AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟ ಬಿಜೆಪಿ ಶಾಸಕ ವಿರೂಪಾಕ್ಷಪ್ಪನನ್ನು ಅರೆಸ್ಟ್ ಮಾಡಬೇಕು, ನನ್ನ ರಾಜಕೀಯ ಜೀವನದಲ್ಲಿ ಇಂಥ ಭ್ರಷ್ಟ ಸರ್ಕಾರ ನೋಡಿರಲಿಲ್ಲ -ಸಿದ್ದರಾಮಯ್ಯ ಗುಡುಗು

ನನ್ನ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ. ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ. ಮೋದಿ, ಅಮಿತ್ ಶಾ, ಕಟೀಲು, ಬೊಮ್ಮಾಯಿ ಬರೀ ಸುಳ್ಳು ಹೇಳ್ತಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಆಯೇಷಾ ಬಾನು
|

Updated on:Mar 04, 2023 | 12:39 PM

Share

ಬೆಂಗಳೂರು: ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ (Madalu Veerupakshappa) ಹಾಗೂ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಮತ್ತೊಂದೆಡೆ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಅಂದ್ರೆ ಭ್ರಷ್ಟ ಜನತಾ ಪಾರ್ಟಿ ಅಂತಾ ಕರೆಯಬೇಕಾಗುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ. ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ. ಮೋದಿ, ಅಮಿತ್ ಶಾ, ಕಟೀಲು, ಬೊಮ್ಮಾಯಿ ಬರೀ ಸುಳ್ಳು ಹೇಳ್ತಾರೆ. ನಾವು ಭ್ರಷ್ಟಾಚಾರ ಆರೋಪ ಮಾಡಿದ್ರೆ ದಾಖಲಾತಿ ಕೊಡಿ ಅಂತಾರೆ. ಅಲ್ಲದೇ ಹಿಂದಿನ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆದಿತ್ತು ಅಂತಾರೆ. PSI ನೇಮಕಾತಿ ಹಗರಣದಲ್ಲಿ ಎಡಿಜಿಪಿ ಸುಮ್ಮನೇ ಜೈಲಿಗೆ ಹೋದ್ರಾ? ಜಿಲ್ಲಾಧಿಕಾರಿ ಜೈಲಿಗೆ ಹೋಗಿದ್ದ, ಇದಕ್ಕಿಂತ ಇವರಿಗೆ ಸಾಕ್ಷ್ಯ ಬೇಕಾ? ಈಶ್ವರಪ್ಪ ಹೆಸರು ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ. ಈ ವಿಚಾರಕ್ಕೆ ಈಶ್ವರಪ್ಪ ರಾಜೀನಾಮೆ ಕೊಟ್ಟ, ಇದಕ್ಕಿಂತ ಸಾಕ್ಷ್ಯಬೇಕಾ? ಎಂದು ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಪೊಲೀಸರು 8 ಕೋಟಿಗೂ ಹೆಚ್ಚು ಹಣ ಜಪ್ತಿ ಮಾಡಿದ್ದಾರೆ. ಬಿಜೆಪಿ ಶಾಸಕ ಮಾಡಾಳ್​​ ವಿರೂಪಾಕ್ಷಪ್ಪರನ್ನು ಅರೆಸ್ಟ್ ಮಾಡಬೇಕು. ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಬೇಕು. ಬಿಜೆಪಿಯವರು ದುಡ್ಡಿನಿಂದ ಚುನಾವಣೆ ಗೆಲ್ತೀವಿ ಅಂದುಕೊಂಡಿದ್ದಾರೆ. ಪ್ರತಿ ಕ್ಷೇತ್ರಕ್ಕೆ 100 ಕೋಟಿಯಷ್ಟು ಖರ್ಚು ಮಾಡಲು ಹೊರಟಿದ್ದಾರೆ. ರಾಜ್ಯದ ಜನರೇ ಬಿಜೆಪಿಯವರಿಗೆ ಪಾಠ ಕಲಿಸಬೇಕು. ನಾನು ಸಿಎಂ ಆಗಿದ್ದಾಗ ಆರೋಪ ಬಂದಾಗ ತನಿಖೆ ಮಾಡಿಸಿದ್ದೇನೆ ಎಂದರು.

ಇದನ್ನೂ ಓದಿ: ವಿರೂಪಾಕ್ಷಪ್ಪ ಮಾಡಾಳ್‌ ಪುತ್ರನ ವಿರುದ್ಧ ಭ್ರಷ್ಟಾಚಾರ ಆರೋಪ: ಸಿಎಂ ಬೊಮ್ಮಾಯಿ ರಾಜಿನಾಮೆ ನೀಡುವಂತೆ ಸೂಟ್​ಕೇಸ್, ಗುಟ್ಕಾ ಬ್ಯಾಗ್​ ಹಿಡಿದು ಕೈ ಪ್ರತಿಭಟನೆ

ಗಡಿಪಾರು ಆಗಿದ್ದ, ಜೈಲಿಗೆ ಹೋಗಿದ್ದ ಶಾರಿಂದ ಪಾಠ ಕಲಿಯಬೇಕಾ?

ಜೈಲಿಗೆ ಹೋಗಿ ಬಂದ ಅಮಿತ್​ ಶಾರಿಂದ ನಾವು ಪಾಠ ಕಲಿಯಬೇಕಾ? ಎಂದು ಅಮಿತ್ ಶಾ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಹೈಕಮಾಂಡ್​​ನ ಎಟಿಎಂ ಆಗಿತ್ತು ಅಂತಿದ್ರು. ಕೇಂದ್ರ ಸಚಿವ ಅಮಿತ್ ಶಾ ಈಗ ಏನು ಹೇಳ್ತಾರೆ. ಗಡಿಪಾರು ಆಗಿದ್ದ, ಜೈಲಿಗೆ ಹೋಗಿದ್ದ ಶಾರಿಂದ ಪಾಠ ಕಲಿಯಬೇಕಾ? ಎಂದು ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ. ಇನ್ನು ಇದೇ ವೇಳೆ ಖರ್ಗೆರನ್ನು ಕಾಂಗ್ರೆಸ್ ಕಡೆಗಣಿಸಿದೆ ಎಂದು ಮೋದಿ ಆರೋಪ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರಿಗೆ ಗೌರವಕೊಡುವುದನ್ನು ನಿಮ್ಮಿಂದ ಕಲಿಯಬೇಕಿಲ್ಲ. ಎಲ್​.ಕೆ.ಅಡ್ವಾಣಿ, ಎಂ.ಎಂ.ಜೋಶಿರನ್ನು ಸೈಡ್​​​ಲೈನ್ ಮಾಡಿದ್ದು ನೀವು. ಅನಂತಕುಮಾರ್ ಪತ್ನಿಗೆ ಟಿಕೆಟ್ ಕೊಡದೇ ಅನ್ಯಾಯ ಮಾಡಿದ್ದು ನೀವು. ಸಿಎಂ ಸ್ಥಾನದಿಂದ ತೆಗೆದು ಯಡಿಯೂರಪ್ಪರಿಂದ ಕಣ್ಣೀರು ಹಾಕಿಸಿದ್ರಿ, ಇವರು ಹೇಳಿದಂತೆ ಕೇಳುವ ಬೊಮ್ಮಾಯಿರನ್ನು ಸಿಎಂ ಮಾಡಿದ್ರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:43 am, Sat, 4 March 23

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್