AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮುಸ್ಲಿಂ ನಾಯಕರನ್ನು ಮುಗಿಸುತ್ತಾ ಬಂದಿದ್ದಾರೆ; ನಾಳೆ ಶಾಸಕ ಜಮೀರ್ ಅಹ್ಮದ್​​ರನ್ನೂ ಮುಗಿಸ್ತಾರೆ: ಟಿ.ಎ. ಶರವಣ

ಕಾಂಗ್ರೆಸ್​ನವರು ಅಲ್ಪಸಂಖ್ಯಾತರಿಗೆ ಹೇಗೆ ಅನ್ಯಾಯ ಮಾಡಿದ್ದಾರೆ ಎಂದು ಕುಮಾರಣ್ಣ ಹೇಳಿದ್ದಾರೆ. ಜೆಡಿಎಸ್ ಮೇಲೆ, ಕುಮಾರಸ್ವಾಮಿ ಮೇಲೆ ವೈಯಕ್ತಿಕವಾಗಿ ಸಿದ್ದರಾಮಯ್ಯ ಅವರು ದಾಳಿ ಮಾಡಿದ್ದಾರೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯರು ಹಾಗೂ ಜೆಡಿಎಸ್‌ ವಕ್ತಾರರಾದ ಟಿ.ಎ ಶರವಣ ತಿಳಿಸಿದ್ದಾರೆ.

ಸಿದ್ದರಾಮಯ್ಯ ಮುಸ್ಲಿಂ ನಾಯಕರನ್ನು ಮುಗಿಸುತ್ತಾ ಬಂದಿದ್ದಾರೆ; ನಾಳೆ ಶಾಸಕ ಜಮೀರ್ ಅಹ್ಮದ್​​ರನ್ನೂ ಮುಗಿಸ್ತಾರೆ: ಟಿ.ಎ. ಶರವಣ
ಕರ್ನಾಟಕ ಜ್ಯುವೆಲ್ಲರ್ಸ್ ಅಧ್ಯಕ್ಷ ಟಿ.ಎ. ಶರವಣ
TV9 Web
| Edited By: |

Updated on:Oct 18, 2021 | 12:57 PM

Share

ಬೆಂಗಳೂರು: ನಮ್ಮ ನಾಯಕರಾದ ಕುಮಾರಣ್ಣ, ಸಿದ್ದರಾಮಯ್ಯ ಅವರಿಗೆ ಐದು ಪ್ರಶ್ನೆಯನ್ನು ಕೇಳಿದ್ದಾರೆ. ಅದಕ್ಕೆ ಉತ್ತರವನ್ನು ಸಿದ್ದರಾಮಯ್ಯ ನೀಡಿಲ್ಲ. ಕಾಂಗ್ರೆಸ್​ನವರು ಅಲ್ಪಸಂಖ್ಯಾತರಿಗೆ ಹೇಗೆ ಅನ್ಯಾಯ ಮಾಡಿದ್ದಾರೆ ಎಂದು ಕುಮಾರಣ್ಣ ಹೇಳಿದ್ದಾರೆ. ಜೆಡಿಎಸ್ ಮೇಲೆ, ಕುಮಾರಸ್ವಾಮಿ ಮೇಲೆ ವೈಯಕ್ತಿಕವಾಗಿ ಸಿದ್ದರಾಮಯ್ಯ ಅವರು ದಾಳಿ ಮಾಡಿದ್ದಾರೆ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯರು ಹಾಗೂ ಜೆಡಿಎಸ್‌ ವಕ್ತಾರರಾದ ಟಿ.ಎ ಶರವಣ ತಿಳಿಸಿದ್ದಾರೆ.

ಶೇಷಾದ್ರಿಪುರಂನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಬಳಿಕ ಸಿದ್ದರಾಮಯ್ಯನವರ ಹೇಳಿಕೆ ವಿಚಾರವಾಗಿ ಮಾತನಾಡಿದ್ದಾರೆ. ಮುಸ್ಲಿಂ ನಾಯಕರನ್ನು ಮುಗಿಸಿ ಬಂದಿದ್ದಾರೆ. ರೋಷನ್ ಬೇಗ್ ಸೇರಿದಂತೆ ಎಲ್ಲಾ ನಾಯಕರನ್ನು ಮುಗಿಸಿದ್ದಾರೆ. ನಾಳೆ ನಿಮ್ಮನ್ನು ಮುಗಿಸುತ್ತಾರೆ. ಸಿದ್ದರಾಮಯ್ಯ ಅವರಿಗೆ ಜೆಡಿಎಸ್​ನ ಕೆದಕದೆ ಹೋದರೆ ನಿದ್ದೆ ಬರಲ್ಲ. ಬರೀ ಜೆಡಿಎಸ್ ಬಗೆನೇ ಜಪ ಮಾಡುತ್ತಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಮುಳುಗಿ ಹೋಗುತ್ತದೆ ಎಂದು ಟಿ.ಎ ಶರವಣ ತಿಳಿಸಿದ್ದಾರೆ.

ಜೆಡಿಎಸ್​ಗೆ ಧಮ್‌ ಇದ್ದರೆ ಮುಸ್ಲಿಂ ಕ್ಯಾಂಡಿಟೆಟ್​ನ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಜಮೀರ್ ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್​ನವರಿಗೆ ಧಮ್ ಇದ್ದರೆ ಮುಸ್ಲಿಂ ಅಭ್ಯರ್ಥಿ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಿ. ಕುಮಾರಣ್ಣ ಅವರು ಕೇಳಿದ ಐದು ಪ್ರಶ್ನೆಗೆ ಉತ್ತರ ನೀಡಿ. ಜಮೀರ್ ಏನೇ ಹೇಳಿದರು ಅದಕ್ಕೆ ಕುಮಾರಣ್ಣ ಉತ್ತರ ನೀಡಬಾರದು. ನಾನು ಕುಮಾರಣ್ಣ ಅವರಿಗೆ ಮನವಿ ಮಾಡುತ್ತೇನೆ. ಜಮೀರ್ ಪ್ರಶ್ನೆಗೆ ಉತ್ತರ ನೀಡಬೇಡಿ ಎಂದು ಟಿ.ಎ ಶರವಣ ಹೇಳಿದ್ದಾರೆ.

ಜಮೀರ್ ಅಹ್ಮದ್​ಗೆ ಯಾವ ನೈತಿಕತೆ ಇದೆ: ಟಿ.ಎ ಶರವಣ ಜಮೀರ್ ಅಹ್ಮದ್​ಗೆ ಯಾವ ನೈತಿಕತೆ ಇದೆ. ಜಮೀರ್ ಅವರ ಮೂಲ ಬೇರು ಯಾವುದು. ಜಮೀರ್​ನನ್ನು ವಿಧಾನಸೌಧಕ್ಕೆ ಪ್ರವೇಶ ಮಾಡಿಸಿದ್ದು ಯಾರು ಜಮೀರ್ ಜೆಡಿಎಸ್ ನಲ್ಲಿದ್ದಾಗ ಕುಮಾರಣ್ಣ, ಕಾಂಗ್ರೆಸ್​ನಲ್ಲಿದ್ದಾಗ ಸಿದ್ದರಾಮಣ್ಣ, ಮುಂದೆ ಯಾವ ಅಣ್ಣನೋ ? ಕಾಂಗ್ರೆಸ್​ನವರು ಜಮೀರ್ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಅಂತಾ ಫೋಷಣೆ ಮಾಡಲಿ ಎಂದು ಟಿ.ಎ ಶರವಣ ಅಭಿಪ್ರಾಯಪಟ್ಟಿದ್ದಾರೆ.

ಗಂಗಾವತಿ ಕ್ಷೇತ್ರದ ಜನ ಇಕ್ಬಾಲ್ ಅವರಿಗೆ ತಕ್ಕ ಉತ್ತರ ಕೊಡುತ್ತಾರೆ: ಟಿ.ಎ ಶರವಣ ಇಕ್ಬಾಲ್ ನವರು ಹೇಳುತ್ತಾರೆ ಜೆಡಿಎಸ್ ಮೋಸ ಮಾಡಿದೆಯಂತೆ. ಇಕ್ಬಾಲ್ ನವರನ್ನು ಜೆಡಿಎಸ್ ಎಂಎಲ್​ಎ ಮಾಡಿದರು. ಗಂಗಾವತಿಗೆ ಕುಮಾರಸ್ವಾಮಿ 20 ಕೋಟಿ ರೂ. ಅನುದಾನ ನೀಡಿದರು. ಗಂಗಾವತಿ ಕ್ಷೇತ್ರದ ಜನ ನಿಮಗೆ ತಕ್ಕ ಉತ್ತರ ಕೊಡುತ್ತಾರೆ ಎಂದು ಟಿ.ಎ ಶರವಣ ಹೇಳಿದ್ದಾರೆ.

ಇದನ್ನೂ ಓದಿ: ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ವಿವಿ ಸಿಂಡಿಕೇಟ್ ಸದಸ್ಯರ ಕಿಡಿ; ಮಾನಹಾನಿ ಪ್ರಕರಣ ದಾಖಲಿಸುವ ಎಚ್ಚರಿಕೆ

ಆರೆಸ್ಸೆಸ್ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಅಕ್ಷರಶಃ ಸತ್ಯ: ಬಿಜೆಪಿ ಅದರಿಂದ ಹತಾಶಗೊಂಡಿದೆ -ಟಿ.ಎ. ಶರವಣ ತೀವ್ರ ವಾಗ್ದಾಳಿ

Published On - 12:27 pm, Mon, 18 October 21

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ