AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ; 9 ಅಧಿಕಾರಿಗಳ ವಿರುದ್ಧ ದೂರು ದಾಖಲು

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು 102 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ; 9 ಅಧಿಕಾರಿಗಳ ವಿರುದ್ಧ ದೂರು ದಾಖಲು
ಬಿಬಿಎಂಪಿ
ಶಾಂತಮೂರ್ತಿ
ಶಾಂತಮೂರ್ತಿ | Edited By: ಆಯೇಷಾ ಬಾನು|

Updated on: Jun 29, 2024 | 1:34 PM

Share

ಬೆಂಗಳೂರು, ಜೂನ್.29: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ನಡೆದಿರುವುದು (BBMP Multi Crore Scam) ಪತ್ತೆಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕಿಂತ ಬಾರಿ ದೊಡ್ಡ ಹಗರಣ ಬಿಬಿಎಂಪಿಯಲ್ಲಿ (BBMP) ನಡೆದಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿ, ಸಹಕಾರಿ ಸಂಘ, ಕೋ ಆಪರೇಟಿವ್ ಸೊಸೈಟಿಗಳಿಗೆ ಕೊರೊನಾ ಸಮಯದಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಸದ್ಯ ಅಕ್ರಮ ಹಣ ವರ್ಗಾವಣೆ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದೆ.

ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ಈ ಬಹುಕೋಟಿ ಹಗರಣ ನಡೆದಿದೆ. ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಲಾಗಿದ್ದು ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಅಂತ ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಸುಮಾರು 102 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಅಕ್ರಮ ಹಣ ದುರ್ಬಳಕೆ ಮಾಡಿರೋದು ಬಯಲಾಗಿದೆ.

ಸುಬೇಶ್, ಎಸ್.ಎಸ್. ದೇವಕಿ, ಬಿ.ಗಾಯತ್ರಿ, ಜಿ.ಎನ್. ಸುಬ್ಬರಾಮಯ್ಯ, ಎಸ್.ವಿ.ಗಿರಿಯಪ್ಪ, ಎನ್.ಗೀತಾ, ಕುಮಾರಿ ಕುಸುಮಾ, ಲಿಂಗಣ್ಣ ಗುಂಡಳ್ಳಿ, ಸತ್ಯಮೂರ್ತಿ. ಇವರು ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಧಿಕಾರಿಗಳು.

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!