AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1956ರಿಂದ ರಾಜ್ಯದಲ್ಲಿ ಪೂರ್ಣಾವಧಿ ಸಿಎಂ ಆಗಿದ್ದು ಕೇವಲ ಮೂವರು!: ಉಳಿದವರದ್ದೆಲ್ಲ ಅಲ್ಪಾವಧಿ ಅಧಿಕಾರ

ಕರ್ನಾಟಕ ಸಿಎಂ ರಾಜೀನಾಮೆ ಬೆನ್ನಲ್ಲೇ ರಾಜ್ಯ ರಾಜಕೀಯದ ಇತಿಹಾಸ ಮತ್ತೆ ಮುಂಚೂಣಿಗೆ ಬಂದಿದೆ. 1956ರಿಂದ ಇಂದಿನವರೆಗೆ ಕೇವಲ ಮೂವರಷ್ಟೇ ಪೂರ್ಣಾವಧಿ ಸಿಎಂ ಆಗಿದ್ದು, ಆ ಪೈಕಿ ಸಿದ್ದರಾಮಯ್ಯ ಕೂಡ ಒಬ್ಬರು. ಉಳಿದಂತೆ ಕರ್ನಾಟಕ ಕಂಡ ಎಲ್ಲ ಸಿಎಂಗಳು ಅಲ್ಪಾವಧಿಯ ಅಧಿಕಾರ ನಡೆಸಿದ್ದು, ಯಾಕಾಗಿ ಅವರು ಅಧಿಕಾರ ಕಳೆದುಕೊಂಡಿದ್ದರು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

1956ರಿಂದ ರಾಜ್ಯದಲ್ಲಿ ಪೂರ್ಣಾವಧಿ ಸಿಎಂ ಆಗಿದ್ದು ಕೇವಲ ಮೂವರು!: ಉಳಿದವರದ್ದೆಲ್ಲ ಅಲ್ಪಾವಧಿ ಅಧಿಕಾರ
ಕರ್ನಾಟಕದ ಪೂರ್ಣಾವಧಿ ಮುಖ್ಯಮಂತ್ರಿಗಳು
ಪ್ರಸನ್ನ ಹೆಗಡೆ
|

Updated on:May 29, 2026 | 5:45 PM

Share

ಬೆಂಗಳೂರು, ಮೇ 29: 2013-18ರ ವರೆಗೆ ಕರ್ನಾಟಕದ ಸಿಎಂ ಆಗಿ ಅವಧಿ ಪೂರ್ಣಗೊಳಿಸಿದ್ದ ಸಿದ್ದರಾಮಯ್ಯ (Siddaramaiah) ಈ ಬಾರಿ ಕೇವಲ 3 ವರ್ಷವಷ್ಟೇ ಆಡಳಿತ ನಡೆಸಿ ಪದತ್ಯಾಗ ಮಾಡಿದ್ದಾರೆ. ಅಷ್ಟಕ್ಕೂ ರಾಜಕೀಯ ಅಸ್ಥಿರತೆ, ನಾಯಕತ್ವ ಬದಲಾವಣೆಗಳು ಕರ್ನಾಟಕ ರಾಜಕೀಯದಲ್ಲಿ ಹೊಸತೇನಲ್ಲ. 1956ರಿಂದ ಇಂದಿನವರೆಗೆ ಕೇವಲ 3 ಮುಖ್ಯಮಂತ್ರಿಗಳು ಮಾತ್ರ ಪೂರ್ಣಾವಧಿಯ ಆಡಳಿತ ನಡೆಸಿದ್ದಾರೆ. ಎಸ್​​. ನಿಜಲಿಂಗಪ್ಪ (1962-68), ಡಿ. ದೇವರಾಜ ಅರಸ್​​ (1972-77) ಮತ್ತು ಸಿದ್ದರಾಮಯ್ಯ (2013-18) ಅವರನ್ನು ಬಿಟ್ಟರೆ ಉಳಿದವರೆಲ್ಲ ಅಲ್ಪಾವಧಿಯ ಸಿಎಂಗಳೆ!

ಎಸ್. ನಿಜಲಿಂಗಪ್ಪ (1956-1958)

ಮೈಸೂರು ರಾಜ್ಯ ಏಕೀಕರಣದ ಬಳಿಕ ಮುಖ್ಯಮಂತ್ರಿ ಪಟ್ಟಕ್ಕೇರಿದ ಕಾಂಗ್ರೆಸ್ ಹಿರಿಯ ನಾಯಕ ಎಸ್. ನಿಜಲಿಂಗಪ್ಪ ಅವರಿಗೆ ಕಾಂಗ್ರೆಸ್‌ನ ಲಿಂಗಾಯತ ಶಾಸಕರ ಬಂಡಾಯ ಮುಳುವಾಗಿತ್ತು. ಹೈಕಮಾಂಡ್ ಬಂಡಾಯಗಾರರ ಪರ ನಿಂತ ಪರಿಣಾಮ, ಅವಧಿ ಪೂರ್ಣಗೊಳಿಸುವ ಮುನ್ನವೇ ನಿಜಲಿಂಗಪ್ಪ ರಾಜೀನಾಮೆ ನೀಡಬೇಕಾಯಿತು. ಬಳಿಕ ಬಿ.ಡಿ. ಜತ್ತಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಯಿತು.

ವೀರೇಂದ್ರ ಪಾಟೀಲ್ (1968-71)

1969ರ ಕಾಂಗ್ರೆಸ್ ವಿಭಜನೆಯ ಬಳಿಕ ಕಾಂಗ್ರೆಸ್ (ಆರ್ಗನೈಸೇಶನ್) ಬಣದೊಂದಿಗೆ ಗುರುತಿಸಿಕೊಂಡಿದ್ದ ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾದರು. ಆದರೆ 1971ರ ಲೋಕಸಭೆ ಚುನಾವಣೆಯಲ್ಲಿ ಇಂದಿರಾ ಗಾಂಧಿ ಭರ್ಜರಿ ಗೆಲುವು ಸಾಧಿಸಿದ ನಂತರ ಹಲವಾರು ಸಚಿವರು ಮತ್ತು ಶಾಸಕರು ಅವರ ಬಣಕ್ಕೆ ಸೇರ್ಪಡೆಯಾದರು. ಸರ್ಕಾರ ಬಹುಮತ ಕಳೆದುಕೊಂಡ ಪರಿಣಾಮ ಕರ್ನಾಟಕದಲ್ಲಿ ಮೊದಲ ಬಾರಿಗೆ ರಾಷ್ಟ್ರಪತಿ ಆಡಳಿತ ಜಾರಿಯಾಗಿತ್ತು.

ಇದನ್ನೂ ಓದಿ: ವಿಪಕ್ಷ ಬಿಜೆಪಿಯ ಸಮೀಕರಣ ಬದಲಿಸಲಿದ್ಯಾ ಸಿದ್ದರಾಮಯ್ಯ ರಾಜೀನಾಮೆ?; ಹೀಗೊಂದು ಲೆಕ್ಕಾಚಾರ

ದೇವರಾಜ್ ಅರಸು (1978-80)

ಹಿಂದುಳಿದ ವರ್ಗಗಳ ಪ್ರಬಲ ನಾಯಕನಾಗಿದ್ದ ದೇವರಾಜ್ ಅರಸು ಇಂದಿರಾ ಗಾಂಧಿಯವರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿ ಕಾಂಗ್ರೆಸ್ (ಅರಸು) ಬಣ ಸ್ಥಾಪಿಸಿದ್ದರು. ಆದರೆ 1980ರಲ್ಲಿ ಇಂದಿರಾ ಗಾಂಧಿ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಬಳಿಕ ಅರಸು ಬಣದ ಅನೇಕ ಶಾಸಕರು ಕಾಂಗ್ರೆಸ್‌ಗೆ ಮರಳಿದರು. ಸರ್ಕಾರ ಬಹುಮತ ಕಳೆದುಕೊಂಡು ಅರಸು ರಾಜೀನಾಮೆ ನೀಡಿದರು. ನಂತರ ಆರ್​​. ಗುಂಡೂರಾವ್​ ಅಧಿಕಾರ ವಹಿಸಿಕೊಂಡರು.

ರಾಮಕೃಷ್ಣ ಹೆಗಡೆ (1985-88)

ರಾಮಕೃಷ್ಣ ಹೆಗಡೆ ಅವರು ಕರ್ನಾಟಕದ ಮೊದಲ ಕಾಂಗ್ರೆಸೇತರ ಮುಖ್ಯಮಂತ್ರಿ. ವಿರೋಧ ಪಕ್ಷದ ನಾಯಕರು ಹಾಗೂ ತಮ್ಮ ಪಕ್ಷದ ಅಸಮಾಧಾನಿತ ನಾಯಕರ ಫೋನ್ ಟ್ಯಾಪಿಂಗ್ ಆರೋಪದ ನಡುವೆ ನೈತಿಕ ಹೊಣೆ ಹೊತ್ತು ಮಧ್ಯಾವಧಿಯಲ್ಲೇ ಅವರು ರಾಜೀನಾಮೆ ನೀಡಿದ್ದರು. ಬಳಿಕ ಎಸ್​​.ಆರ್​​. ಬೊಮ್ಮಾಯಿ ಮುಖ್ಯಮಂತ್ರಿಯಾದರು.

ವೀರೇಂದ್ರ ಪಾಟೀಲ್ (1989-90)

1989ರ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬಳಿಕ ವೀರೇಂದ್ರ ಪಾಟೀಲ್ ಮತ್ತೆ ಮುಖ್ಯಮಂತ್ರಿಯಾದರು. ಆದರೆ ಚನ್ನಪಟ್ಟಣ ಮತ್ತು ದಾವಣಗೆರೆಯಲ್ಲಿ ನಡೆದ ಕೋಮು ಗಲಭೆಗಳು ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಿತ್ತು. ಪಾರ್ಶ್ವವಾಯು ಚಿಕಿತ್ಸೆಯಲ್ಲಿದ್ದ ಪಾಟೀಲ್ ಅವರನ್ನು ಬದಲಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಜೀವ್​​ ಗಾಂಧಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲೇ ಘೋಷಿಸಿದ್ದರು. ನಂತರ ಎಸ್​​. ಬಂಗಾರಪ್ಪ ಅವರನ್ನು ಸಿಎಂ ಮಾಡಲಾಗಿತ್ತು.

ಇದನ್ನೂ ಓದಿ: 40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ; ಯಾರ್ಯಾರು? ಇಲ್ಲಿದೆ ಲಿಸ್ಟ್​

ಎಸ್. ಬಂಗಾರಪ್ಪ (1990-92)

ಭ್ರಷ್ಟಾಚಾರ ಆರೋಪಗಳು ಮತ್ತು ಒಳಬಂಡಾಯದಿಂದ ಬಂಗಾರಪ್ಪ ಅವರ ಆಡಳಿತ ಸಂಕಷ್ಟಕ್ಕೆ ಸಿಲುಕಿತು. ಹಿರಿಯ ನಾಯಕ ವೀರಪ್ಪ ಮೊಯಿಲಿ ನೇತೃತ್ವದಲ್ಲಿ ಅಸಮಾಧಾನಿತರು ಮುಕ್ತವಾಗಿ ವಿರೋಧ ವ್ಯಕ್ತಪಡಿಸಿದರು. ಹೈಕಮಾಂಡ್ ಸೂಚನೆಯ ಮೇರೆಗೆ ಬಂಗಾರಪ್ಪ ರಾಜೀನಾಮೆ ನೀಡಿ, ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾದರು.

ಹೆಚ್.ಡಿ. ದೇವೇಗೌಡ (1994-96)

1994ರಲ್ಲಿ ಜನತಾದಳ ಕಾಂಗ್ರೆಸ್‌ನ್ನು ಸೋಲಿಸಿದ ಬಳಿಕ ಹೆಚ್​​.ಡಿ. ದೇವೇಗೌಡ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಆದರೆ 1996ರ ಲೋಕಸಭೆ ಚುನಾವಣೆಯ ಬಳಿಕ ಅವರು ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ಜೆ.ಹೆಚ್​​. ಪಟೇಲ್​​ ಅಧಿಕಾರ ವಹಿಸಿಕೊಂಡರು.

ಎನ್. ಧರ್ಮಸಿಂಗ್ ( 2004-06)

2004ರ ಚುನಾವಣೆಯಲ್ಲಿ ತ್ರಿಶಂಕು ಸ್ಥಿತಿ ಉಂಟಾದ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚಿಸಿತು. ಎನ್. ಧರ್ಮಸಿಂಗ್ ಮುಖ್ಯಮಂತ್ರಿಯಾದರು. ಆದರೆ 2006ರಲ್ಲಿ ಜೆಡಿಎಸ್ ಬೆಂಬಲ ಹಿಂಪಡೆದು ಬಿಜೆಪಿಯೊಂದಿಗೆ ಕೈಜೋಡಿಸಿದ ಪರಿಣಾಮ ಧರ್ಮಸಿಂಗ್ ರಾಜೀನಾಮೆ ನೀಡಿದರು.

ಹೆಚ್.ಡಿ. ಕುಮಾರಸ್ವಾಮಿ (2006-07)

20 ತಿಂಗಳ ಆಡಳಿತದ ಬಳಿಕ ಮೈತ್ರಿ ಒಪ್ಪಂದದಂತೆ ಬಿಜೆಪಿಗೆ ಅಧಿಕಾರ ಹಸ್ತಾಂತರಿಸಲು ಕುಮಾರಸ್ವಾಮಿ ನಿರಾಕರಿಸಿದರು. ಹೀಗಾಗಿ ಉಂಟಾದ ರಾಜಕೀಯ ಗೊಂದಲದ ಕಾರಣಕ್ಕೆ ಅವರು ರಾಜೀನಾಮೆ ನೀಡಬೇಕಾಯಿತು. ಬಳಿಕ ಬಿ.ಎಸ್​​. ಯಡಿಯೂರಪ್ಪ ಮುಖ್ಯಮಂತ್ರಿಯಾದರೂ ಜೆಡಿಎಸ್ ಬೆಂಬಲ ಹಿಂಪಡೆಯುತ್ತಿದ್ದಂತೆ ಸರ್ಕಾರ ಪತನಗೊಂಡಿತ್ತು.

ಯಡಿಯೂರಪ್ಪ – ಸದಾನಂದ ಗೌಡ – ಜಗದೀಶ್​​ ಶೆಟ್ಟರ್ (2008-2013)

2008ರಲ್ಲಿ ಬಿಜೆಪಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಿತು. ಯಡಿಯೂರಪ್ಪ ಮುಖ್ಯಮಂತ್ರಿಯಾದರು. ಆದರೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಲೋಕಾಯುಕ್ತ ಎಫ್‌ಐಆರ್ ದಾಖಲಿಸಿದ ಬಳಿಕ ಬಿಜೆಪಿ ಹೈಕಮಾಂಡ್ ಅವರು ರಾಜೀನಾಮೆ ನೀಡುವಂತೆ ಸೂಚಿಸಿತು. ಬಳಿಕ ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿಯಾದರೂ, ಪಕ್ಷದ ಒಳ ಅಸಮಾಧಾನದಿಂದ 11 ತಿಂಗಳಲ್ಲೇ ರಾಜೀನಾಮೆ ನೀಡಿದರು. ನಂತರ ಜಗದೀಶ್​​ ಶೆಟ್ಟರ್​​ ಕೊನೆಯ ಒಂದು ವರ್ಷ ಆಡಳಿತ ನಡೆಸಿದ್ದರು.

ಕುಮಾರಸ್ವಾಮಿ – ಯಡಿಯೂರಪ್ಪ – ಬಸವರಾಜ ಬೊಮ್ಮಾಯಿ (2019-2023)

2018ರ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಯಾರಿಗೂ ಸಿಗದ ಹಿನ್ನೆಲೆ ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತೆ ಮೈತ್ರಿ ಸರ್ಕಾರ ರಚಿಸಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಆದರೆ ಅಸಮಾಧಾನ ಮತ್ತು 17 ಶಾಸಕರ ರಾಜೀನಾಮೆಯಿಂದ ಸರ್ಕಾರ ಬಹುಮತ ಕಳೆದುಕೊಂಡಿತು. ಬಳಿಕ ಯಡಿಯೂರಪ್ಪ ನಾಲ್ಕನೇ ಬಾರಿ ಮುಖ್ಯಮಂತ್ರಿಯಾದರು. 2021ರಲ್ಲಿ ಅವರನ್ನು ಬದಲಿಸಿ ಬಿಜೆಪಿ ಹೈಕಮಾಂಡ್ ಬಸವರಾಜ್​​ ಬೊಮ್ಮಾಯಿ ಅವರನ್ನು ಸಿಎಂ ಆಗಿ ನೇಮಿಸಿತ್ತು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:45 pm, Fri, 29 May 26

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು