AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆಯಿಂದ ಈವರೆಗೆ ಬರೊಬ್ಬರಿ 141 ಕೋಟಿ ಮಹಿಳೆಯರು ಸಂಚಾರ-ಸಿದ್ದರಾಮಯ್ಯ

ಬೆಂಗಳೂರಿನ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡಯಾಲಿಸಿಸ್​ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ಹಣ, ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ 200 ಯೂನಿಟ್ ವಿದ್ಯುತ್ ಹಾಗೂ ಯುವನಿಧಿ ಯೋಜನೆಯನ್ನೂ ಜಾರಿ ಮಾಡಿದ್ದೇವೆ ಎಂದರು.

ಶಕ್ತಿ ಯೋಜನೆಯಿಂದ ಈವರೆಗೆ ಬರೊಬ್ಬರಿ 141 ಕೋಟಿ ಮಹಿಳೆಯರು ಸಂಚಾರ-ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
Poornima Agali Nagaraj
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 27, 2024 | 8:53 PM

ಬೆಂಗಳೂರು, ಜ.27: ಶಕ್ತಿ ಯೋಜನೆಯಿಂದ ಈವರೆಗೆ ಬರೊಬ್ಬರಿ 141 ಕೋಟಿ ಮಹಿಳೆಯರು ಸಂಚಾರ ಮಾಡಿದ್ದಾರೆ.  ಇದರಿಂದ ಪ್ರಯಾಣಕ್ಕೆ ಕೊಡುತ್ತಿದ್ದ ಅವರ ಹಣ ಉಳಿತಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡಯಾಲಿಸಿಸ್​ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು ‘ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ 2 ಸಾವಿರ ಹಣ, ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ 200 ಯೂನಿಟ್ ವಿದ್ಯುತ್ ಹಾಗೂ ಯುವನಿಧಿ ಯೋಜನೆಯನ್ನೂ ಜಾರಿ ಮಾಡಿದ್ದೇವೆ ಎಂದರು.

ಕೆಸಿ ಜೆನರಲ್ ಅಭಿವೃದ್ದಿಗೆ 150 ರೂ. ಕೋಟಿ ಮೀಸಲಿಟ್ಟಿದ್ದೆವೆ

ಇಂತಹ ಯೋಜನೆಗಳನ್ನು ಯಾವ ಸರ್ಕಾರನೂ ಮಾಡಲ್ಲ, ನಾವು ಏನೂ ಹೇಳ್ತಿವೋ ಅದನ್ನೆ ಕಾರ್ಯಗತ ಮಾಡುತ್ತೇವೆ. ಈಗಲೂ ಕೂಡ ಡಯಾಲಿಸಿಸ್ ಉಚಿತ ಮಾಡಿದ್ದೀವಿ. ಆರೋಗ್ಯ ಇಲಾಖೆಯಲ್ಲಿ ದಿನೇಶ್ ಗೂಂಡು ರಾವ್ ಸುಧಾರಣೆ ಮಾಡುತ್ತಾರೆ. ಇನ್ನುಳಿದಂತೆ ಕೆಸಿ ಜೆನೆರಲ್ ಆಸ್ಪತ್ರೆಯಲ್ಲಿ ಹಲವು ಬೇಡಿಕೆಗಳು ಇವೆ. ಈ ಹಿನ್ನಲೆ ಕೆಸಿ ಜೆನರಲ್ ಆಸ್ಪತ್ರೆ ಅಭಿವೃದ್ದಿಗೆ 150 ಕೋಟಿ ರೂಪಾಯಿ ಮೀಸಲಿಟ್ಟಿದ್ದೆವೆ ಎಂದರು.

ಇದನ್ನೂ ಓದಿ:ಶಕ್ತಿ ಯೋಜನೆ ಎಫೆಕ್ಟ್​: ಹಳೆಯ ಬಸ್ಸುಗಳ ಸರ್ವಿಸ್- ರಿಪೇರಿ ಮಾಡಿಸುತ್ತಿಲ್ಲ, ನಿತ್ಯ ಹೆಚ್ಚುತ್ತಿವೆ ಅಪಘಾತಗಳು

ರಾಜ್ಯದಲ್ಲಿ ಉಚಿತ ಡಯಾಲಿಸಿಸ್​ ಸೇವೆ ನೀಡಿದ್ದೇ ಸಿದ್ದರಾಮಯ್ಯ- ದಿನೇಶ್ ಗುಂಡೂರಾವ್

ಇದೇ ವೇಳೆ ಮಾತನಾಡಿದ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ‘ರಾಜ್ಯದಲ್ಲಿ ಉಚಿತ ಡಯಾಲಿಸಿಸ್​ ಸೇವೆ ನೀಡಿದ್ದೇ ಸಿದ್ದರಾಮಯ್ಯ ಎಂದು ಹೇಳಿದರು. ಕೆಲ ಸಮಸ್ಯೆಗಳಿದ್ದವು, ಅದನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗಿದ್ದೇವೆ. ವ್ಯವಸ್ಥೆ ಬದಲಾಯಿಸುವ ನಿಟ್ಟಿನಲ್ಲಿ ನೂತನ ವ್ಯವಸ್ಥೆ ಜಾರಿ ಮಾಡಿದ್ದೇವೆ. ರಾಜ್ಯದ ಪ್ರತಿ ಕೇಂದ್ರದಲ್ಲೂ ಹೊಸ ಯಂತ್ರವನ್ನು ಅಳವಡಿಸಿದ್ದೇವೆ. 42 ತಾಲೂಕುಗಳಲ್ಲಿ ಹೊಸ ಡಯಾಲಿಸಿಸ್​​ ಕೇಂದ್ರಗಳ ಸ್ಥಾಪನೆ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ನಿತ್ಯ 6 ರೋಗಿಗಳಿಗೆ ಡಯಾಲಿಸಿಸ್ ಸೇವೆ ನೀಡಲಾಗುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:48 pm, Sat, 27 January 24

ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ