AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ; 9 ಅಧಿಕಾರಿಗಳ ವಿರುದ್ಧ ದೂರು ದಾಖಲು

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು 102 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ; 9 ಅಧಿಕಾರಿಗಳ ವಿರುದ್ಧ ದೂರು ದಾಖಲು
ಬಿಬಿಎಂಪಿ
ಶಾಂತಮೂರ್ತಿ
| Updated By: ಆಯೇಷಾ ಬಾನು|

Updated on: Jun 29, 2024 | 1:34 PM

Share

ಬೆಂಗಳೂರು, ಜೂನ್.29: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Development Corporation) ರೀತಿಯೇ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ನಡೆದಿರುವುದು (BBMP Multi Crore Scam) ಪತ್ತೆಯಾಗಿದೆ. ವಾಲ್ಮೀಕಿ ನಿಗಮದ ಹಗರಣಕ್ಕಿಂತ ಬಾರಿ ದೊಡ್ಡ ಹಗರಣ ಬಿಬಿಎಂಪಿಯಲ್ಲಿ (BBMP) ನಡೆದಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿಗಳಿಗೆ ಬಿಬಿಎಂಪಿಯ ಕಲ್ಯಾಣ ಇಲಾಖೆಯಿಂದ ಅಕ್ರಮ ಹಣ ವರ್ಗಾವಣೆ ಆಗಿದೆ. ಅಸ್ತಿತ್ವದಲ್ಲೇ ಇಲ್ಲದ ಸೊಸೈಟಿ, ಸಹಕಾರಿ ಸಂಘ, ಕೋ ಆಪರೇಟಿವ್ ಸೊಸೈಟಿಗಳಿಗೆ ಕೊರೊನಾ ಸಮಯದಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಸದ್ಯ ಅಕ್ರಮ ಹಣ ವರ್ಗಾವಣೆ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದೆ.

ಬಿಬಿಎಂಪಿಯ ಪಶ್ಚಿಮ ವಲಯದಲ್ಲಿ ಈ ಬಹುಕೋಟಿ ಹಗರಣ ನಡೆದಿದೆ. ಒಟ್ಟು 9 ಹಣಕಾಸು ವಿಭಾಗದ ಅಧಿಕಾರಿಗಳ ಮೇಲೆ ದೂರು ದಾಖಲಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಅಕ್ರಮ ನಡೆಸಿದ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೇಳಲಾಗಿದ್ದು ಈ ಬಗ್ಗೆ ಲೋಕಾಯುಕ್ತ ತನಿಖೆಗೆ ಪೂರ್ವಾನುಮತಿ ನೀಡಬೇಕು ಅಂತ ಪಾಲಿಕೆಯ ವಿಶೇಷ ಆಯುಕ್ತರಿಗೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಸುಮಾರು 102 ಕೋಟಿ ರೂ. ಹಣ ವರ್ಗಾವಣೆ ಆಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಅಕ್ರಮದಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಅಂಗವಿಕಲರು, ವಿಧವೆಯರ ಹೆಸರುಗಳಲ್ಲಿ ಅಕ್ರಮ ಹಣ ದುರ್ಬಳಕೆ ಮಾಡಿರೋದು ಬಯಲಾಗಿದೆ.

ಸುಬೇಶ್, ಎಸ್.ಎಸ್. ದೇವಕಿ, ಬಿ.ಗಾಯತ್ರಿ, ಜಿ.ಎನ್. ಸುಬ್ಬರಾಮಯ್ಯ, ಎಸ್.ವಿ.ಗಿರಿಯಪ್ಪ, ಎನ್.ಗೀತಾ, ಕುಮಾರಿ ಕುಸುಮಾ, ಲಿಂಗಣ್ಣ ಗುಂಡಳ್ಳಿ, ಸತ್ಯಮೂರ್ತಿ. ಇವರು ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅಧಿಕಾರಿಗಳು.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!