AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀವ್ ಗಾಂಧಿ ಹಂತಕರ ಪರ ಇರುವವರೊಂದಿಗೆ ಸಿದ್ದರಾಮಯ್ಯ ಸಖ್ಯ: ಬಿಜೆಪಿ ಆರೋಪ

ವಿಸಿಕೆ ಪಕ್ಷವು ಎಲ್​ಟಿಟಿಇ ಮುಖಂಡ ಪ್ರಭಾಕರನ್ ಹುಟ್ಟುಹಬ್ಬ ಆಚರಣೆಯನ್ನು ತನ್ನ ಪ್ರಣಾಳಿಕೆ ಮಾಡಿಕೊಂಡಿತ್ತು. ಅಂಥ ಪಕ್ಷ ಕೊಟ್ಟ ಪ್ರಶಸ್ತಿಯನ್ನು ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ ಎಂದು ಟೀಕಿಸಿದರು.

ರಾಜೀವ್ ಗಾಂಧಿ ಹಂತಕರ ಪರ ಇರುವವರೊಂದಿಗೆ ಸಿದ್ದರಾಮಯ್ಯ ಸಖ್ಯ: ಬಿಜೆಪಿ ಆರೋಪ
ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ
TV9 Web
| Edited By: |

Updated on:Aug 02, 2022 | 12:53 PM

Share

ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹಂತಕರ ಬಗ್ಗೆ ಸಹಾನುಭೂತಿ ಹೊಂದಿರುವವರೊಂದಿಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಖ್ಯ ಹೊಂದಿದ್ದಾರೆ ಎಂದು ಬಿಜೆಪಿ ಶಾಸಕ ಪಿ.ರಾಜೀವ್ ಗಂಭೀರ ಆರೋಪ ಮಾಡಿದರು. ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ ಹತ್ಯೆ ಮಾಡಿದವರನ್ನು ಬಿಡುಗಡೆ ಮಾಡುವಂತೆ ಹೋರಾಟ ಮಾಡಿದ್ದ ವಿಸಿಕೆ ಪಕ್ಷವು ಎಲ್​ಟಿಟಿಇ ಮುಖಂಡ ಪ್ರಭಾಕರನ್ ಹುಟ್ಟುಹಬ್ಬ ಆಚರಣೆಯನ್ನು ತನ್ನ ಪ್ರಣಾಳಿಕೆ ಮಾಡಿಕೊಂಡಿತ್ತು. ಅಂಥ ಪಕ್ಷ ಕೊಟ್ಟ ಪ್ರಶಸ್ತಿಯನ್ನು ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ ಎಂದು ಟೀಕಿಸಿದರು.

ಕರ್ನಾಟಕಕ್ಕೆ ಬರುತ್ತಿರುವ ರಾಹುಲ್ ಗಾಂಧಿಗೆ ನಮ್ಮದೊಂದು ಪ್ರಶ್ನೆ ಇದೆ. ನಿಮ್ಮ ತಂದೆಯನ್ನು ಹತ್ಯೆ ಮಾಡಿದ ವಿಸಿಕೆ ಪಕ್ಷದಿಂದ ಪ್ರಶಸ್ತಿ ಪಡೆದ ಸಿದ್ದರಾಮಯ್ಯ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಎಲ್​ಟಿಟಿಇ ಬೆಂಬಲಿಸುವ ವಿಸಿಕೆ ಪಕ್ಷವನ್ನು ಬೆಂಬಲಿಸುವ ಸಿದ್ದರಾಮಯ್ಯ ನಡೆಯು ಗಾಂಧಿ ಕುಟುಂಬಕ್ಕೆ ಅವಮಾನ ಮಾಡಿದಂತೆ ಅಲ್ಲವೇ? ಸಿದ್ದರಾಮಯ್ಯ ಅವರಿಗೆ ಯಾವ ಸಿದ್ದಾಂತವು ಇಲ್ಲ. ಅವರು ಅಧಿಕಾರಕ್ಕೆ ಏನು ಬೇಕಾದರೂ ಮಾಡುತ್ತಾರೆ. ಸಮಾಜವಾದಿ ಸಿದ್ದರಾಮಯ್ಯ ಹ್ಯೂಬ್ಲೋಟ್ ವಾಚ್ ಕಟ್ಟುತ್ತಾರೆ. ಲೋಹಿಯಾ ಎಂದು ಹೇಳಿಕೊಳ್ಳುವ ಇವರು ಅರ್ಕಾವತಿ ಬಡಾವಣೆ ಮಾಡಲು ಡಿ ನೋಟಿಫಿಕೇಷನ್ ಮಾಡಿ ರೀಡೂ ಮಾಡುತ್ತಾರೆ ಎಂದು ಆರೋಪ ಮಾಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಒಂದು ನಿಯಮ ಇದೆ. ಚುನಾವಣೆ ನಡೆಯುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದವರನ್ನು ಪಕ್ಷವು ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ಮಾಡುವುದು ವಾಡಿಕೆ. ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಪರಮೇಶ್ವರ ಅವರನ್ನು ಸಿದ್ದರಾಮಯ್ಯ ಇದೇ ಕಾರಣಕ್ಕೆ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದರು. ನಂತರದ ದಿನಗಳಲ್ಲಿ ತಮಗೆ ಪ್ರತಿಸ್ಪರ್ಧಿಯಾಗಬಾರದು ಎಂದು ಮಲ್ಲಿಕಾರ್ಜನ ಖರ್ಗೆ ಅವರನ್ನು ಸೋಲಿಸಿದ್ದರು. ಈಗ ಡಿ.ಕೆ.ಶಿ‌ವಕುಮಾರ್​ಗೆ ಖೆಡ್ಡ ತೋಡಲೆಂದೇ ಸಿದ್ಧರಾಮೋತ್ಸವ ಮಾಡಲಾಗುತ್ತಿದೆ ಎಂದರು.

ಕಾಂಗ್ರೆಸ್ ಪಕ್ಷವಯ ಇಂದು ದಾರುಣ ಪರಿಸ್ಥಿತಿ ತಲುಪಿದೆ. ಸಿದ್ದರಾಮಯ್ಯ ಪರ ವ್ಯಕ್ತಿಪೂಜೆ ಆಗುತ್ತಿರುವುದನ್ನು ನೋಡಿಯೂ ಉಳಿದವರು ಕಣ್ಮುಚ್ಚಿ ಕುಳಿತಿದ್ದಾರೆ. ಸಿದ್ದರಾಮೋತ್ಸವ ಕಾರ್ಯಕ್ರಮವು ಕಾಂಗ್ರೆಸ್ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮಗ್ಗುಲ ಮುಳ್ಳಾಗಲಿದೆ. ಸಿದ್ದರಾಮೋತ್ಸವ ಬಳಿಕ ಕಾಂಗ್ರೆಸ್ ಪಕ್ಷವು ಸಂಪೂರ್ಣ ಸರ್ವನಾಶವಾಗಲಿದೆ ಎಂದು ಹೇಳಿದರು.

ಮತ್ತೋರ್ವ ಮುಖಂಡ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಈಗ ಸಿದ್ದರಾಮಯ್ಯಗೆ ಕಾಂಗ್ರೆಸ್ ಸಣ್ಣದಾಗಿ ಕಾಣುತ್ತಿದೆ. ಕಾಂಗ್ರೆಸ್​ಗೆ ಸಿದ್ದರಾಮಯ್ಯ ದೊಡ್ಡವರಂತೆ ಕಾಣಿಸುತ್ತಿದ್ದಾರೆ. ಈ ಹಿಂದೆ ಶರದ್ ಪವಾರ್, ಮಮತಾ ಬ್ಯಾನರ್ಜಿ ಎಲ್ಲರೂ ಸ್ವಂತಿಕ ಉಪಯೋಗಿಸಿದ್ದರಿಂದ ಪಕ್ಷ ತೊರೆಯಬೇಕಾಯಿತು. ಈ ಸಿದ್ದರಾಮಯ್ಯ ಸ್ವಂತಿಕೆ ಬಳಸುತ್ತಿದ್ದಾರೆ. ಅವರ ಪರಿಸ್ಥಿತಿ ಏನಾಗುತ್ತದೋ ಗೊತ್ತಿಲ್ಲ ಎಂದರು.

Published On - 12:08 pm, Tue, 2 August 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?