AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಿನ ಬುದ್ಧಿಜೀವಿಗಳು, ಬರಹಗಾರರಿಗೆ ರಕ್ಷಣೆ ಇಲ್ಲವಾಗಿದೆ. ರಕ್ಷಣೆ ನೀಡುವ ವಿಚಾರದಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು -ಸಿದ್ದರಾಮಯ್ಯ ಆಗ್ರಹ

ಟಿವಿಯೊಂದರಲ್ಲಿ ವ್ಯಕ್ತಿಯೊಬ್ಬ ನನಗೆ ಹಾಗೂ ಡಿಕೆ ಶಿವಕುಮಾರ್ಗೆ ಬೆದರಿಕೆ ಹಾಕಿದ್ದಾನೆ. ಇಬ್ಬರ ಮೇಲೆ ಗುಂಡು ಹಾರಿಸಬೇಕೆಂದು ಹೇಳಿಕೆ ನೀಡಿದ್ದಾನೆ. ಬರಹಗಾರರು, ಬುದ್ಧಿಜೀವಿಗಳಿಗೂ ಜೀವ ಬೆದರಿಕೆ ಇದೆ. ನೇರವಾಗಿ ಬೆದರಿಕೆ ಹಾಕಿದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.

ನಾಡಿನ ಬುದ್ಧಿಜೀವಿಗಳು, ಬರಹಗಾರರಿಗೆ ರಕ್ಷಣೆ ಇಲ್ಲವಾಗಿದೆ. ರಕ್ಷಣೆ ನೀಡುವ ವಿಚಾರದಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು -ಸಿದ್ದರಾಮಯ್ಯ ಆಗ್ರಹ
ಸಿದ್ದರಾಮಯ್ಯ
TV9 Web
| Edited By: |

Updated on:Jul 12, 2022 | 9:35 PM

Share

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯರಿಗೆ(Siddaramaiah) ಜೀವ ಬೆದರಿಕೆ ಪತ್ರ ಬಂದಿದ್ದು ಈ ಬಗ್ಗೆ ಸಿದ್ದರಾಮಯ್ಯ ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ. ನನಗೂ ಜೀವ ಬೆದರಿಕೆ ಪತ್ರ ಬಂದಿದೆ. ಜೀವ ಬೆದರಿಕೆ ಪತ್ರದ ಬಗ್ಗೆ ಡಿಜಿ-ಐಜಿಪಿಗೆ ಮಾಹಿತಿ ನೀಡಿದ್ದೇನೆ. ಜೀವ ಬೆದರಿಕೆ ಇದ್ದರು ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಫೇಸ್ಬುಕ್ನಲ್ಲಿ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

ಟಿವಿಯೊಂದರಲ್ಲಿ ವ್ಯಕ್ತಿಯೊಬ್ಬ ನನಗೆ ಹಾಗೂ ಡಿಕೆ ಶಿವಕುಮಾರ್ಗೆ ಬೆದರಿಕೆ ಹಾಕಿದ್ದಾನೆ. ಇಬ್ಬರ ಮೇಲೆ ಗುಂಡು ಹಾರಿಸಬೇಕೆಂದು ಹೇಳಿಕೆ ನೀಡಿದ್ದಾನೆ. ಬರಹಗಾರರು, ಬುದ್ಧಿಜೀವಿಗಳಿಗೂ ಜೀವ ಬೆದರಿಕೆ ಇದೆ. ನೇರವಾಗಿ ಬೆದರಿಕೆ ಹಾಕಿದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲಾ ಬೆದರಿಕೆ ಇದ್ದರೂ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ. ನಾಡಿನ ಬುದ್ಧಿಜೀವಿಗಳು, ಬರಹಗಾರರಿಗೆ ರಕ್ಷಣೆ ಇಲ್ಲವಾಗಿದೆ. ರಕ್ಷಣೆ ನೀಡುವ ವಿಚಾರದಲ್ಲಿ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಫೇಸ್ಬುಕ್ ಮೂಲಕ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕುಂ. ವೀರಭದ್ರಪ್ಪನವರಿಗೆ 6 ಪತ್ರ, ಬಂಜಗೆರೆ ಜಯಪ್ರಕಾಶ್ ಅವರಿಗೆ 5 ಪತ್ರ, ಬಿ.ಟಿ.ಲಲಿತಾ ನಾಯಕ್, ಬಿ.ಎಲ್ ವೇಣು, ಚಂದ್ರಶೇಖರ್ ತಾಳ್ಯ ಅವರಿಗೆ ತಲಾ 2 ಪತ್ರ, ಎಸ್.ಜಿ ಸಿದ್ದರಾಮಯ್ಯ ಮತ್ತು ವಸುಂಧರ ಭೂಪತಿಯವರುಗಳಿಗೆ ಒಂದೊಂದು ಪತ್ರಗಳನ್ನು ಬರೆಯಲಾಗಿದೆ. ಇವರುಗಳೆಲ್ಲ ಪ್ರಜಾತಾಂತ್ರಿಕ ಮೌಲ್ಯಗಳನ್ನು, ಸಂವಿಧಾನದ ಆಶಯಗಳನ್ನು ರಕ್ಷಿಸುವ ಸಲುವಾಗಿ ಹೋರಾಡುತ್ತಿದ್ದಾರೆ. ಹಾಗಾಗಿ ಹಲವು ಬಾರಿ ಆಡಳಿತಾರೂಢ ಸರ್ಕಾರದ ವಿರುದ್ಧ ಮಾತನಾಡಲೇಬೇಕಾಗುತ್ತದೆ. ಇದಿಷ್ಟನ್ನೂ ಸಹಿಸದ ಕಿಡಿಗೇಡಿಗಳು ಜೀವ ಬೆದರಿಕೆಗಳನ್ನು ಒಡ್ಡುವ ಹೀನ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾರಿ ನನ್ನ ಸೋಷಿಯಲ್ ಮೀಡಿಯಾ ಖಾತೆಗಳಿಗೂ ಬಂದು ಹೀನಮನೋವೃತ್ತಿ ತೋರುವವರೂ ಇದ್ದಾರೆ.

ನನಗೂ ಹಲವು ಬೆದರಿಕೆ ಪತ್ರಗಳು ಬಂದಿವೆ. ಸ್ವತಃ ಡಿಜಿಯವರಿಗೆ ನಾನು ಈ ಕುರಿತು ಮಾತನಾಡಿದ್ದೆ. ಇತ್ತೀಚೆಗೆ ಟಿವಿಯೊಂದರಲ್ಲಿ ವೀರೇಶ್ ಎಂಬಾತ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮತ್ತು ನನಗೆ ಗುಂಡು ಹಾರಿಸಬೇಕೆಂದು ಹೇಳಿಕೆ ಕೊಟ್ಟಿದ್ದ. ಈ ಬೆದರಿಕೆಯ ಹೇಳಿಕೆ ಹಾಗೂ ಪತ್ರಗಳ ಕುರಿತು ದೂರು ದಾಖಲಿಸಲಾಗಿದೆ. ಆದರೂ ಇದುವರೆಗೆ ಸರ್ಕಾರ ಎಫ್‍ಐಆರ್ ದಾಖಲಿಸಿಲ್ಲ. ಇದೇ ವಿಷಯಕ್ಕೆ ಹಲವು ಬಾರಿ ದೂರು ದಾಖಲಿಸಿದರೂ ಎಫ್‍ಐಆರ್ ಮಾಡಿ ತನಿಖೆ ನಡೆಸದಿರುವುದು ಸರ್ಕಾರದ ಬೇಜವಾಬ್ಧಾರಿಯುತವಾದ ನಡವಳಿಕೆ. ನಾಡಿನ ಬರಹಗಾರಗಾರರು, ಚಿಂತಕರುಗಳಿಗೆ ಬಹಿರಂಗವಾಗಿ ಜೀವ ಬೆದರಿಕೆ ಪತ್ರಗಳನ್ನು ಬರೆದರೂ ಸರ್ಕಾರ ಸುಮ್ಮನಿದೆಯೆಂದರೆ ಭಿನ್ನಮತ ಮತ್ತು ಭಿನ್ನ ಧ್ವನಿಗಳನ್ನು ದಮನಿಸಲು ಪ್ರಯತ್ನಿಸಲಾಗುತ್ತಿದೆ ಅಥವಾ ಪೊಲೀಸ್ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದರ್ಥ. ಅತ್ಯಂತ ಆಧುನಿಕ ವ್ಯವಸ್ಥೆ ಇದ್ದರೂ ದುರುಳರನ್ನು ಪತ್ತೆ ಹಚ್ಚದೆ ಸರ್ಕಾರ ನಿಷ್ಕ್ರಿಯವಾಗಿದೆ.

ಈಗಾಗಲೆ ನಾಡಿನ ಪ್ರಖ್ಯಾತ ಚಿಂತಕರು ಹಾಗೂ ಬಸವ ತತ್ವದ ಅನುಯಾಯಿಗಳಾಗಿದ್ದ ಡಾ.ಎಂ.ಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರನ್ನು ಇದೇ ಗೋಡ್ಸೆ ಸಂತತಿಯವರು ಹಾಗೂ ಮನು ಸಂಸ್ಕೃತಿಯ ಪ್ರತಿಪಾದಕರುಗಳು ಗುಂಡಿಟ್ಟು ಕೊಂದರು. ಕೊಲೆಗಾರರಲ್ಲಿ ಬಹುತೇಕರು ಬಿಜೆಪಿಯನ್ನು ಬೆಂಬಲಿಸುವ ಸನಾತನ ಸಂಸ್ಕೃತಿಯೆಂಬ ಸಂಘಟನೆಯ ಸದಸ್ಯರುಗಳಾಗಿದ್ದಾರೆಂಬ ಮಾಹಿತಿ ಇದೆ. ಈಗಷ್ಟೆ ಆ ಇಬ್ಬರು ಹುತಾತ್ಮ ಚಿಂತಕರನ್ನು ಕೊಂದವರ ವಿಚಾರಣೆ ಪ್ರಾರಂಭವಾಗಿದೆ. ಈ ಪ್ರಕರಣಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಬೇಕೆಂದು ಒತ್ತಾಯಿಸುತ್ತೇನೆ. ‘ಸರ್ವಜನಾಂಗದ ಶಾಂತಿಯ ತೋಟ’ ಎಂದು ಹೆಸರಾದ ಕನ್ನಡ ನಾಡಿನಲ್ಲಿ ಸಮರ್ಥವಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸಬೇಕಾದ ತುರ್ತು ಅಗತ್ಯವಿದೆ. ಯಾಕೆಂದರೆ ನಾಡಿನಲ್ಲಿ ಪದೇ ಪದೇ ಕಾನೂನು ಸುವ್ಯವಸ್ಥೆ ಕುಸಿದು ಬೀಳುತ್ತಿದೆ. ಆದ್ದರಿಂದ ಸರ್ಕಾರ ಕ್ರಿಯಾಶೀಲವಾಗಬೇಕು. ಬೆದರಿಕೆ ಪತ್ರಗಳನ್ನು ಬರೆಯುತ್ತಿರುವ ದುರುಳರನ್ನು ಕೂಡಲೆ ಪತ್ತೆ ಹಚ್ಚಿ, ಶಿಕ್ಷೆ ವಿಧಿಸಿ ಪ್ರಜಾತಾಂತ್ರಿಕ ಮೌಲ್ಯಗಳನ್ನು ರಕ್ಷಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಸಿದ್ದರಾಮಯ್ಯ ಫೋಸ್ಟ್ ಮಾಡಿದ್ದಾರೆ.

Published On - 9:32 pm, Tue, 12 July 22

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್