡಲು ನಮಗೆ ಅವಕಾಶವಿದೆ. ಹೀಗಾಗಿ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡ್ತೇವೆ. ಕೂಡಲೇ ಕೇಂದ್ರ ಪರಿಸರ ಇಲಾಖೆ ಇದಕ್ಕೆ ಕ್ಲಿಯರೆನ್ಸ್​ ಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ಯೋಜನೆ ಆರಂಭಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತೇವೆ. ಡಿಸೆಂಬರ್​ ಮೊದಲ ವಾರದಲ್ಲಿ ಪಾದಯಾತ್ರೆ ಮಾಡುತ್ತೇವೆ. ಮೇಕೆದಾಟುನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತೇವೆ. ಎಷ್ಟು ದಿನ ಪಾದಯಾತ್ರೆ ಎಂಬುದನ್ನು ಶೀಘ್ರದಲ್ಲೇ ತಿಳಿಸ್ತೇವೆ. ಇದು ವೋಟಿಗಾಗಿ ಮಾಡುತ್ತಿರುವ ಪಾದಯಾತ್ರೆ ಅಲ್ಲ. ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡುತ್ತಿಲ್ಲ. ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಗಾಗಿ ಹೋರಾಟ ಕೈಗೊಂಡಿದ್ದೇವೆ. ರಾಜಕೀಯ ಕಾರಣಕ್ಕಾಗಿ ತಮಿಳುನಾಡು ಯೋಜನೆಗೆ ವಿರೋಧ ಮಾಡ್ತಿದೆ. ಕಾಂಗ್ರೆಸ್ ಯಾವಾಗಲೂ ಕರ್ನಾಟಕ, ಕನ್ನಡಿಗರ ಪರ ಇರುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರದ ಮೇಲೆ ಒತ್ತಡ ತರಲು ಪಾದಯಾತ್ರೆ: ಡಿಕೆ ಶಿವಕುಮಾರ್ ರಾಜಕೀಯ ಒತ್ತಡದಿಂದ ಮೇಕೆದಾಟು ಯೋಜನೆ ಜಾರಿ ಮಾಡಿಲ್ಲ. ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್‌ನಿಂದ ‌ಹೋರಾಟ ಮಾಡುತ್ತೇವೆ. ಡಿಸೆಂಬರ್ ಮೊದಲ ಅಥವಾ 2ನೇ ವಾರದಲ್ಲಿ ಬೃಹತ್ ಹೋರಾಟ ಕೈಗೊಂಳ್ಳುತ್ತೇವೆ. ಮೇಕೆದಾಟಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಕಾರ್ಯಕ್ರಮ ಇದೆ. ಯಾರುಬೇಕಾದ್ರೂ ಹೋರಾಟದಲ್ಲಿ ಕೈ ಜೋಡಿಸಬಹುದು. ಮೇಕೆದಾಟು ಯೋಜನೆಗೆ ಕೇಂದ್ರದಿಂದ ಎನ್‌ಒಸಿ ಬೇಕು ಅಷ್ಟೇ. ಕೇಂದ್ರದ ಮೇಲೆ ಒತ್ತಡ ತರಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಳಗ್ಗೆಯಿಂದ ಹಿರಿಯ ನಾಯಕರು, ಎಲ್ಲ ಘಟಕಗಳ ಜತೆ ಸಭೆ ನಡೆಸಲಾಗಿದೆ. ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯಾದ್ಯಂತ ಜನ ಜಾಗೃತಿ ಅಭಿಯಾನವನ್ನ ನಡೆಸುತ್ತೇವೆ. ಪ್ರತಿ ಕ್ಷೇತ್ರದಲ್ಲೂ ಪಕ್ಷದವತಿಯಿಂದ ಜನ ಜಾಗೃತಿ ಅಭಿಯಾನ ಮಾಡುತ್ತೇವೆ. ಕೇಂದ್ರ-ರಾಜ್ಯಸರ್ಕಾರದ ಲೋಪಗಳ ಬಗ್ಗೆ ಜಾಗೃತಿ ಮೂಡಿಸ್ತೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್​ ಪಕ್ಷದಲ್ಲಿ ಒಗ್ಗಟ್ಟಿನ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್ 12 ವರ್ಷಗಳ ನಂತರ ಎಐಸಿಸಿ ಚುನಾವಣಾ ವೇಳಾಪಟ್ಟಿ ನಿಗದಿ ಮಾಡಲಾಗಿದೆ. ಆಫ್‌ಲೈನ್, ಆನ್‌ಲೈನ್‌ನಲ್ಲಿ ಸದಸ್ಯರ ನೋಂದಣಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಬೆಂಗಳೂರಿನಲ್ಲಿ ನ.14ರಂದು ಸದಸ್ಯರ ನೋಂದಣಿಗೆ ಚಾಲನೆ ಕೊಡಲಾಗುತ್ತದೆ. ಕಾಂಗ್ರೆಸ್‌ನ ಹಳೇ ಸದಸ್ಯರೂ ಸದಸ್ಯತ್ವ ನವೀಕರಣ ಮಾಡಬೇಕು. ಹೊಸ ಸದಸ್ಯರಾಗಲು 5 ರೂಪಾಯಿ ನೀಡಿ ಅರ್ಜಿ ತುಂಬಬೇಕು. ಹಳೇ ಸದಸ್ಯರು 100 ರೂಪಾಯಿ ನೀಡಿ ಅರ್ಜಿ ಪಡೆಯಬೇಕು. ನೆಹರುರವರ ಹುಟ್ಟುಹಬ್ಬಕ್ಕೆ ಎಲ್ಲಾ ಘಟಕಗಳನ್ನು ಆಹ್ವಾನಿಸುತ್ತೇವೆ. ದೇಶಕ್ಕೆ ಸ್ವಾತಂತ್ರ್ಯ ಕೊಟ್ಟ ಕಾಂಗ್ರೆಸ್‌ಗೆ ಇದು ದೊಡ್ಡ ಕಾರ್ಯಕ್ರಮ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ನಾವು ಒಗ್ಗಟ್ಟಾಗಿ ಹೋಗಿದ್ದಕ್ಕೆ ಹಾನಗಲ್‌ನಲ್ಲಿ ಗೆಲುವು ಲಭಿಸಿದೆ. ಒಗ್ಗಟ್ಟು ಇಲ್ಲದಿದ್ದರೆ ಸಿಂದಗಿಯಲ್ಲಿ ಆದಂತೆ ಆಗುತ್ತದೆ. ಸಿಂದಗಿಯಲ್ಲಿ ಅಭ್ಯರ್ಥಿ ಬದಲಾಯಿಸಿದ್ರೂ ಗೆಲುವು ಸಿಕ್ಕಿಲ್ಲ. ಕಾರ್ಯಕರ್ತರಲ್ಲಿ ಒಗ್ಗಟ್ಟು ಇಲ್ಲದಿರುವುದೇ ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ಬರುತ್ತದೆ. ಸ್ಥಳೀಯ ಚುನಾವಣೆಗಳನ್ನು ನಾವು ಎದುರಿಸಬೇಕಾಗುತ್ತೆ. ನಾವೆಲ್ಲರೂ ಒಗ್ಗಟ್ಟಾಗಿ ಹೋದರೆ ಕಾಂಗ್ರೆಸ್ ಗೆಲುವು ಖಚಿತ ಎಂದು ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಒಗ್ಗಟ್ಟಿನ ವಿಚಾರವಾಗಿ ಮಾತನಾಡಿದ್ದಾರೆ. ಬೆಲೆ ಏರಿಕೆಯಿಂದ ಆಗುವ ಸಮಸ್ಯೆ ಏನೆಂದು ಗೊತ್ತಾಗಿದೆ. ಹೀಗಾಗಿ ಬೈಎಲೆಕ್ಷನ್​ನಲ್ಲಿ ಜನ ಕಾಂಗ್ರೆಸ್ ಪರ ನಿಂತಿದ್ದಾರೆ. ಈ ಅಲೆಯನ್ನ ನಾವು ಮುಂದುವರಿಸಿಕೊಂಡು ಹೋಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಿಟ್ ಕಾಯಿನ್ ವಿಚಾರ ಡೈವರ್ಟ್ ಮಾಡಲು ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಲಾಗುತ್ತಿದೆ: ರಾಮಲಿಂಗಾರೆಡ್ಡಿ

ಇದನ್ನೂ ಓದಿ: ಗ್ಯಾಸ್, ಅಡುಗೆ ಎಣ್ಣೆ ದರ ಇಳಿಸದಿದ್ದರೆ 2023ರ ಚುನಾವಣೆಯಲ್ಲೂ ಬಿಜೆಪಿಗೆ ಸೋಲಾಗಲಿದೆ: ಡಿಕೆ ಶಿವಕುಮಾರ್

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ