AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜತೆ ಮುಂದೆ ಮೈತ್ರಿ ಮಾಡಿಕೊಳ್ಳೊಲ್ಲ ಎಂದು ನಿಮ್ಮ ತಂದೆ ಮೇಲೆ ಆಣೆ ಮಾಡ್ತೀರಾ? ಹೆಚ್​ಡಿಕೆ ವಿರುದ್ಧ ಸಿದ್ದು ವಾಗ್ದಾಳಿ

ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ. ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಸಿದ್ದರಾಮಯ್ಯ, ಹೆಚ್ಡಿ ಕುಮಾರಸ್ವಾಮಿಯವರನ್ನು ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಜತೆ ಮುಂದೆ ಮೈತ್ರಿ ಮಾಡಿಕೊಳ್ಳೊಲ್ಲ ಎಂದು ನಿಮ್ಮ ತಂದೆ ಮೇಲೆ ಆಣೆ ಮಾಡ್ತೀರಾ? ಹೆಚ್​ಡಿಕೆ ವಿರುದ್ಧ ಸಿದ್ದು ವಾಗ್ದಾಳಿ
ಸಿದ್ದರಾಮಯ್ಯ
TV9 Web
| Updated By: ಆಯೇಷಾ ಬಾನು|

Updated on:Apr 19, 2022 | 7:21 PM

Share

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಸರಣಿ ಟ್ವೀಟ್ ಮೂಲಕ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ಪ್ರಶ್ನೆಗಳನ್ನು ಹೇಳಿದ್ದಾರೆ. ಹಾಗೂ ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಸವಾಲು ಹಾಕಿದ್ದಾರೆ.

ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಟ್ವೀಟ್ಗಳು ದೇಶದಲ್ಲಿ ಇಂದು ನಡೆಯುತ್ತಿರುವ ಜಾತ್ಯತೀತತೆ ಮತ್ತು ಕೋಮುವಾದದ ನಡುವಿನ ನಿರ್ಣಾಯಕ ಹೋರಾಟದಲ್ಲಿ ನಾವೆಲ್ಲಿ ನಿಂತಿದ್ದೇವೆ ಎನ್ನುವುದನ್ನು ಜನತೆಗೆ ತಿಳಿಸಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ನಿತ್ಯ ನನ್ನ ವಿರುದ್ದ ನಂಜು ಕಾರುತ್ತಿರುವ ಹೆಚ್ಡಿ ಕುಮಾರಸ್ವಾಮಿ ಯವರೇ ನೀವೆಲ್ಲಿ ನಿಂತಿದ್ದೀರಿ? ಎಂದು ಮೊದಲು ಹೇಳಿ. ನಿಮ್ಮದು ಜಾತ್ಯತೀತತೆಗೆ ಬದ್ಧವಾಗಿರುವ ಪಕ್ಷ ಎಂದು ಹೇಳುತ್ತಲೇ ಬಂದಿದ್ದೀರಿ. ಹಾಗಿದ್ದರೆ, ಮುಂದಿನ ದಿನಗಳಲ್ಲಿ ನಿಮ್ಮ ಪಕ್ಷ ಬಿಜೆಪಿಯ ಜೊತೆ ಚುನಾವಣಾ ಪೂರ್ವ ಇಲ್ಲವೇ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ಸಿದ್ಧ ಇದ್ದೀರಾ? ಎಂದು ಸಿದ್ದರಾಮಯ್ಯ, ಹೆಚ್ಡಿ ಕುಮಾರಸ್ವಾಮಿಯವರನ್ನು ಪ್ರಶ್ನೆ ಮಾಡಿದ್ದಾರೆ.

ವಚನಭಂಗದ ನಿಮ್ಮ ಇತಿಹಾಸವನ್ನು ಕಂಡ ನಾಡಿನ ಜನತೆ ಸುಲಭದಲ್ಲಿ ನಿಮ್ಮನ್ನು ನಂಬಲಾರರು. ನಂಬಿಕೆ ಹುಟ್ಟಿಸಲು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಿಮ್ಮ ತಂದೆ ಅವರ ಮೇಲೆ ಆಣೆ ಮಾಡಿ ಘೋಷಿಸಲು ಸಿದ್ಧ ಇದ್ದೀರಾ. ಬಿಜೆಪಿ ಜೊತೆ ಎಂದೆಂದೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನೀವು ಘೋಷಿಸಿಬಿಟ್ಟರೆ ನಿಮ್ಮ ಪಕ್ಷ ಬಿಜೆಪಿಯ ‘ಬಿ-ಟೀಮ್’ ಎಂಬ ಆರೋಪವನ್ನು ಕೂಡಾ ಸುಳ್ಳು ಎಂದು ಸಾಬೀತು ಮಾಡಿದಂತಾಗುತ್ತದೆ. ನಿಮ್ಮ ಪಕ್ಷದ ಹೆಸರು ಕೂಡಾ ಅರ್ಥಪೂರ್ಣವಾಗುತ್ತದೆ. ಗೋಮುಖ ವ್ಯಾಘ್ರರೇ ಸುತ್ತ ಕುಣಿದಾಡುತ್ತಿರುವ ಈ ಸಂದರ್ಭದಲ್ಲಿ ಜನ ಪ್ರತಿಯೊಬ್ಬರನ್ನೂ ಸಂಶಯದಿಂದ ನೋಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಮ್ಮ ಅಸಲಿ ಮುಖವನ್ನು ಜನರ ಮುಂದೆ ತೆರೆದಿಟ್ಟು ಅವರ ವಿಶ್ವಾಸವನ್ನು ಗಳಿಸಿ, ನಮ್ಮ ಹೋರಾಟದಲ್ಲಿ ಅವರನ್ನು ತೊಡಗಿಸಿಕೊಳ್ಳಬೇಕಾಗಿದೆ. ಉಳಿದುದೆಲ್ಲವನ್ನೂ ಪಕ್ಕಕ್ಕಿಟ್ಟು ನನ್ನ ವಿರುದ್ಧದ ವೈಯಕ್ತಿಕ ನಿಂದೆ, ವಿಕೃತ ಮನಸ್ಸಿನ ಹಳಹಳಿಕೆ ಮತ್ತು ಸುಳ್ಳುಗಳಿಂದ ಕೂಡಿದ ಅಭಿಯಾನವನ್ನೇ ನೀವು ಮುಂದುವರಿಸುವುದಾದರೆ ಹಾಗೆಯೇ ಮಾಡಿ. ಸಾರ್ವಜನಿಕ ಜೀವನದಲ್ಲಿರುವ ನಮ್ಮನ್ನು – ನಿಮ್ಮನ್ನು ಜನ ನೋಡಿದ್ದಾರೆ. ಅವರು ತೀರ್ಮಾನಿಸುತ್ತಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಮೇಜರ್​ ಸರ್ಜರಿ; 39 ಐಎಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಸಹಿತ ಪದೋನ್ನತಿ

ಈ ಫೋಟೋದಲ್ಲಿರುವ ಖ್ಯಾತ ನಟ-ನಟಿ ಯಾರು ಎಂದು ಗುರುತಿಸುತ್ತೀರಾ?

Published On - 7:05 pm, Tue, 19 April 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ