ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿ: ಬೆಂಗಳೂರಿನ ಜನರ ಸಹಾಯಕ್ಕೆ ಬಂತು ತುರ್ತು ಸಹಾಯವಾಣಿ

ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿಯತ್ತ ಬದಲಾವಣೆಗೊಳ್ಳುತ್ತಿದ್ದು, ಬೆಂಗಳೂರಿನ ಜನರ ಸಹಾಯಕ್ಕೆ ಎಮರ್ಜೆನ್ಸಿ ಸೇವೆಯನ್ನು ಜಾರಿ ತರಲಾಗುತ್ತಿದೆ. ಸಿಲಿಕಾನ್​ ಸಿಟಿಯಲ್ಲಿ ತುರ್ತು ಸಹಾಯವಾಣಿ ಸೇವೆ ಆರಂಭವಾಗಿವೆ. ನಗರ ವಾಸಿಗಳ ರಕ್ಷಣೆಗೆ ಸಿಲಿಕಾನ್ ಸಿಟಿ ಪೊಲೀಸರು ನೂತನ ಪ್ಲಾನ್​ ಮಾಡಿದ್ದಾರೆ.

ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿ: ಬೆಂಗಳೂರಿನ ಜನರ ಸಹಾಯಕ್ಕೆ ಬಂತು ತುರ್ತು ಸಹಾಯವಾಣಿ
ತುರ್ತು ಸಹಾಯವಾಣಿ
Follow us
|

Updated on: Jun 19, 2023 | 3:41 PM

ಬೆಂಗಳೂರು: ಸಿಲಿಕಾನ್ ಸಿಟಿ ಈಗ ಸೇಫ್ ಸಿಟಿಯತ್ತ ಬದಲಾವಣೆಗೊಳ್ಳುತ್ತಿದ್ದು, ಬೆಂಗಳೂರಿನ ಜನರ ಸಹಾಯಕ್ಕೆ ಎಮರ್ಜೆನ್ಸಿ ಸೇವೆಯನ್ನು ಜಾರಿ ತರಲಾಗುತ್ತಿದೆ. ಸಿಲಿಕಾನ್​ ಸಿಟಿಯಲ್ಲಿ ತುರ್ತು ಸಹಾಯವಾಣಿ ಸೇವೆ (emergency helpline) ಆರಂಭವಾಗಿವೆ. ಹಾಗಾಗಿ ನಗರ ವಾಸಿಗಳ ರಕ್ಷಣೆಗೆ ಸಿಲಿಕಾನ್ ಸಿಟಿ ಪೊಲೀಸರು ನೂತನ ಪ್ಲಾನ್​ ಮಾಡಿದ್ದಾರೆ. ನಗರದಲ್ಲಿ ಪೊಲೀಸರಿಂದ ತುರ್ತು ಸಹಾಯ ನಿರ್ಮಾಣ ಮಾಡಿದ್ದು, ತುರ್ತು ಸಹಾಯವಾಣಿ ಉಪಯೋಗದಿಂದ ಮಹಿಳೆಯರು ನಿಂತ ಸ್ಥಳದಿಂದಲೇ ಪೊಲೀಸರಿಗೆ ಮಾಹಿತಿ ನೀಡಬಹುದಾಗಿದೆ.

ಒಂದು ಬಟನ್ ಪ್ರೆಸ್ ಮಾಡಿದರೆ ಸಾಕು ನಿಮ್ಮ ಸುತ್ತಮುತ್ತ ವಿಡಿಯೋ ಸಮೇತ ರೆಕಾರ್ಡ್ ಆಗತ್ತೆ. ನೇರವಾಗಿ ಕಮಾಂಡ್ ಸೆಂಟರ್​ಗೆ ಕರೆ ಹೋಗುವ ಮೂಲಕ ಮಾಹಿತಿ ಕಲೆ ಹಾಕಲಾಗುತ್ತದೆ. ನಂತರ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗುತ್ತದೆ.

ಇದನ್ನೂ ಓದಿ: Vande Bharat Express: ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲು ಪ್ರಯೋಗಾರ್ಥ ಸಂಚಾರ ಯಶಸ್ವಿ

7 ನಿಮಿಷಕ್ಕೆ ಹೋಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಾರೆ. ಬೆಂಗಳೂರಿನಾದ್ಯಂತ 30 ಕಡೆ ಈ ತುರ್ತು ಸಹಾಯವಾಣಿ ಇನ್ಸ್ಟಾಲೇಷನ್​ ಮಾಡಲಾಗಿದ್ದು, ಮೊಬೈಲ್ ಬಳಕೆ ಇಲ್ಲದವರಿಗೆ ಇದು ಉಪಯೋಗವಾಗಲಿದೆ.

ತುರ್ತು ಸಹಾಯವಾಣಿ ಬಾಕ್ಸ್‌ಗಳನ್ನು ದುರ್ಬಲ ಪ್ರದೇಶಗಳಲ್ಲಿ ಅಳವಡಿಸಲಾಗುತ್ತಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ ಅಶೋಕನಗರ, ಜನನಭಾರತಿ ಕ್ಯಾಂಪಸ್, ಐಒಸಿ ವೃತ್ತ, ರಸೆಲ್ ಮಾರುಕಟ್ಟೆ, ಮಾರೇನಹಳ್ಳಿ ಸೇರಿದಂತೆ ಇತರೆಡೆ ತುರ್ತು ಸಹಾಯವಾಣಿ ಬಾಕ್ಸ್‌ಗಳನ್ನು ಅಳವಡಿಸಲಾಗಿದೆ.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿ ಯೋಜನೆ ನೋಂದಣಿ, ಮೊದಲ ದಿನ 55 ಸಾವಿರ ಅರ್ಜಿ

7,500 ಸಿಸಿಟಿವಿ ಸ್ಥಾಪಿಸುವ ಗುರಿ

ಈ ಯೋಜನೆಯ ಭಾಗವಾಗಿ, 7,500 ಸಿಸಿಟಿವಿಗಳನ್ನು ಸ್ಥಾಪಿಸುವ ಗುರಿ ಕೂಡ ಇದೆ. ಅದರಲ್ಲಿ ಸುಮಾರು 4,000 ಈಗಾಗಲೇ ಅಳವಡಿಸಲಾಗಿದೆ. ಇದಲ್ಲದೆ, ಪೊಲೀಸ್ ಇಲಾಖೆಯು ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ವ್ಯವಸ್ಥೆ, ಮುಖ ಗುರುತಿಸುವ ವ್ಯವಸ್ಥೆ, ಅಪರಾಧ ವಿಶ್ಲೇಷಣೆ ವ್ಯವಸ್ಥೆ, ಮೊಬೈಲ್ ಕಮಾಂಡ್ ಸೆಂಟರ್ ಮತ್ತು ಆಪರೇಟಿಂಗ್ ಡ್ರೋನ್‌ಗಳನ್ನು ಹಂತ ಹಂತವಾಗಿ ಹೊರತರಲಿದೆ.

ಹನಿವೆಲ್ ಆಟೋಮೇಷನ್ ಇಂಡಿಯಾ ಲಿಮಿಟೆಡ್ 2021 ರಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಬೆಂಗಳೂರನ್ನು ಮಹಿಳೆಯರಿಗೆ ಸುರಕ್ಷಿತ ನಗರವನ್ನಾಗಿ ಮಾಡಲು 496.67 ಕೋಟಿ ರೂ. ಪೊಲೀಸ್ ಯೋಜನೆಯನ್ನು ಅನುಷ್ಠಾನಗೊಳಿಸುವ ಗುತ್ತಿಗೆಯನ್ನು ಪಡೆದುಕೊಂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ