AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶತ್ರು ದೇಶವಾದ ಚೀನಾ ಪರ ಚಿತ್ರಕಲಾ ಪರಿಷತ್ತಿನಲ್ಲಿ ನಾಳೆ ಸೆಮಿನಾರ್ ಆಯೋಜನೆ: ನಾನು ಅಬ್ಸೆಂಟ್ ಎಂದರು ಸಿದ್ದರಾಮಯ್ಯ

ಕಾರ್ಯಕ್ರಮದ ಅತಿಥಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ತಾವು ಭಾಗವಹಿಸಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಅನುಮತಿ ಇಲ್ಲದೇ ನನ್ನ ಹೆಸರು ಹಾಕಿದ್ದಾರೆ ಎಂದು ಗರಂ ಆಗಿದ್ದಾರೆ.

ಶತ್ರು ದೇಶವಾದ ಚೀನಾ ಪರ ಚಿತ್ರಕಲಾ ಪರಿಷತ್ತಿನಲ್ಲಿ ನಾಳೆ ಸೆಮಿನಾರ್ ಆಯೋಜನೆ: ನಾನು ಅಬ್ಸೆಂಟ್ ಎಂದರು ಸಿದ್ದರಾಮಯ್ಯ
ಶತ್ರು ದೇಶವಾದ ಚೀನಾ ಪರ ಚಿತ್ರಕಲಾ ಪರಿಷತ್ತಿನಲ್ಲಿ ನಾಳೆ ಸೆಮಿನಾರ್ ಆಯೋಜನೆ: ನಾನು ಅಬ್ಸೆಂಟ್ ಎಂದರು ಸಿದ್ದರಾಮಯ್ಯ
TV9 Web
| Edited By: |

Updated on:Aug 27, 2022 | 7:50 PM

Share

ಬೆಂಗಳೂರು: ಚೀನಾದ ಆಂತರಿಕ ವ್ಯವಹಾರಗಳಲ್ಲಿ ಸಾಮ್ರಾಜ್ಯಶಾಹಿ ಆಮೆರಿಕಾದ ಹಸ್ತಕ್ಷೇಪ ವಿಷಯದ ಕುರಿತು ಆಯೋಜಿಸಲಾಗಿದ್ದ ಸೆಮಿನಾರ್ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನ ಚಿತ್ರಕಲಾ ಪರಿಷತ್ನಲ್ಲಿ(Chitrakala Parishath) ನಾಳೆ (ಆಗಸ್ಟ್ 28) ಇಂಡಿಯಾ ಚೀನಾ ಫ್ರೆಂಡ್ಶಿಪ್ ಅಸೋಸಿಯೇಷನ್ (ICFA) ಸೆಮಿನಾರನ್ನು ಆಯೋಚಿಸಿದೆ. ಭಾರತದ ಶತ್ರುರಾಷ್ಟ್ರ ಚೀನಾದ ಪರವಾಗಿ ಸೆಮಿನಾರ್ ಆಯೋಜನೆ ಹಿನ್ನೆಲೆ ವಿವಾದ ಹುಟ್ಟುಕೊಂಡಿದೆ.

ಇನ್ನು ಕಾರ್ಯಕ್ರಮದ ಅತಿಥಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಈ ಕಾರ್ಯಕ್ರಮದಲ್ಲಿ ತಾವು ಭಾಗವಹಿಸಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಅನುಮತಿ ಇಲ್ಲದೇ ನನ್ನ ಹೆಸರು ಹಾಕಿದ್ದಾರೆ ಎಂದು ಗರಂ ಆಗಿದ್ದಾರೆ. ಆದರೆ ಭಾಷಣಕಾರರಾಗಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಡಾಕ್ಟರ್ ಎಲ್.ಹನುಮಂತಯ್ಯ, ಪಿಜಿಆರ್ ಸಿಂಧ್ಯಾ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಉಲ್ಲೇಖಿಸಲಾಗಿದೆ.

ICFA ಅಧ್ಯಕ್ಷರೂ ಆಗಿರುವ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮತ್ತೊಂದೆಡೆ ಚೀನಾ ಪರವಾದ ಸೆಮಿನಾರ್ ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಏಕೆ ಭಾಗವಹಿಸಬೇಕು ಎಂದು ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್ ಪಕ್ಷಕ್ಕೂ ಚೀನಾಕ್ಕೂ ಇರುವ ಸಂಬಂಧವೇನು? ಈ ಕಾರ್ಯಕ್ರಮ ಕೆಪಿಸಿಸಿಯಿಂದಲೇ ಆಯೋಜನೆಗೊಂಡಿದೆಯೇ? ಎಂದು ಬಿಜೆಪಿ ನಾಯಕರು ಪ್ರಶ್ನೆ ಮಾಡಿದ್ದಾರೆ.

ಭಾರತದ ಚೀನಾ ರಾಯಭಾರಿ ವೆಹಿಡೋಂಗ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಂಬೈನಲ್ಲಿರುವ ಚೀನಾ ಕೌನ್ಸಲ್ ಜನರಲ್ ಕೊಂಗ್ ಕ್ಸಿಯನೂಹಾ ಕೂಡ ಭಾಗಿಯಾಗಲಿದ್ದು ಚೀನಾದ ರಾಯಭಾರಿ ಜೊತೆಗೆ ನಾಳೆ ಕಾಂಗ್ರೆಸ್ ನಾಯಕರು ವೇದಿಕೆ ಹಂಚಿಕೊಳ್ಳುವ ಬಗ್ಗೆ ಕುತೂಹಲ ಹೆಚ್ಚಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:32 pm, Sat, 27 August 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!