Sign In

By signing in or creating an account, you agree with Associated Broadcasting Company's Terms & Conditions and Privacy Policy.

Indira Canteen: ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿನ ಯೋಜನೆಗೆ ಕಗ್ಗತ್ತಲು!

Indira Canteen: ಸಿಎಂ ಸಿದ್ದರಾಮಯ್ಯರ ಕನಸಿನ ಯೋಜನೆ ಇಂದಿರಾ ಕ್ಯಾಂಟೀನ್​ಗೆ ಮತ್ತೆ ಪುನರುಜ್ಜೀವ ನೀಡಲಾಗುತ್ತೆ ಎಂದು ಸ್ವತಃ ಅವರೇ ಹೇಳಿದ್ದರು. ಅದ್ರೇ ಸರ್ಕಾರ ಬಂದು ಮೂರು ತಿಂಗಳುಗಳು ಕಳೆದರೂ ಸರಿಯಾಗುವುದು ಇರಲಿ ಎಲ್ಲವೂ ಬೀಗ ಜಡಿಯುವ ಹಂತಕ್ಕೆ ಬಂದಿವೆ. ಅಷ್ಟಕ್ಕೂ ಬೆಂಗಳೂರಿನಲ್ಲಿ ಇರೋ ಇಂದಿರಾ ಕ್ಯಾಂಟೀನ್​ಗಳು ಎಷ್ಟು.. ಯಾವ್ಯವಾ ಏರಿಯಾದಲ್ಲಿ ಈ ಇಂದಿರಾ ಕ್ಯಾಂಟೀನ್​ ಬಾಗಿಲು ಬಂದ್ ಆಗಿದೆ ಎನ್ನುವ ವಿವರ ಇಲ್ಲಿದೆ.

Indira Canteen: ಸಿಎಂ ಸಿದ್ದರಾಮಯ್ಯ ಕನಸಿನ ಕೂಸಿನ ಯೋಜನೆಗೆ ಕಗ್ಗತ್ತಲು!
ಇಂದಿರಾ ಕ್ಯಾಂಟೀನ್
Follow us
Kiran Surya
| Updated By: ರಮೇಶ್ ಬಿ. ಜವಳಗೇರಾ

Updated on: Oct 20, 2023 | 7:11 AM

ಬೆಂಗಳೂರು, (ಅಕ್ಟೋಬರ್ 20): ಇಂದಿರಾ ಕ್ಯಾಂಟೀನ್ (Indira Canteen) ಹಸಿದವರ ಹೊಟ್ಟೆ ತುಂಬಿಸೋ, ಬಡವರು ಬಾಯಿ ಚಪ್ಪರಿಸಬಹುದಾದ ಊಟ-ಉಪಾಹಾರದ ಮಂದಿರ. 2016ರಲ್ಲಿ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಜಾರಿ ಮಾಡಿದ ಯೋಜನೆ ಹಾಗೂ ಕನಸಿನ ಕೂಸೇ ಇಂದಿರಾ ಕ್ಯಾಂಟೀನ್. ಆದ್ರೆ, ಈಗ ಸಿದ್ದರಾಮಯ್ಯನವರೇ ಸಿಎಂ ಆಗಿದ್ರು ಇಂದಿರಾ ಕ್ಯಾಂಟೀನ್​ಗಳ ದುರಸ್ತಿ ಕಾರ್ಯ ನಡೆಯುತ್ತಿಲ್ಲ.

ಇದುವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಇಂದಿರಾ ಕ್ಯಾಂಟೀನ್​ಗಳಿಗೆ ಈಗಾಗಲೇ ಬೀಗ ಬಿದ್ದಿದೆ. ಈ ಪೈಕಿ 17 ಮೊಬೈಲ್ ಇಂದಿರಾ ಕ್ಯಾಂಟೀನ್​ಗಳು ಮತ್ತು 6 ನಿಗದಿತ ಜಾಗದಲ್ಲಿ ನಿರ್ಮಿಸಲಾಗಿರುವ ಕ್ಯಾಂಟೀನ್​ಗಳ ಬಾಗಿಲು ಬಂದ್ ಆಗಿದೆ. ಬಡ‌ ಮಧ್ಯಮ ಕೆಲಸಗಾರರಿಗೆ ಅನುಕೂಲವಾಗಿದ್ದ ಇಂದಿರಾ ಕ್ಯಾಂಟೀನ್ ಮುಚ್ಚಿದ್ರಿಂದ ಜನಸಾಮಾನ್ಯರು ಅಸಮಾಧಾನ ಹೊರಹಾಕಿದ್ದಾರೆ. ಅಷ್ಟಕ್ಕೂ ಬೆಂಗಳೂರಿನಲ್ಲಿ ಇರುವ ಇಂದಿರಾ ಕ್ಯಾಂಟೀನ್​ಗಳು ಎಷ್ಟು? ಯಾವ್ಯಾವ ಏರಿಯಾಗಳಲ್ಲಿ ಈ ಇಂದಿರಾ ಕ್ಯಾಂಟೀನ್​ ಬಾಗಿಲು ಬಂದ್ ಆಗಿದೆ ಎನ್ನುವ ವಿವರ ಇಲ್ಲಿದೆ.

ಇದನ್ನೂ ಓದಿ: ಅಧಿಕಾರಿ, ಗುತ್ತಿಗೆದಾರ ನಡುವೆ ಜಟಾಪಟಿ: ಇಬ್ಬರ ಜಗಳದಲ್ಲಿ ಇಂದಿರಾ ಕ್ಯಾಂಟೀನ್ ಬಂದ್​

ಸಿದ್ದರಾಮಯ್ಯ ಕನಸಿನ ಇಂದಿರಾ ಕ್ಯಾಂಟೀನ್​ ಯೋಜನೆಗೆ ಗ್ರಹಣ

ಬೆಂಗಳೂರಿನಲ್ಲಿ ಒಟ್ಟು 198 ಇಂದಿರಾ ಕ್ಯಾಂಟೀನ್​ಗಳನ್ನ​ ನಿರ್ಮಾಣ ಮಾಡಲಾಗಿದೆ. BBMP ವ್ಯಾಪ್ತಿಯಲ್ಲಿ 24 ಮೊಬೈಲ್ ಇಂದಿರಾ ಕ್ಯಾಂಟೀನ್​ಗಳಿವೆ. ಅನುದಾನದ ಕೊರತೆ ಹಾಗೂ ಬಿಬಿಎಂಪಿಯಿಂದ ಕಳಪೆ ನಿರ್ವಹಣೆ ಮಾಡಿದ್ದು ಕ್ಯಾಂಟೀನ್​ಗಳಿಗೆ ಕುತ್ತು ಬಂದಿದೆ. ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿರೋದಾಗಿ ಆರೋಪ ಕೇಳಿ ಬಂದಿದೆ. ಮಾರತ್ತಹಳ್ಳಿ, ಪದ್ಮನಾಭನಗರ & ಕುಮಾರಸ್ವಾಮಿ ಲೇಔಟ್​​ನಲ್ಲಿ ಈಗಾಗಲೇ ಇಂದಿರಾ ಕ್ಯಾಂಟೀನ್​ ಬಾಗಿಲು ಕ್ಲೋಸ್ ಆಗಿದೆ. ಹನುಮಂತನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಕ್ಯಾಂಟೀನ್ ಬಾಗಿಲು ಬಂದ್ ಆಗಿದೆ. ಅಲ್ಲಲ್ಲಿ ಸ್ಥಾಪಿಸಲಾದ 17 ಮೊಬೈಲ್ ಕ್ಯಾಂಟೀನ್​ಗಳು ತುಕ್ಕು ಹಿಡೀತಾ ಇವೆ. 50ಕ್ಕೂ ಅಧಿಕ ಇಂದಿರಾ ಕ್ಯಾಂಟೀನ್​ಗಳಿಗೆ ದುರಸ್ತಿ ಕಾರ್ಯ ಬೇಕಿದೆ. ಹೀಗಾಗಿ ಸಿದ್ದರಾಮಯ್ಯ ಕನಸಿನ ಇಂದಿರಾ ಕ್ಯಾಂಟೀನ್​ ಯೋಜನೆಗೆ ಗ್ರಹಣ ಆವರಿಸಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದ್ರೂ ಇಂದಿರಾ ಕ್ಯಾಂಟೀನ್​ಗೆ ಹೈಟೆಕ್ ಸ್ಪರ್ಶ, ಮರು ಜೀವ ಸಿಗೋ ಸಿಗೋ ನಿರೀಕ್ಷೆ ಇತ್ತು. ಆದ್ರೆ, ಬಡವರ ಹಸಿವು ನೀಗಿಸ್ಬೇಕು ಎಂದು ಪಣ ತೊಟ್ಟು ಜಾರಿಗೆ ತಂದಿದ್ದ ಸಿಎಂ ಸಿದ್ದರಾಮಯ್ಯನವರ ಕನಸಿನ ಇಂದಿರಾ ಕ್ಯಾಂಟೀನ್​ ಯೋಜನೆಗೆ ಕಾಯಕಲ್ಪ ಬೇಕಿದೆ. ಅದ್ಯಾವಾಗ ಇಂದಿರಾ ಕ್ಯಾಂಟೀನ್​ಗಳಿಗೆ ಸರ್ಕಾರ ಮರುಜೀವ ನೀಡುತ್ತೆ ನೋಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು