AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗ್ನಲಿಂಗ್ ವ್ಯವಸ್ಥೆ ಪರೀಕ್ಷೆ: ಆ 17, 20, 23, 24 ಮತ್ತು 29ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ

Namma Metro Purple Line Timings Change: ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆಯನ್ನು ನಡೆಸುವ ಸಲುವಾಗಿ ಆಗಸ್ಟ್​ 17, 20, 23, 24 ಮತ್ತು 29ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಸಿಗ್ನಲಿಂಗ್ ವ್ಯವಸ್ಥೆ ಪರೀಕ್ಷೆ: ಆ 17, 20, 23, 24 ಮತ್ತು 29ರಂದು ನೇರಳೆ ಮಾರ್ಗದ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
| Updated By: Ganapathi Sharma|

Updated on:Aug 14, 2023 | 10:24 PM

Share

ಬೆಂಗಳೂರು, ಆಗಸ್ಟ್​ 14: ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆಯನ್ನು ನಡೆಸುವ ಸಲುವಾಗಿ ಆಗಸ್ಟ್​ 17, 20, 23, 24 ಮತ್ತು 29ರಂದು ನೇರಳೆ ಮಾರ್ಗದ ಮೆಟ್ರೋ (Namma Metro) ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಆಗಸ್ಟ್ ತಿಂಗಳಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಯ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ನೇರಳೆ ಮಾರ್ಗದ ಕೆಂಗೇರಿ, ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆಯನ್ನು ನಡೆಸುವ ಸಲುವಾಗಿ ಮೆಟ್ರೋ ವಾಣಿಜ್ಯ ಸೇವೆಯ ಸಮಯದಲ್ಲಿ ಮಾರ್ಪಾಡು ಮಾಡಿದೆ.

ನೇರಳೆ ಮಾರ್ಗದ ಕಾರ್ಯಾಚರಣೆಯ ಸಮಯದಲ್ಲಿ ವ್ಯತ್ಯಯದ ವಿವರ

  • ಆಗಸ್ಟ್​ 17, (ಗುರುವಾರ): ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಸದರಿ ದಿನದಂದು ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ, ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳಿಗ್ಗೆ 5.00 ರಿಂದ ರಾತ್ರಿ 11 ರವರೆಗೆ ರೈಲು ಸೇವೆಗಳು ಲಭ್ಯವಿರುತ್ತದೆ
  • ಆಗಸ್ಟ್​ 23, 24 (ಬುಧವಾರ ಮತ್ತು ಗುರುವಾರ): ಕೆಂಗೇರಿ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ, 7 ಗಂಟೆಯವರೆಗೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿ ಮೈಸೂರು ರಸ್ತೆ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ‌ಸೇವೆ ಲಭ್ಯವಿರುತ್ತದೆ. ಬೆಳಗ್ಗೆ 7.00 ಗಂಟೆಯ ನಂತರ ಕೆಂಗೇರಿಯಿಂದ ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಎಂದಿನಂತೆ ಸೇವೆ ಲಭ್ಯವಿರುತ್ತದೆ. ಬೆಳಿಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಮೈಸೂರು ರಸ್ತೆ ನಿಲ್ದಾಣದಲ್ಲಿ ರೈಲುಗಳ ಸೇವೆ ಕೊನೆಗೊಳ್ಳುತ್ತದೆ. ಇತರೆ ದಿನಗಳಲ್ಲಿ ರೈಲುಗಳು ಕೆಂಗೇರಿ ನಿಲ್ದಾಣದ ವರೆಗೆ ರೈಲು ಸೇವೆ ಲಭ್ಯವಿರುತ್ತದೆ. ಬೆಳಿಗ್ಗೆ 7 ಗಂಟೆಯ ನಂತರ ಬೈಯಪ್ಪನಹಳ್ಳಿಯಿಂದ ಕಂಗೇರಿ ನಿಲ್ದಾಣದ ಮಾರ್ಗಗಳ ನಡುವೆ ಎಂದಿನಂತೆ ಸೇವೆಗಳು ಲಭ್ಯವಿರುತ್ತದೆ.
  • ಆಗಸ್ಟ್​ 20, 29 (ಭಾನುವಾರ ದಿಂದ ಮಂಗಳವಾರ): ಬೈಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ ಫೀಲ್ಡ್ (ಕಾಡುಗೋಡಿ) ಮಾರ್ಗಗಳ ನಡುವೆ ಬೆಳಿಗ್ಗೆ 7 ಗಂಟೆಯವರೆಗೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ.

ಇದನ್ನೂ ಓದಿ: Video: ವಿಧಾನಸೌಧಕ್ಕೆ ವಿಶೇಷ ದೀಪಾಲಂಕಾರ: ಕೇಸರಿ, ಬಿಳಿ, ಹಸಿರು ಬಣ್ಣದಲ್ಲಿ ಅರಳಿದ ತ್ರಿವರ್ಣ ಧ್ವಜ

ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಿ ಹಾಗೂ ಸಹಕರಿಸುವಂತೆ ಕೋರಲಾಗಿದ್ದು, ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ವಿಷಾದಿಸಿದೆ.

ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್: ಲಾಲ್​ಬಾಗ್​​ ಮೆಟ್ರೋ ನಿಲ್ದಾಣದಿಂದ ಎಲ್ಲಿಗೆ ಹೋದ್ರೂ 30 ರೂ. ಚಾರ್ಜ್

ನಾಳೆ ಫ್ಲವರ್ ಶೋ ನೋಡಲು ತೆರಳುವವರಿಗೆ ಮೆಟ್ರೋದಿಂದ ಗುಡ್​ನ್ಯೂಸ್ ನೀಡಿದ್ದು, ಲಾಲ್​ಬಾಗ್​​ ಮೆಟ್ರೋ ನಿಲ್ದಾಣದಿಂದ ಎಲ್ಲಿಗೆ ಹೋದರೂ 30 ರೂ. ಚಾರ್ಜ್ ಮಾಡಲಾಗುತ್ತಿದೆ. ನಾಳೆ ಫ್ಲವರ್ ಶೋ ವೀಕ್ಷಿಸಲು ಬರುವವರಿಗೆ ಪೇಪರ್ ಟಿಕೆಟ್ ವಿತರಣೆ ಮಾಡಲಾಗುತ್ತಿದ್ದು, ಎಲ್ಲಿಗೆ ಪ್ರಯಾಣಿಸಿದರೂ 30 ರೂ. ಅನ್ನು ಬಿಎಂಆರ್​ಸಿಎಲ್​ ನಿಗದಿ ಮಾಡಿದೆ. ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಪೇಪರ್​ ಟಿಕೆಟ್​​ ಖರೀದಿಸಲು ಅವಕಾಶವಿದ್ದು, ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಪೇಪರ್​ ಟಿಕೆಟ್​ ನೀಡಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ರಾತ್ರಿ 8ರವರೆಗೆ ಮಾತ್ರ ಪ್ರಯಾಣಿಸಲು ಅವಕಾಶವಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:16 pm, Mon, 14 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ