AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರವೇಯಿಂದ ನಾಳೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ: ಅಧ್ಯಕ್ಷ ಟಿಎ ನಾರಾಯಣಗೌಡ

ಬೆಂಗಳೂರು ಬಂದ್​ಗೆ ದಿಢೀರ್ ಕರೆ ನೀಡಿರುವುದು ಸರಿಯಲ್ಲ. ಬಂದ್​ಗೆ ಸಂಬಂಧಿಸಿದ ಚಟುವಟಿಕೆಯಲ್ಲಿ ಕರ್ನಾಟಕ ರಕ್ಷಣೆ ವೇದಿಕೆ ಭಾಗಿಯಾಗಲ್ಲ. ನಾಳೆ ಬೆಳಗ್ಗೆ 10ಕ್ಕೆ ಸಿಎಂ ಸಿದ್ದರಾಮಯ್ಯ ಕಚೇರಿ, ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.

ಕರವೇಯಿಂದ ನಾಳೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ: ಅಧ್ಯಕ್ಷ ಟಿಎ ನಾರಾಯಣಗೌಡ
ಸಿಎಂ ಸಿದ್ದರಾಮಯ್ಯ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ
Follow us
Vinayak Hanamant Gurav
| Updated By: ಗಂಗಾಧರ​ ಬ. ಸಾಬೋಜಿ

Updated on:Sep 25, 2023 | 11:05 PM

ಬೆಂಗಳೂರು, ಸೆಪ್ಟೆಂಬರ್​​ 25: ಬೆಂಗಳೂರು ಬಂದ್​ಗೆ ದಿಢೀರ್ ಕರೆ ನೀಡಿರುವುದು ಸರಿಯಲ್ಲ. ಬಂದ್​ಗೆ ಸಂಬಂಧಿಸಿದ ಚಟುವಟಿಕೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಭಾಗಿಯಾಗಲ್ಲ. ನಾಳೆ ಬೆಳಗ್ಗೆ 10ಕ್ಕೆ ಸಿಎಂ ಸಿದ್ದರಾಮಯ್ಯ ಕಚೇರಿ, ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ (TA Narayana Gowda) ಹೇಳಿದ್ದಾರೆ. ಗಾಂಧಿನಗರದಲ್ಲಿರುವ ಕರ್ನಾಟಕ ರಕ್ಷಣೆ ವೇದಿಕೆ ಕಚೇರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕರೆ ನೀಡಿರುವ ಬೆಂಗಳೂರು ಬಂದ್​ಗೆ ಕರವೇ ಬೆಂಬಲವಿಲ್ಲ. ಆದರೆ ನಾಳೆ ಪ್ರತ್ಯೇಕ ಪ್ರತಿಭಟನಾ ಮೆರವಣಿಗೆ ಮಾಡಲಾಗುವುದು ಎಂದು ಹೇಳಿದ್ದಾರೆ.

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವ ತನಕ ಹೋರಾಟ ಮುಂದುವರಿಯುತ್ತೆ. ಸೆ.29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೂ ನಮ್ಮ ಬೆಂಬಲವಿಲ್ಲ. ನಾವು ಪ್ರತಿಭಟನೆ ಮಾಡುತ್ತೇವೆಯೇ ಹೊರತು ಬಂದ್​ನಲ್ಲಿ ಭಾಗವಹಿಸಲ್ಲ. ಯಾವುದೇ ಹೋರಾಟಗಾರರ ಬಗ್ಗೆ ನಾನು ಲಘುವಾಗಿ ಮಾತನಾಡಲ್ಲ ಎಂದರು.

ಇದನ್ನೂ ಓದಿ: ಜನತಾ ದರ್ಶನ: ದೂರು ಕೊಟ್ಟವರಿಂದಲೇ ಲಂಚ ಕೇಳುತ್ತಾರೆ: ಶಾಸಕ ವಿಠಲ ಕಟಕದೊಂಡ ಅಸಮಾಧಾನ

ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ದಿನೇ ದಿನೆ ಹೆಚ್ಚಾಗುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರೋದಕ್ಕೆ ಆಕ್ರೊಶ ಹೊರ ಹಾಕುತ್ತಿರೋ ರೈತರು, ಕನ್ನಡಪರ ಸಂಘಟನೆಗಳು ಹಾಗೂ ಜನರು ದಿನೇ ದಿನೆ ತಮ್ಮ ಹೋರಾಟ ತೀವೃಗೊಳಿಸುತ್ತಿದ್ದಾರೆ. ಇತ್ತ ಕಾವೇರಿಕೊಳ್ಳದ ಪ್ರಮುಖ ಜಲಾಶಯ ಹೊಂದಿರುವ ಹಾಸನದಲ್ಲಿ ಕೂಡ ಹೋರಾಟ ತೀವೃಗೊಂಡಿತ್ತು. ಇಂದು ಜಲಾಶಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಜೆಡಿಎಸ್ ನಾಯಕರು ಶಾಸಕರು, ಮಾಜಿ ಶಾಸಕರ ನೇತೃತ್ವದ ನೂರಾರು ಜನರು ಕೇಂದ್ರ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಗೊರೂರಿನ ಹೇಮಾವತಿ ಜಲಾಶಯದ ಎದುರಿನ ಹಾಸನ ಅರಕಲಗೂಡು ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಬಳಿಕ ಜಲಾಶಯಕ್ಕೆ ಮುತ್ತಿಗೆ ಹಾಕಲು ಮುಂದಾದ್ದರು. ಆದರೆ ಪ್ರತಿಭಟನೆ ಹಿನ್ನೆಲೆಯಲ್ಲಿ ನೂರಾರು ಪೊಲೀಸರನ್ನ ನಿಯೋಜನೆ ಮಾಡಿದ್ದ ಜಿಲ್ಲಾಡಳಿತ ಪ್ರತಿಭಟನಾಕಾರರನ್ನು ನಿಯಂತ್ರಣ ಮಾಡಿದ್ದಾರೆ.

ಜಿಲ್ಲೆಯಲ್ಲಿ ತೀವೃ ಮಳೆ ಕೊರತೆ ಇದೆ, ಮಳೆಯಿಲ್ಲದೆ ರೈತರ ಬೆಳೆಗಳು ಒಣಗುತ್ತಿದ್ದರೂ ಸರ್ಕಾರ ಅದ್ಯಾಕೋ ನಮ್ಮ ರೈಥರ ಹಿತ ಮರೆತಿದೆ ಹಾಗಾಗಿಯೇ ಈ ಹೋರಾಟ ಹಮ್ಮಿಕೊಂಡಿದ್ದು ಹೇಮಾವತಿ ನೀರನ್ನ ತಮಿಳು ನಾಡಿಗೆ ಹರಿಸಿದ್ರೆ ಹೋರಾಟ ತೀವೃಗೊಳಿಸೋ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:01 pm, Mon, 25 September 23

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ