AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವಾಗಲೇ ಬಂತು ಪ್ರಮೋಷನ್ ಚೀಟಿ: ಮಹತ್ವದ ಹೇಳಿಕೆ ನೀಡಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ KAS ಅಧಿಕಾರಿಗಳಿಗೆ ಜನಸೇವೆ, ಪ್ರಜಾಪ್ರಭುತ್ವದ ಆಶಯಗಳನ್ನು ನೆನಪಿಸಿದರು. ಜನರೇ ಪ್ರಭುಗಳು, ಅವರ ಸಮಸ್ಯೆಗೆ ಸ್ಪಂದಿಸಿ, ಮಧ್ಯವರ್ತಿಗಳನ್ನು ನಿಷೇಧಿಸಿ (ವಿಶೇಷವಾಗಿ RTO ಕಚೇರಿಗಳಲ್ಲಿ) ಎಂದು ಕರೆ ನೀಡಿದರು. ಅಧಿಕಾರಿಗಳ ಬಡ್ತಿ ಪ್ರಕ್ರಿಯೆ ಶೀಘ್ರವಾಗಿ ನಡೆಯಲಿದೆ ಎಂದು ಭರವಸೆ ನೀಡಿದ ಅವರು, ಸಮರ್ಥ ಆಡಳಿತಕ್ಕಾಗಿ ಸಮಾಜದ ನಾಡಿಮಿಡಿತ ಅರಿಯುವುದು ಅಗತ್ಯ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವಾಗಲೇ ಬಂತು ಪ್ರಮೋಷನ್ ಚೀಟಿ: ಮಹತ್ವದ ಹೇಳಿಕೆ ನೀಡಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ
ಅಕ್ಷಯ್​ ಪಲ್ಲಮಜಲು​​
|

Updated on: Apr 27, 2026 | 7:47 PM

Share

ಬೆಂಗಳೂರು, ಏ.27: “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿಜವಾದ ಪ್ರಭುಗಳು. ನಾವು ಮತ್ತು ನೀವು ಅವರ ಸೇವೆಗಾಗಿ ಇದ್ದೇವೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಅಧಿಕಾರಿಗಳಿಗೆ ಸಂವಿಧಾನದ ಆಶಯವನ್ನು ನೆನಪಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗೆ ಸ್ಪಂದಿಸುವಂತೆ ಅವರು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಅವರು ಬೆಂಗಳೂರಿನಲ್ಲಿ KAS ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಇದೇ ವೇಳೆ ಅವರು ಅಧಿಕಾರಿಗಳ ಪ್ರಮೋಷನ್ ಬಗ್ಗೆಯೂ ಮಾತನಾಡಿದರು. ನಿಮ್ಮ ಪದೋನ್ನತಿ ಬಗ್ಗೆ ವೇದಿಕೆಯಲ್ಲಿ ಅಧಿಕಾರಿಯೊಬ್ಬರಿ ಚೀಟಿ ನೀಡಿದ್ದಾರೆ. “ನನಗೆ ಪ್ರಮೋಷನ್ ಮಾಡಿ ಎಂಬ ಚೀಟಿ ಬಂದಿದೆ. ಈಗಾಗಲೇ ಎರಡು ಸಭೆಗಳನ್ನು ನಡೆಸಿ ಸೂಚನೆ ನೀಡಿದ್ದೇನೆ. ಆದಷ್ಟು ಬೇಗ ಅರ್ಹ ಅಧಿಕಾರಿಗಳಿಗೆ ಪ್ರಮೋಷನ್ ನೀಡುವ ಪ್ರಕ್ರಿಯೆ ನಡೆಯಲಿದೆ,” ಎಂದು ಭರವಸೆ ನೀಡಿದರು.

ಮಾತು ಮುಂದುವರಿಸಿದ ಅವರು, “ನಾವು ಐದು ವರ್ಷಕ್ಕೊಮ್ಮೆ ಚುನಾವಣೆಯಲ್ಲಿ ರಿನಿವಲ್ ಆಗಬೇಕು. ಆದರೆ ನೀವು 30-35 ವರ್ಷ ಸೇವೆ ಸಲ್ಲಿಸುತ್ತೀರಿ. ನಿವೃತ್ತಿಯಾಗುವವರೆಗೆ ಜನರ ಸೇವೆ ಮಾಡುವ ದೊಡ್ಡ ಅವಕಾಶ ನಿಮಗಿದೆ,” ಎಂದರು.”ನಮಗೆ ಸಂಬಳ ಕೊಡುವುದು ಜನರೇ, ಅವರೇ ಪ್ರಭುಗಳು. ನೆಪ ಹೇಳದೆ ಜನರ ಕೆಲಸ ಮಾಡಿಕೊಡಿ. ಅದರಿಂದ ನಿಮ್ಮ ಜೀವನ ಸಾರ್ಥಕವಾಗುತ್ತದೆ,” ಎಂದು ಕಿವಿಮಾತು ಹೇಳಿದರು.

ಸಮಾಜದ ನಾಡಿಮಿಡಿತ ಅರ್ಥ ಮಾಡಿಕೊಳ್ಳದಿದ್ದರೆ ವ್ಯಕ್ತಿತ್ವ ಬೆಳೆಯಲು ಸಾಧ್ಯವಿಲ್ಲ. “ಓದಿಗಿಂತ ಕಾಮನ್ ಸೆನ್ಸ್ ಬಹಳ ಮುಖ್ಯ. ಸಮಾಜದ ಬಗ್ಗೆ ಅರಿವಿದ್ದರೆ ಮಾತ್ರ ಜನರ ಸಮಸ್ಯೆಗೆ ಸ್ಪಂದಿಸಲು ಸಾಧ್ಯ,” ಎಂದು ಸಿಎಂ ಅಭಿಪ್ರಾಯಪಟ್ಟರು. ಇನ್ನು ಅಧಿಕಾರಿಗಳ ಜೊತೆ ಮಾತನಾಡಲು ಹಳ್ಳಿಯ ಜನರು ಇಂದಿಗೂ ಹೆದರುತ್ತಾರೆ. ಈ ಭಯದಿಂದಾಗಿ ಅವರು ಮಧ್ಯವರ್ತಿಗಳನ್ನು (Agents) ಕರೆದುಕೊಂಡು ಬರುತ್ತಾರೆ. ಇದನ್ನು ತಪ್ಪಿಸಬೇಕು.

ಇದನ್ನೂ ಓದಿ: ಹೆಚ್ಚು ಮಾತನಾಡಬೇಡಿ, ಸುಮ್ಮನೆ ನಿಮ್ಮ ಕೆಲಸ ಮಾಡಿ: ಪಂಚಮಸಾಲಿ ಪೀಠದ ಲೆಕ್ಕ ಕೊಡುವ ವೇಳೆ ಉಮಾಪತಿಗೆ ಸೋಮಣ್ಣ ಕರೆ

“ಗ್ಯಾರಂಟಿ ಯೋಜನೆಗಳ ಹಣ ನೇರವಾಗಿ ಜನರ ಅಕೌಂಟ್‌ಗೆ ಹೋಗುತ್ತಿರುವುದು ಮಧ್ಯವರ್ತಿಗಳ ಹಾವಳಿ ತಪ್ಪಿಸಲಿಕ್ಕಾಗಿಯೇ. ನಿಮ್ಮ ಕಚೇರಿಗಳಲ್ಲಿ, ಅದರಲ್ಲೂ ಮುಖ್ಯವಾಗಿ ಆರ್‌.ಟಿ.ಒ (RTO) ಕಚೇರಿಗಳಲ್ಲಿ ಏಜೆಂಟ್‌ಗಳಿಗೆ ಅವಕಾಶ ನೀಡಬೇಡಿ,” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಐಎಎಸ್ ಮತ್ತು ಐಪಿಎಸ್ ವ್ಯವಸ್ಥೆಗಳ ಬಗ್ಗೆ ತಮ್ಮ ವೈಯಕ್ತಿಕ ಅಭಿಪ್ರಾಯ ಹಂಚಿಕೊಂಡ ಸಿಎಂ, ಸಮಾಜವಾದಿ ಚಿಂತಕರ ಮಾತುಗಳನ್ನು ಉಲ್ಲೇಖಿಸಿ ಆಡಳಿತದಲ್ಲಿ 33% ಸಿಇಒಗಳನ್ನು ಮಾಡುವ ಪ್ರಸ್ತಾಪದ ಬಗ್ಗೆ ಮಾತನಾಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!