AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tipu Jayanti: ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ಆದರ್ಶ ಜನನಾಯಕ: ಸಿದ್ದರಾಮಯ್ಯ ಟ್ವೀಟ್

ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ - ಸಿದ್ದರಾಮಯ್ಯ ಟ್ವೀಟ್

Tipu Jayanti: ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ಆದರ್ಶ ಜನನಾಯಕ: ಸಿದ್ದರಾಮಯ್ಯ ಟ್ವೀಟ್
ಟಿಪ್ಪು ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ಆದರ್ಶಸ್ವರೂಪಿ ಜನನಾಯಕ: ಸಿದ್ದರಾಮಯ್ಯ ಟ್ವೀಟ್
TV9 Web
| Updated By: ಸಾಧು ಶ್ರೀನಾಥ್​|

Updated on:Nov 10, 2022 | 2:11 PM

Share

ಬೆಂಗಳೂರು: ಟಿಪ್ಪು ಜಯಂತಿ ಸಂದರ್ಭದಲ್ಲಿ ಹಾಲಿ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್​​ ಮಾಡಿದ್ದಾರೆ. ಟಿಪ್ಪು ಸುಲ್ತಾನ್ ಅಪ್ರತಿಮ ದೇಶಪ್ರೇಮಿ. ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ. ಟಿಪ್ಪು ಜಯಂತಿ (Tipu Jayanti) ದಿನ ಅವರಿಗೆ ಗೌರವದ ನಮನಗಳು ಎಂದು ಸಿದ್ದರಾಮಯ್ಯ ಟ್ವೀಟ್ (twitter)​​ ಮಾಡಿ ಶುಭಾಶಯ ಹೇಳಿದ್ದಾರೆ.

ಸಿದ್ದರಾಮಯ್ಯ ಟ್ವೀಟ್​​ ಸಾರಾಂಶ ಹೀಗಿದೆ:

ಅಪ್ರತಿಮ ದೇಶಪ್ರೇಮಿ, ವೀರ ಸ್ವಾತಂತ್ರ್ಯ ಹೋರಾಟಗಾರ, ದಕ್ಷ ಆಡಳಿತಗಾರ ಮತ್ತು ಪರಧರ್ಮ ಸಹಿಷ್ಣು ಟಿಪ್ಪು ಸುಲ್ತಾನ್ ಓರ್ವ ಆದರ್ಶಸ್ವರೂಪಿ ಜನನಾಯಕ. ಟಿಪ್ಪು ಜಯಂತಿ ದಿನ ಅವರಿಗೆ ಗೌರವದ ನಮನಗಳು. #TippuJayanti

ಜೆಡಿಎಸ್ ಕಛೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ:

ಬೆಂಗಳೂರಿನ ಜೆಡಿಎಸ್ ಕಛೇರಿ ಜೆಪಿ ಭವನದಲ್ಲಿ ಟಿಪ್ಪು ಜಯಂತಿಯನ್ನು ಆಚರಿಸಲಾಯಿತು. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ – ಹೆಚ್.ವಿಶ್ವನಾಥ್

ಟಿಪ್ಪು ಜಯಂತಿ ಆಚರಣೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ ಎಂದು ಮೈಸೂರಿನಲ್ಲಿ ವಿಧಾನ ಪರಿಷತ್​ನ ಬಿಜೆಪಿ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. ಟಿಪ್ಪು ಕನ್ನಡ ವಿರೋಧಿ ಎಂದು ಬಿಂಬಿಸುವವರಿಗೆ ಇದು ತಕ್ಕ ಉತ್ತರ. ಶತ್ರುಗಳ ಮುಂದೆ ಮಂಡಿಯೂರದ ಏಕೈಕ ವ್ಯಕ್ತಿ ಟಿಪ್ಪು ಸುಲ್ತಾನ್ ಎಂದು ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ MLC ಹೆಚ್. ವಿಶ್ವನಾಥ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಆರ್ಥಿಕ ವಲಯವನ್ನು ಉತ್ತಮಪಡಿಸಿದ್ದು ಟಿಪ್ಪು. ಕನ್ನಂಬಾಡಿ ಕಟ್ಟೆಯನ್ನ ಯದುವಂಶದವರು ಕಟ್ಟಿದರು, ಅದಕ್ಕೆ ಭೂಮಿ ಪೂಜೆ ಮಾಡಿದವರು ಟಿಪ್ಪು. ಮೈಸೂರು ಹುಲಿ ಎಂಬ ಬಿರುದು ಯಾರೋ ಮಹಾರಾಜರು ನೀಡಿಲ್ಲ. ಈ ನಾಡಿನ ಪ್ರಜೆಗಳು ಟಿಪ್ಪುಗೆ ಮೈಸೂರು ಹುಲಿ ಬಿರುದು ನೀಡಿದ್ದಾರೆ. ಟಿಪ್ಪು ಮತಾಂತರ ಮಾಡಿದ, ಹಲವರನ್ನು ಕೊಂದ ಎಂದು ಹೇಳುತ್ತಾರೆ. ಟಿಪ್ಪು ಮತಾಂತರ ಮಾಡಿಲ್ಲ, ಯಾರನ್ನೂ ಕೊಂದಿಲ್ಲ ಎಂದು ಹೆಚ್.ವಿಶ್ವನಾಥ್ ಹೇಳಿದ್ದಾರೆ.

ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸತ್ಯ ಹೇಳಬೇಕು -ಹೆಚ್ ವಿಶ್ವನಾಥ್

ಯಾರೋ ಏನೋ ಹೇಳಬಹುದು ರೈಲಿನ ಹೆಸರನ್ನು ತೆಗೆಯಬಹುದು. ಆದರೆ ನಾಡಿನ ಜನರ ಮನಸ್ಸಿನಿಂದ ಅವರನ್ನು ತೆಗೆಯಲು ಯಾರಿಗೂ ಸಾಧ್ಯವಾಗದು. ಟಿಪ್ಪು ಮತಾಂತರ ಮಾಡಿದ, ಕೊಂದ ಎಂದು ಹೇಳುತ್ತಾರೆ ಅದೆಲ್ಲ ಸುಳ್ಳು. ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಸತ್ಯ ಹೇಳಬೇಕು. ಟಿಪ್ಪು ಆಡಳಿತ, ಧೈರ್ಯ ಶೌರ್ಯ, ಕಲ್ಯಾಣ ಕಾರ್ಯಕ್ರಮಗಳನ್ನು ಯಾರೂ ಅಲ್ಲೆಗೆಳೆಯಲು ಸಾಧ್ಯವಾಗದು. ಮೈಸೂರಿನ ಸಂಸ್ಥಾನದಲ್ಲಿ ಅಂದು ಎಷ್ಟು ಜನಸಂಖ್ಯೆ ಇತ್ತು? 70 ಸಾವಿರ ಜನರನ್ನು ಕೊಂದ, ಮತಾಂತರ ಮಾಡಿದ ಎಂದು ಹೇಳುತ್ತಾರೆ. ಹಾಗಾದರೆ ಅಂದು ಜನಸಂಖ್ಯೆ ಎಷ್ಟಿತ್ತು?

ಶೃಂಗೇರಿ ಮಠ ಸಂಕಷ್ಟದಲ್ಲಿದ್ದಾಗ ಧರ್ಮಧಿಕಾರಿಗಳು ಟಿಪ್ಪುಗೆ ಪತ್ರ ಬರೆಯುತ್ತಾರೆ. ಅಂದು ಟಿಪ್ಪು ಮಠವನ್ನು ರಕ್ಷಣೆ ಮಾಡುತ್ತಾರೆ. ಟಿಪ್ಪು ಧರ್ಮದ ಪರವು ಆಡಳಿತ ಪರವೂ ಇದ್ದರು. ಮಹಿಳೆಯರಿಗೆ ಕೇರಳದಲ್ಲಿ ವಸ್ತ್ರ ಸಂಹಿತೆಯನ್ನ ಜಾರಿಗೆ ತಂದಿದ್ದು ಟಿಪ್ಪು ಸುಲ್ತಾನ್ ಎಂದು ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದರು.

ಮುಕುಡಪ್ಪ ನಿವಾಸದ ಬಾಗಿಲಿಗೆ ಪೋಸ್ಟರ್ ಅಂಟಿಸಿ ಮಸಿ ಚೆಲ್ಲಿದ ಕಾಂಗ್ರೆಸ್ ಕಾರ್ಯಕರ್ತರು:

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕುರುಬ ಸಮಾಜದ ಮುಖಂಡ ಮುಕುಡಪ್ಪ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿರುವ ಮುಕುಡಪ್ಪ ಮನೆಗೆ ಮುತ್ತಿಗೆ ಹಾಕಿದ ‘ಕೈ’ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆ ಬಾಗಿಲಿಗೆ ಪೋಸ್ಟರ್ ಅಂಟಿಸಿ, ಮಸಿ ಬಳಿದ ಕಾರ್ಯಕರ್ತರು ಮುಕುಡಪ್ಪ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read: ಟಿಪ್ಪುವಿನ ಸತ್ಯ ವಿಚಾರಗಳ ತಿಳಿಸುವ ‘ಟಿಪ್ಪು ನಿಜ ಕನಸುಗಳು’ ನಾಟಕ: ಡಿಸೆಂಬರ್ 8 ರಿಂದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ರಾಜ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಮರಿಂದ ಟಿಪ್ಪು ಜಯಂತಿ-ಫೊಟೋ ತೆರವುಗೊಳಿಸಿದ ಪೊಲೀಸರು

Published On - 1:09 pm, Thu, 10 November 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​