AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಶ್ವರಪ್ಪಗೂ, ನನಗೂ ಲವ್ ಆ್ಯಂಡ್ ಹೇಟ್ ಫ್ರೆಂಡ್​ಶಿಪ್​ ಇದೆ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ನಿಮ್ಮ ಮಾತು ಈಶ್ವರಪ್ಪಗೆ ಸರಿಯಾಗಿ ಕೇಳಿಸುತ್ತಿಲ್ಲವಂತೆ. ಅವರ ಮೇಲೆ ಏನಾದರೂ ಸಿಟ್ಟಿದೆಯಾ ಅಂತ ಕಾಗೇರಿ ಸಿದ್ದರಾಮಯ್ಯಗೆ ಕೇಳುತ್ತಾರೆ.

ಈಶ್ವರಪ್ಪಗೂ, ನನಗೂ ಲವ್ ಆ್ಯಂಡ್ ಹೇಟ್ ಫ್ರೆಂಡ್​ಶಿಪ್​ ಇದೆ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
TV9 Web
| Updated By: sandhya thejappa|

Updated on:Sep 13, 2021 | 4:45 PM

Share

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪಗೂ (KS Eshwarappa) ಮತ್ತು ನನಗೂ ಲವ್ ಆ್ಯಂಡ್ ಹೇಟ್ ಸಂಬಂಧವಿದೆ. ವೈರನೂ ಇದೆ, ಸ್ನೇಹನೂ ಇದೆ. ರಾಜಕೀಯವಾಗಿ, ವೈಯುಕ್ತಿಕವಾಗಿ ಏನೂ ಇಲ್ಲ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಗಣ್ಯರಿಗೆ ಸಿದ್ದರಾಮಯ್ಯ ಸಂತಾಪ ಸೂಚಿಸುವ ವೇಳೆ ಅವರ ಧ್ವನಿ ಕೇಳಿಸುತ್ತಿರಲಿಲ್ಲ. ಆಗ ಮೈಕ್ ಸರಿ ಕೇಳುತ್ತಿಲ್ಲವಂತೆ ಎಂದು ಸ್ಪೀಕರ್ ಕಾಗೇರಿ ಹೇಳುತ್ತಾರೆ. ನಿಮಗೆ ಸರಿಯಾಗಿ ಕೇಳುತ್ತಿದೆಯಲ್ಲ, ನಮಗೂ ನಿಮಗೂ ಅಡ್ಜಸ್ಟ್ಮೆಂಟ್ ಏನಿಲ್ಲ ಅಲ್ವಾ? ಗೌರವ ಇದೆ ಅಷ್ಟೇ ಅಂತ ಸಿದ್ದರಾಮಯ್ಯ ಹೇಳುತ್ತಾರೆ.

ನಿಮ್ಮ ಮಾತು ಈಶ್ವರಪ್ಪಗೆ ಸರಿಯಾಗಿ ಕೇಳಿಸುತ್ತಿಲ್ಲವಂತೆ. ಅವರ ಮೇಲೆ ಏನಾದರೂ ಸಿಟ್ಟಿದೆಯಾ ಅಂತ ಕಾಗೇರಿ ಸಿದ್ದರಾಮಯ್ಯಗೆ ಕೇಳುತ್ತಾರೆ. ಆಗ ಸ್ಪೀಕರ್ ಮಾತಿಗೆ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಈಶ್ವರಪ್ಪ, ನನಗೂ ಲವ್ ಆ್ಯಂಡ್ ಹೇಟ್ ಫ್ರೆಂಡ್ ಶೀಪ್. ವೈರನೂ ಇದೆ, ಸ್ನೇಹನೂ ಇದೆ. ಆದರೆ ರಾಜಕೀಯವಾಗಿ, ವೈಯುಕ್ತಿಕವಾಗಿ ಏನೂ ಇಲ್ಲ ಅಂತ ತಿಳಿಸಿದರು.

ಇಬ್ರಾಹಿಂ ಸಲಹೆ ಸೂಕ್ತವಾಗಿದೆ ಎಂದ ಸಭಾಪತಿ ಅಗಲಿದ ಗಣ್ಯರಿಗೆ ವಿಧಾನಪರಿಷತ್ನಲ್ಲಿ ಸಂತಾಪ ಸೂಚಿಸಿದ ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ, ಸಂತಾಪ ಸೂಚಿಸುವಾಗ ದೇಶಕ್ಕೆ ನಷ್ಟವಾಗಿದೆ ಎನ್ನಲಾಗುತ್ತದೆ. ಅವರ ಮನೆ ಪರಿಸ್ಥಿತಿ ಏನಾಗಿದೆ ಎಂದು ತಿಳಿಯಬೇಕು. ಸಂತಾಪ ಸೂಚಿಸುವ ಮುನ್ನ ಮಾಸಾಶನ ವ್ಯವಸ್ಥೆ ಆಗಬೇಕು. ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಅಂತ ಒತ್ತಾಯಿಸುತ್ತಾರೆ. ಈ ವೇಳೆ ಸಿ.ಎಂ.ಇಬ್ರಾಹಿಂ ಸಲಹೆ ಸೂಕ್ತವಾಗಿದೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳುತ್ತಾರೆ.

ಇದನ್ನೂ ಓದಿ

ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ತನಕವೂ ನಿಷೇಧಾಜ್ಞೆ; ವಾಹನ ಸವಾರರೇ ಗಮನಿಸಿ

ಸಿಎಂ ಬೊಮ್ಮಾಯಿ ಜತೆ ಫೋನ್ ಮೂಲಕ ಚರ್ಚಿಸಿದೆ; ನಂಜನಗೂಡು ದಂಡಾಧಿಕಾರಿ ವಿರುದ್ಧ ಕ್ರಮಕ್ಕೆ ಮನವಿ ಮಾಡಿರುವೆ: ಸಂಸದ ಪ್ರತಾಪ್

(Siddaramaiah said that KS Eshwarappa and I have a love and hate relationship)

Published On - 1:02 pm, Mon, 13 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ