AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ನಿಂದ ಪಾದಯಾತ್ರೆ: ಸಿದ್ದರಾಮಯ್ಯ ಮಾಹಿತಿ

ಡಿಸೆಂಬರ್​ ಮೊದಲ ವಾರದಲ್ಲಿ ಪಾದಯಾತ್ರೆ ಮಾಡುತ್ತೇವೆ. ಮೇಕೆದಾಟುನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತೇವೆ. ಎಷ್ಟು ದಿನ ಪಾದಯಾತ್ರೆ ಎಂಬುದನ್ನು ಶೀಘ್ರದಲ್ಲೇ ತಿಳಿಸ್ತೇವೆ. ಇದು ವೋಟಿಗಾಗಿ ಮಾಡುತ್ತಿರುವ ಪಾದಯಾತ್ರೆ ಅಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್​ನಿಂದ ಪಾದಯಾತ್ರೆ: ಸಿದ್ದರಾಮಯ್ಯ ಮಾಹಿತಿ
ಸಿದ್ದರಾಮಯ್ಯ
TV9 Web
| Edited By: |

Updated on: Nov 07, 2021 | 7:28 PM

Share

ಬೆಂಗಳೂರು: ಮೇಕೆದಾಟು ಕುಡಿವ ನೀರಿನ ಯೋಜನೆಗೆ ಡಿಪಿಆರ್ ಮಾಡಿದ್ದೆವು. ನಮ್ಮ ಸರ್ಕಾರದ ಅವಧಿಯಲ್ಲಿ ಡಿಪಿಆರ್ ಸಿದ್ಧಪಡಿಸಿ ಪರಿಸರ ಇಲಾಖೆಗೆ ಕಳುಹಿಸಿಕೊಟ್ಟಿದ್ದೆವು. ತಮಿಳುನಾಡು ಸರ್ಕಾರ ಸುಮ್ಮನೆ ಕ್ಯಾತೆ ತೆಗೆಯುತ್ತಿದೆ. ಮೇಕೆದಾಟು ಯೋಜನೆಯಿಂದ 2 ರಾಜ್ಯಗಳಿಗೂ ನೆರವಾಗುತ್ತೆ. ಕರ್ನಾಟಕ, ತಮಿಳುನಾಡು ರಾಜ್ಯದ ಜನರಿಗೆ ಸಹಾಯವಾಗುತ್ತೆ. ತಮಿಳುನಾಡಿಗೆ ನೀರು ಬೇಕೆಂದರೆ ಇಲ್ಲಿಂದಲೂ ಹರಿಸಬಹುದು ಎಂದು ಬೆಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು (ನವೆಂಬರ್ 7) ಹೇಳಿಕೆ ನೀಡಿದ್ದಾರೆ.

ರಾಜಕೀಯ ಕಾರಣಕ್ಕಾಗಿ ತಮಿಳುನಾಡು ಕ್ಯಾತೆ ತೆಗೆಯುತ್ತಿದೆ. ನಮ್ಮ ಜಾಗದಲ್ಲಿ ಯೋಜನೆ ಜಾರಿಮಾಡಲು, ಕಾನೂನಾತ್ಮಕವಾಗಿ ಯೋಜನೆ ಮಾಡಲು ನಮಗೆ ಅವಕಾಶವಿದೆ. ಹೀಗಾಗಿ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡ್ತೇವೆ. ಕೂಡಲೇ ಕೇಂದ್ರ ಪರಿಸರ ಇಲಾಖೆ ಇದಕ್ಕೆ ಕ್ಲಿಯರೆನ್ಸ್​ ಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ಯೋಜನೆ ಆರಂಭಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತೇವೆ. ಡಿಸೆಂಬರ್​ ಮೊದಲ ವಾರದಲ್ಲಿ ಪಾದಯಾತ್ರೆ ಮಾಡುತ್ತೇವೆ. ಮೇಕೆದಾಟುನಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತೇವೆ. ಎಷ್ಟು ದಿನ ಪಾದಯಾತ್ರೆ ಎಂಬುದನ್ನು ಶೀಘ್ರದಲ್ಲೇ ತಿಳಿಸ್ತೇವೆ. ಇದು ವೋಟಿಗಾಗಿ ಮಾಡುತ್ತಿರುವ ಪಾದಯಾತ್ರೆ ಅಲ್ಲ. ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡುತ್ತಿಲ್ಲ. ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಗಾಗಿ ಹೋರಾಟ ಕೈಗೊಂಡಿದ್ದೇವೆ. ರಾಜಕೀಯ ಕಾರಣಕ್ಕಾಗಿ ತಮಿಳುನಾಡು ಯೋಜನೆಗೆ ವಿರೋಧ ಮಾಡ್ತಿದೆ. ಕಾಂಗ್ರೆಸ್ ಯಾವಾಗಲೂ ಕರ್ನಾಟಕ, ಕನ್ನಡಿಗರ ಪರ ಇರುತ್ತೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರದ ಮೇಲೆ ಒತ್ತಡ ತರಲು ಪಾದಯಾತ್ರೆ: ಡಿಕೆ ಶಿವಕುಮಾರ್ ರಾಜಕೀಯ ಒತ್ತಡದಿಂದ ಮೇಕೆದಾಟು ಯೋಜನೆ ಜಾರಿ ಮಾಡಿಲ್ಲ. ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್‌ನಿಂದ ‌ಹೋರಾಟ ಮಾಡುತ್ತೇವೆ. ಡಿಸೆಂಬರ್ ಮೊದಲ ಅಥವಾ 2ನೇ ವಾರದಲ್ಲಿ ಬೃಹತ್ ಹೋರಾಟ ಕೈಗೊಂಳ್ಳುತ್ತೇವೆ. ಮೇಕೆದಾಟಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಕಾರ್ಯಕ್ರಮ ಇದೆ. ಯಾರುಬೇಕಾದ್ರೂ ಹೋರಾಟದಲ್ಲಿ ಕೈ ಜೋಡಿಸಬಹುದು. ಮೇಕೆದಾಟು ಯೋಜನೆಗೆ ಕೇಂದ್ರದಿಂದ ಎನ್‌ಒಸಿ ಬೇಕು ಅಷ್ಟೇ. ಕೇಂದ್ರದ ಮೇಲೆ ಒತ್ತಡ ತರಲು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಳಗ್ಗೆಯಿಂದ ಹಿರಿಯ ನಾಯಕರು, ಎಲ್ಲ ಘಟಕಗಳ ಜತೆ ಸಭೆ ನಡೆಸಲಾಗಿದೆ. ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯಾದ್ಯಂತ ಜನ ಜಾಗೃತಿ ಅಭಿಯಾನವನ್ನ ನಡೆಸುತ್ತೇವೆ. ಪ್ರತಿ ಕ್ಷೇತ್ರದಲ್ಲೂ ಪಕ್ಷದವತಿಯಿಂದ ಜನ ಜಾಗೃತಿ ಅಭಿಯಾನ ಮಾಡುತ್ತೇವೆ. ಕೇಂದ್ರ-ರಾಜ್ಯಸರ್ಕಾರದ ಲೋಪಗಳ ಬಗ್ಗೆ ಜಾಗೃತಿ ಮೂಡಿಸ್ತೇವೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್​ ಪಕ್ಷದಲ್ಲಿ ಒಗ್ಗಟ್ಟಿನ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್ 12 ವರ್ಷಗಳ ನಂತರ ಎಐಸಿಸಿ ಚುನಾವಣಾ ವೇಳಾಪಟ್ಟಿ ನಿಗದಿ ಮಾಡಲಾಗಿದೆ. ಆಫ್‌ಲೈನ್, ಆನ್‌ಲೈನ್‌ನಲ್ಲಿ ಸದಸ್ಯರ ನೋಂದಣಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಬೆಂಗಳೂರಿನಲ್ಲಿ ನ.14ರಂದು ಸದಸ್ಯರ ನೋಂದಣಿಗೆ ಚಾಲನೆ ಕೊಡಲಾಗುತ್ತದೆ. ಕಾಂಗ್ರೆಸ್‌ನ ಹಳೇ ಸದಸ್ಯರೂ ಸದಸ್ಯತ್ವ ನವೀಕರಣ ಮಾಡಬೇಕು. ಹೊಸ ಸದಸ್ಯರಾಗಲು 5 ರೂಪಾಯಿ ನೀಡಿ ಅರ್ಜಿ ತುಂಬಬೇಕು. ಹಳೇ ಸದಸ್ಯರು 100 ರೂಪಾಯಿ ನೀಡಿ ಅರ್ಜಿ ಪಡೆಯಬೇಕು. ನೆಹರುರವರ ಹುಟ್ಟುಹಬ್ಬಕ್ಕೆ ಎಲ್ಲಾ ಘಟಕಗಳನ್ನು ಆಹ್ವಾನಿಸುತ್ತೇವೆ. ದೇಶಕ್ಕೆ ಸ್ವಾತಂತ್ರ್ಯ ಕೊಟ್ಟ ಕಾಂಗ್ರೆಸ್‌ಗೆ ಇದು ದೊಡ್ಡ ಕಾರ್ಯಕ್ರಮ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ನಾವು ಒಗ್ಗಟ್ಟಾಗಿ ಹೋಗಿದ್ದಕ್ಕೆ ಹಾನಗಲ್‌ನಲ್ಲಿ ಗೆಲುವು ಲಭಿಸಿದೆ. ಒಗ್ಗಟ್ಟು ಇಲ್ಲದಿದ್ದರೆ ಸಿಂದಗಿಯಲ್ಲಿ ಆದಂತೆ ಆಗುತ್ತದೆ. ಸಿಂದಗಿಯಲ್ಲಿ ಅಭ್ಯರ್ಥಿ ಬದಲಾಯಿಸಿದ್ರೂ ಗೆಲುವು ಸಿಕ್ಕಿಲ್ಲ. ಕಾರ್ಯಕರ್ತರಲ್ಲಿ ಒಗ್ಗಟ್ಟು ಇಲ್ಲದಿರುವುದೇ ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಚುನಾವಣೆ ಬರುತ್ತದೆ. ಸ್ಥಳೀಯ ಚುನಾವಣೆಗಳನ್ನು ನಾವು ಎದುರಿಸಬೇಕಾಗುತ್ತೆ. ನಾವೆಲ್ಲರೂ ಒಗ್ಗಟ್ಟಾಗಿ ಹೋದರೆ ಕಾಂಗ್ರೆಸ್ ಗೆಲುವು ಖಚಿತ ಎಂದು ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಒಗ್ಗಟ್ಟಿನ ವಿಚಾರವಾಗಿ ಮಾತನಾಡಿದ್ದಾರೆ. ಬೆಲೆ ಏರಿಕೆಯಿಂದ ಆಗುವ ಸಮಸ್ಯೆ ಏನೆಂದು ಗೊತ್ತಾಗಿದೆ. ಹೀಗಾಗಿ ಬೈಎಲೆಕ್ಷನ್​ನಲ್ಲಿ ಜನ ಕಾಂಗ್ರೆಸ್ ಪರ ನಿಂತಿದ್ದಾರೆ. ಈ ಅಲೆಯನ್ನ ನಾವು ಮುಂದುವರಿಸಿಕೊಂಡು ಹೋಗಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಿಟ್ ಕಾಯಿನ್ ವಿಚಾರ ಡೈವರ್ಟ್ ಮಾಡಲು ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಲಾಗುತ್ತಿದೆ: ರಾಮಲಿಂಗಾರೆಡ್ಡಿ

ಇದನ್ನೂ ಓದಿ: ಗ್ಯಾಸ್, ಅಡುಗೆ ಎಣ್ಣೆ ದರ ಇಳಿಸದಿದ್ದರೆ 2023ರ ಚುನಾವಣೆಯಲ್ಲೂ ಬಿಜೆಪಿಗೆ ಸೋಲಾಗಲಿದೆ: ಡಿಕೆ ಶಿವಕುಮಾರ್

Follow Us
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ