AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತ್ರು ದೇಶವಾದ ಚೀನಾ ಪರ ಚಿತ್ರಕಲಾ ಪರಿಷತ್ತಿನಲ್ಲಿ ನಾಳೆ ಸೆಮಿನಾರ್ ಆಯೋಜನೆ: ನಾನು ಅಬ್ಸೆಂಟ್ ಎಂದರು ಸಿದ್ದರಾಮಯ್ಯ

ಕಾರ್ಯಕ್ರಮದ ಅತಿಥಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ತಾವು ಭಾಗವಹಿಸಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಅನುಮತಿ ಇಲ್ಲದೇ ನನ್ನ ಹೆಸರು ಹಾಕಿದ್ದಾರೆ ಎಂದು ಗರಂ ಆಗಿದ್ದಾರೆ.

ಶತ್ರು ದೇಶವಾದ ಚೀನಾ ಪರ ಚಿತ್ರಕಲಾ ಪರಿಷತ್ತಿನಲ್ಲಿ ನಾಳೆ ಸೆಮಿನಾರ್ ಆಯೋಜನೆ: ನಾನು ಅಬ್ಸೆಂಟ್ ಎಂದರು ಸಿದ್ದರಾಮಯ್ಯ
ಶತ್ರು ದೇಶವಾದ ಚೀನಾ ಪರ ಚಿತ್ರಕಲಾ ಪರಿಷತ್ತಿನಲ್ಲಿ ನಾಳೆ ಸೆಮಿನಾರ್ ಆಯೋಜನೆ: ನಾನು ಅಬ್ಸೆಂಟ್ ಎಂದರು ಸಿದ್ದರಾಮಯ್ಯ
Follow us
TV9 Web
| Updated By: ಆಯೇಷಾ ಬಾನು

Updated on:Aug 27, 2022 | 7:50 PM

ಬೆಂಗಳೂರು: ಚೀನಾದ ಆಂತರಿಕ ವ್ಯವಹಾರಗಳಲ್ಲಿ ಸಾಮ್ರಾಜ್ಯಶಾಹಿ ಆಮೆರಿಕಾದ ಹಸ್ತಕ್ಷೇಪ ವಿಷಯದ ಕುರಿತು ಆಯೋಜಿಸಲಾಗಿದ್ದ ಸೆಮಿನಾರ್ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನ ಚಿತ್ರಕಲಾ ಪರಿಷತ್ನಲ್ಲಿ(Chitrakala Parishath) ನಾಳೆ (ಆಗಸ್ಟ್ 28) ಇಂಡಿಯಾ ಚೀನಾ ಫ್ರೆಂಡ್ಶಿಪ್ ಅಸೋಸಿಯೇಷನ್ (ICFA) ಸೆಮಿನಾರನ್ನು ಆಯೋಚಿಸಿದೆ. ಭಾರತದ ಶತ್ರುರಾಷ್ಟ್ರ ಚೀನಾದ ಪರವಾಗಿ ಸೆಮಿನಾರ್ ಆಯೋಜನೆ ಹಿನ್ನೆಲೆ ವಿವಾದ ಹುಟ್ಟುಕೊಂಡಿದೆ.

ಇನ್ನು ಕಾರ್ಯಕ್ರಮದ ಅತಿಥಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ತಾವು ಭಾಗವಹಿಸಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಅನುಮತಿ ಇಲ್ಲದೇ ನನ್ನ ಹೆಸರು ಹಾಕಿದ್ದಾರೆ ಎಂದು ಗರಂ ಆಗಿದ್ದಾರೆ. ಆದರೆ ಭಾಷಣಕಾರರಾಗಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಡಾಕ್ಟರ್ ಎಲ್.ಹನುಮಂತಯ್ಯ, ಪಿಜಿಆರ್ ಸಿಂಧ್ಯಾ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ.

ICFA ಅಧ್ಯಕ್ಷರೂ ಆಗಿರುವ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮತ್ತೊಂದೆಡೆ ಚೀನಾ ಪರವಾದ ಸೆಮಿನಾರ್ ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಏಕೆ ಭಾಗವಹಿಸಬೇಕು ಎಂದು ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್ ಪಕ್ಷಕ್ಕೂ ಚೀನಾಕ್ಕೂ ಇರುವ ಸಂಬಂಧವೇನು? ಈ ಕಾರ್ಯಕ್ರಮ ಕೆಪಿಸಿಸಿಯಿಂದಲೇ ಆಯೋಜನೆಗೊಂಡಿದೆಯೇ? ಎಂದು ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದಾರೆ.

ಭಾರತದ ಚೀನಾ ರಾಯಭಾರಿ ವೆಹಿಡೋಂಗ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಂಬೈನಲ್ಲಿರುವ ಚೀನಾ ಕೌನ್ಸಲ್ ಜನರಲ್ ಕೊಂಗ್ ಕ್ಸಿಯನೂಹಾ ಕೂಡ ಭಾಗಿಯಾಗಲಿದ್ದು ಚೀನಾದ ರಾಯಭಾರಿ ಜೊತೆಗೆ ನಾಳೆ ಕಾಂಗ್ರೆಸ್ ನಾಯಕರು ವೇದಿಕೆ ಹಂಚಿಕೊಳ್ಳುವ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:32 pm, Sat, 27 August 22

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ