AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮನೆಗೆ ಬರಲಿದೆ ಕ್ಲಿನಿಕ್, ಉಚಿತ ಔಷಧಿ; ಆರೋಗ್ಯ ಭಾಗ್ಯ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಪ್ಲಾನ್

ಮನೆ ಬಾಗಿಲಿಗೆ ಉಚಿತ ಔಷಧಿ ಹಾಗೂ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ. ಹೌದು ಮನೆ ಮನೆಗೆ ಬರ್ತಿದೆ ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ವ್ಯವಸ್ಥೆ. ಬಡ ಜನರ ಪಾಲಿಗೆ ಮಹತ್ವದ ಭಾಗ್ಯ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡಲು ಗೃಹ ಆರೋಗ್ಯ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಮನೆ ಮನೆಗೆ ಬರಲಿದೆ ಕ್ಲಿನಿಕ್, ಉಚಿತ ಔಷಧಿ; ಆರೋಗ್ಯ ಭಾಗ್ಯ ಯೋಜನೆ ಜಾರಿಗೆ  ಸಿದ್ದರಾಮಯ್ಯ ಸರ್ಕಾರ ಪ್ಲಾನ್
ಸಿಎಂ ಸಿದ್ದರಾಮಯ್ಯ
Vinay Kashappanavar
| Edited By: |

Updated on: Sep 11, 2023 | 7:06 AM

Share

ಬೆಂಗಳೂರು, ಸೆ.11: ಗೃಹ ಲಕ್ಷ್ಮಿ, ಗೃಹ ಜ್ಯೋತಿ ಗ್ಯಾರಂಟೀ ಮೇಲೆ ಗ್ಯಾರಂಟಿ ಕೊಟ್ಟು ಉಚಿತ ಯೋಜನೆಗಳ ಜಾರಿ ಮಾಡಿದ ಕಾಂಗ್ರೆಸ್ ಸರ್ಕಾರ(Congress Government) ಕೊಟ್ಟ ಆಶ್ವಾಸನೆ ಈಡೇರಿಸಿ ಜನರ ಮನಸ್ಸಿನಲ್ಲಿ ಗ್ಯಾರಂಟಿ ಸರ್ಕಾರ ಅಂತ ಅಚ್ಚೊತ್ತಿಕೊಳ್ಳುವ ಹೊಸ್ತಿಲಲ್ಲಿ ಇದೆ. ಈ ಮಧ್ಯೆಯೇ ಈಗ ಮತ್ತೊಂದು ಗ್ಯಾರಂಟಿ ಮಾದರಿಯಲ್ಲೇ ಯೋಜನೆ ಜಾರಿ ಮಾಡಲು ಮುಂದಾಗಿದ್ದು ಜನರಿಗೆ ಆರೋಗ್ಯ ಭಾಗ್ಯ(Arogya Bhagya) ನೀಡಲು ಸಿದ್ದರಾಮಯ್ಯ(Siddaramaiah) ಸರ್ಕಾರ ಮುಂದಾಗಿದೆ. ಇನ್ಮುಂದೆ ಮನೆ ಮನೆಗೆ ಕ್ಲಿನಿಕ್ ಬರಲಿದ್ದು ಚಿಕಿತ್ಸೆ ಜೊತೆ ಉಚಿತ ಔಷಧಿ ಕೂಡ ನಿಮ್ಮ ಮನೆ ಬಾಗಿಲಿಗೆ ಬರಲಿದೆ.

ಆರೋಗ್ಯವೇ ಭಾಗ್ಯ ಅಂತ ಎಷ್ಟೇ ಹೇಳಿದರೂ ಉತ್ತಮ ಆರೋಗ್ಯವನ್ನು ಕಾಪಾಡಿ ಕೊಳ್ಳುವಲ್ಲಿ ಜನ ಹಿಂದೇಟು ಹಾಕ್ತಾನೆ ಇರ್ತಾರೆ. ಅದರಲ್ಲಿಯೂ ಬಿಪಿ, ಶುಗರ್, ಕ್ಯಾನ್ಸರ್ ಅಂದ್ರೆ ಕಾಮನ್ ಅಂತ ನಿರ್ಲಕ್ಷ್ಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಕ್ಯಾಬಿನೆಟ್ ಅಲ್ಲಿ ಗ್ರೀನ್ ಸಿಗ್ನಲ್ ಸಿಕ್ಕರೆ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ.

ಸಿದ್ದರಾಮಯ್ಯ ಸರ್ಕಾರದಿಂದ ಜನರಿಗೆ ಸಿಗುತ್ತಿದೆ ಮತ್ತೊಂದು ಮಹತ್ವದ ಸ್ಕೀಂ

ಮನೆ ಬಾಗಿಲಿಗೆ ಉಚಿತ ಔಷಧಿ ಹಾಗೂ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ. ಹೌದು ಮನೆ ಮನೆಗೆ ಬರ್ತಿದೆ ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ವ್ಯವಸ್ಥೆ. ಬಡ ಜನರ ಪಾಲಿಗೆ ಮಹತ್ವದ ಭಾಗ್ಯ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡಲು ಗೃಹ ಆರೋಗ್ಯ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ. ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಮುಂದಾಗಿದೆ. ಯಾವುದೇ ದುಡ್ಡು ಇಲ್ಲದೇ ಈ ಭಾಗ್ಯ ನೀಡಲು ಮುಂದಾಗಿದೆ. ಇದಕ್ಕಾಗಿ ಮೊಬೈಲ್ ಯೂನಿಟ್ ಪ್ರತ್ಯೇಕ್ ಸಿಬ್ಬಂದಿ ನೇಮಕಾತಿ ವೈದ್ಯರ ನೇಮಕಾತಿಗೆ ಇಲಾಖೆ ಮುಂದಾಗಿದೆ. ಆರಂಭದಲ್ಲಿಯೇ ಖಾಯಿಲೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ಬಡ ಜನರ ಸಾವಿನ ಪ್ರಮಾಣ ಕಡಿಮೆ ಮಾಡಿ ಉತ್ತಮ ಆರೋಗ್ಯದ ಉದ್ದೇಶದಿಂದ ಈ ಯೋಜನೆಗೆ ಜಾರಿಗೆ ಇಲಾಖೆ ಮುಂದಾಗಿದೆ. ಈ ಗೃಹ ಆರೋಗ್ಯ ಯೋಜನೆ ಸೇವೆಯನ್ನು ಪ್ರಾಯೋಗಿಕವಾಗಿ 8 ಜಿಲ್ಲೆಗಳಲ್ಲಿ ಆರಂಭ ಮಾಡಲು ಚಿಂತನೆ ನಡೆಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನ ಮಿಮಿಕ್ರಿ ಮಾಡಿದ ಹೆಚ್​ಡಿ ಕುಮಾರಸ್ವಾಮಿ; ಇಲ್ಲಿದೆ ವಿಡಿಯೋ

ಏನಿದು ಗೃಹ ಆರೋಗ್ಯ ಯೋಜನೆ

ಮನೆ ಬಾಗಿಲಿಗೆ ವೈದ್ಯರ ಕಳುಹಿಸಿ ಆರೋಗ್ಯ ತಪಾಸಣೆ ಮಾಡುವ ಯೋಜನೆ ಇದಾಗಿದೆ. ಈ ಹಿಂದೆ ಪ್ರತೀ 5 ಸಾವಿರ ಜನರಿಗೆ ಆರೋಗ್ಯ ಇಲಾಖೆಯ ವತಿಯಿಂದ ಆರೋಗ್ಯ ಕ್ಷೇಮ ಕೇಂದ್ರ ಸ್ಥಾಪನೆ ಮಾಡಲಾಗಿತ್ತು. ಅದೇ ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಇರುವ ಸಮುದಾಯ ಆರೋಗ್ಯ ಅಧಿಕಾರಿ ಆಶಾ ಕಾರ್ಯಕರ್ತೆಯರ ಜೊತೆ ಮನೆ ಮನೆ ಭೇಟಿ ಮಾಡಿ ಚಿಕಿತ್ಸೆ ನೀಡಲಿದ್ದು ಮೊಬೈಲ್ ಕ್ಲಿನಿಕ್ ಗಳು ಮನೆ ಮನೆ ಮುಂದೆ ಬರಲಿದೆ. ಪ್ರತಿ ಮನೆಯ ಸದಸ್ಯರ ಬಿಪಿ, ಶುಗರ್, ಜ್ವರ, ಕ್ಯಾನ್ಸರ್ ಪರಿಶೀಲನೆ ನಡೆಯುತ್ತೆ . ಈ ಕಾಯಿಲೆಗಳು ಇರುವುದು ಪತ್ತೆ ಆದ್ರೆ ಮೊದಲು ಪ್ರಾಥಮಿಕ ಆರೋಗ್ಯ ಕೇಂದ್ರ ರೆಫರ್ ಮಾಡ್ತಾರೆ. ಬೇಕಾದ ಔಷಧಿ ಆಶಾ ಕಾರ್ಯಕರ್ತೆಯರ ಮೂಲಕ ಮನೆ ಮನೆಗೆ ಪ್ರತೀ ತಿಂಗಳು ರವಾನೆ ಮಾಡಲಾಗುತ್ತೆ. ಡಯಾಬಿಟಿಸ್ ಅನ್ನ ಎಷ್ಟೋ ಜನ ನಿರ್ಲಕ್ಷ ಮಾಡ್ತಾರೆ, ಅದು ಮತ್ತೊಂದು ರೋಗಕ್ಕೆ ಟರ್ನ್ ಆಗುತ್ತೆ, ರೋಗ ಬರುವ ಮುಂಚೆಯೇ ಅಲರ್ಟ್ ಆಗಲು ಈ ಯೋಜನೆ ಲಾಭದಾಯಕವಾಗಿದೆ.

ಒಟ್ಟಿನಲ್ಲಿ ಚಿಕ್ಕ ಚಿಕ್ಕ ಕಾಯಿಲೆ ಅಂತ ನಿರ್ಲಕ್ಷ್ಯ ಮಾಡುವವರಿಗೆ ಈ ಯೋಜನೆ ಮೂಲಕ ದೊಡ್ಡ ಲಾಭವೇ ಆಗಲಿದೆ. ಕ್ಯಾಬಿನೆಟ್ ಅಲ್ಲಿ ಗ್ರೀನ್ ಸಿಗ್ನಲ್ ಸಿಕ್ರೆ ಇದೇ ಇನ್ನೊಂದು ತಿಂಗಳೊಳಗೆ ಸರ್ಕಾರದ ಮತ್ತೊಂದು ಮಹತ್ವದ ಯೋಜನೆ ಗೃಹ ಆರೋಗ್ಯ ಯೋಜನೆ ಜಾರಿ ಆಗಲಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್