AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಮಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಸಿಗಲಿದೆ ವೆರೈಟಿ ಊಟ: ಇಲ್ಲಿದೆ ಹೊಸ ಮೆನು

ಇಂದು ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಹೊಸ ಮೆನು ಬಿಡುಗಡೆ ಮಾಡಿದೆ. ಇಂದಿರಾ ಕ್ಯಾಂಟೀನ್​ನಲ್ಲಿ ಇನ್ಮುಂದೆ ಬಗೆ ಬಗೆಯ ತಿಂಡಿ ತಿನಿಸುಗಳು ಸಿಗಲಿವೆ.

ಇನ್ಮಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಸಿಗಲಿದೆ ವೆರೈಟಿ ಊಟ: ಇಲ್ಲಿದೆ ಹೊಸ ಮೆನು
ಇಂದಿರಾ ಕ್ಯಾಂಟೀನ್​ (ಸಂಗ್ರಹ ಚಿತ್ರ)
Follow us
ಆಯೇಷಾ ಬಾನು
|

Updated on: Jun 20, 2023 | 3:15 PM

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ(Indira Canteen) ಸಿಗುವ ಊಟದ ಗುಣಮಟ್ಟ ಹೇಗಿದೆ ಎಂಬ ಬಗ್ಗೆ ಟಿವಿ9 ನಿನ್ನೆ ರಿಯಾಲಿಟಿ ಚೆಕ್ ಮಾಡಿತ್ತು. ಈ ವೇಳೆ ಕೆಲ ಜನರು ಫುಡ್ ಕ್ವಾಲಿಟಿ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು. ಇತ್ತೀಚಿಗೆ ಕ್ಯಾಂಟೀನ್​ಗೆ ಬರುತ್ತಿರುವ ಊಟದಲ್ಲಿ ರುಚಿ ಇಲ್ಲ. ಕ್ವಾಲಿಟಿಯು ಇಲ್ಲ. ಈ ಮುಂಚೆ ಹಲವು ಬಗೆಯ ತಿಂಡಿ ತರುಸುತ್ತಿದ್ರು. ಈಗಾ ಬೆಳ್ಳಗ್ಗಿನ ತಿಂಡಿಗೆ ಪಲಾವ್ ಬಿಟ್ರೆ ಇನ್ನೇನು ಬರೋದೆ ಇಲ್ಲ. ಅನ್ನ ಸರಿಯಾಗಿ ಬೆಂದಿರೋದೆ ಇಲ್ಲ. ಸಾಂಬಾರ್ ರುಚಿಯು ಇರೋದಿಲ್ಲ ಎಂದಿದ್ದರು. ಸದ್ಯ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರ(Congress Government) ಇಂದಿರಾ ಕ್ಯಾಂಟೀನ್ ಹೊಸ ಮೆನು ಬಿಡುಗಡೆ ಮಾಡಿದೆ.

ಇಂದಿರಾ ಕ್ಯಾಂಟೀನ್​ನಲ್ಲಿ ಇನ್ಮುಂದೆ ಬಗೆ ಬಗೆಯ ತಿಂಡಿ ತಿನಿಸುಗಳು ಸಿಗಲಿವೆ. ಇಡ್ಲಿ ಚಟ್ನಿ/ ಸಾಂಬಾರ್, ಬ್ರೆಡ್ & ಜಾಮ್, ಮಂಗಳೂರು ಬನ್ಸ್, ಬೇಕರಿ ಬನ್, ಪಲಾವ್, ಟೊಮ್ಯಾಟೊ ಬಾತ್, ಖಾರಾ ಪೊಂಗಲ್, ಬಿಸಿಬೇಳೆ ಬಾತ್, ಅನ್ನ ಸಾಂಬಾರ್, ರಾಗಿ ಮುದ್ದೆ ಸೊಪ್ಪುಸಾರು, ಚಪಾತಿ & ಪಲ್ಯ, ಟೀ ಕಾಫಿ ಇಂದಿರಾ ಕ್ಯಾಂಟೀನ್​ನಲ್ಲಿ ಇನ್ಮುಂದೆ ಸಿಗಲಿದೆ.

2017ರಲ್ಲಿ ಸಿದ್ದರಾಮಯ್ಯ ಸರ್ಕಾರ ಮೊದಲ ಬಾರಿಗೆ ಇಂದಿರಾ ಕ್ಯಾಂಟೀನ್​ ಉದ್ಘಾಟನೆ ಮಾಡಿತು. ಆದ್ರೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಯಾಂಟೀನ್​ಗಳು ಹಳ್ಳ ಹಿಡಿದಿದ್ದವು. ಸದ್ಯ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್​ಗಳಿಗೆ ಮರು ಜೀವ ನೀಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್‌ನಲ್ಲಿ ಕ್ಯಾಂಟೀನ್‌ಗಳನ್ನು ಪುನಶ್ಚೇತನಗೊಳಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಈಗ ಹೊಸ ಮೆನೂ ಸಿದ್ದವಾಗಿದೆ.

ಇದನ್ನೂ ಓದಿ: Good news poor class: ಇಂದಿರಾ ಕ್ಯಾಂಟೀನ್​ಗಳಿಗೆ ಮರುಜೀವ ನೀಡಲು ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಇಂದಿರಾ ಕ್ಯಾಂಟಿನ್​ ಹೊಸ ಮೆನು

  • ಸೋಮವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ ರೈತ / ಬ್ರೆಡ್ & ಜಾಮ್ ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ ಸೊಪ್ಪು ಸಾರು + ಕೀರ್ ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು
  • ಮಂಗಳವಾರ : ಬೆಳಗ್ಗೆ : ಇಡ್ಲಿ ಚಟ್ನಿ / ಬಿಸಿ ಬೇಳೆ ಬಾತ್ / ಮಂಗಳೂರು ಬನ್ಸ್ ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್ ರಾತ್ರಿ : ಅನ್ನ ಸಾಂಬಾರ್ + ರೈತ / ಚಪಾತಿ + ವೆಜ್ ಕರಿ
  • ಬುಧವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಖಾರಾ ಬಾತ್ / ಬೇಕರಿ ಬನ್ ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ + ಸೊಪ್ಪು ಸಾರು ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ + ಸೊಪ್ಪು ಸಾರು
  • ಗುರುವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ / ಬ್ರೆಡ್ & ಜಾಮ್ ಮಧ್ಯಾಹ್ನ : ಅನ್ನ ಸಾಂಬಾರ್ + ಮೊಸರು / ಚಪಾತಿ ಸಾಗು + ಕೀರ್ ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ
  • ಶುಕ್ರವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಬಿಸಿಬೇಳೆ ಬಾತ್ / ಮಂಗಳೂರು ಬನ್ಸ್ ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು
  • ಶನಿವಾರ : ಬೆಳಗ್ಗೆ : ಇಡ್ಲಿ ಸಾಂಬಾರ್ / ಪೊಂಗಲ್ / ಬೇಕರಿ ಬನ್ ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ಚಪಾತಿ ಸಾಗು + ಕೀರ್ ರಾತ್ರಿ : ಅನ್ನ ಸಾಂಬಾರ್ + ಮೊಸರು / ಚಪಾತಿ + ವೆಜ್ ಕರಿ
  • ಭಾನುವಾರ : ಬೆಳಗ್ಗೆ : ಇಡ್ಲಿ ಚಟ್ನಿ / ಖಾರಾ ಬಾತ್ / ಬ್ರೆಡ್ & ಜಾಮ್ ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು

    ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ