AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್​ ಮುಖ್ಯ ಅಲ್ಲ; ಶಿಕ್ಷಣ ಎಲ್ಲದನ್ನ ಮೀರಿದೆ -ಗಾಯಕಿ ಸುಹಾನಾ ಸೈಯದ್

ಗಾಯಕಿ ಸುಹಾನಾ ಸೈಯದ್, ಸಿಂಗಿಂಗ್ ರಿಯಾಲಿಟಿ ಶೋ ನಲ್ಲಿ ಹಿಜಾಬ್ ಧರಿಸಿ ಶ್ರೀಕಾರನೇ ಶ್ರೀನಿವಾಸನೇ ಎಂಬ ಗೀತೆ ಹಾಡಿದ್ದರು. ಇದೇ ಕಾರಣಕ್ಕೆ ಸುಹಾನಾ ವಿರುದ್ಧ ಮುಸ್ಲಿಂ ಮೂಲಭೂತವಾದಿಗಳು ತಿರುಗಿಬಿದ್ದಿದ್ದರು. ಸದ್ಯದ ಹಿಜಾಬ್ ವಿವಾದದ ಬಗ್ಗೆ ಸುಹಾನಾ ಪ್ರತಿಕ್ರಿಯಿಸಿದ್ದಾರೆ.

ಹಿಜಾಬ್​ ಮುಖ್ಯ ಅಲ್ಲ; ಶಿಕ್ಷಣ ಎಲ್ಲದನ್ನ ಮೀರಿದೆ -ಗಾಯಕಿ ಸುಹಾನಾ ಸೈಯದ್
ಗಾಯಕಿ ಸುಹಾನಾ ಸೈಯದ್
TV9 Web
| Edited By: |

Updated on:Feb 09, 2022 | 2:34 PM

Share

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಘರ್ಷ ನಡೆಯುತ್ತಿದೆ. ಹಿಜಾಬ್(Hijab) ಧರಿಸುವವರ ವಿರುದ್ಧ ಕೇಸರಿ ಶಾಲ್(Kesari Shwal) ಧರಿಸಿ ಯುವಕ-ಯುವತಿಯರು ರಸ್ತೆಗಿಳಿದಿದ್ದಾರೆ. ಜ್ಞಾನ ದೇಗುಲದಲ್ಲಿ ಧರ್ಮ, ಜಾತಿಗಳ ನಡುವೆ ಸಂಘರ್ಷವಾಗುತ್ತಿದೆ. ಫೆಬ್ರವರಿ 08ರಂದು ರಾಜ್ಯದ 19 ಜಿಲ್ಲೆಗಳ 55 ಕಾಲೇಜುಗಳಲ್ಲಿ ಪ್ರತಿಭಟನೆ ನಡೆದಿದೆ. 5 ಜಿಲ್ಲೆಗಳ 7 ಕಾಲೇಜುಗಳಲ್ಲಿ ಘರ್ಷಣೆಯಾಗಿದೆ. ಸದ್ಯ ಹಿಜಾಬ್ ವಿವಾದದ ಬಗ್ಗೆ‌ ಗಾಯಕಿ ಸುಹಾನಾ ಸೈಯದ್(Suhana Syed) ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಹಿಂದೇ ಗಾಯಕಿ ಸುಹಾನಾ ಕೂಡ ಇದೇ ರೀತಿ ವಿವಾದಕ್ಕೆ ಗುರಿಯಾಗಿದ್ದರು. ಸಿಂಗಿಂಗ್ ರಿಯಾಲಿಟಿ ಶೋ ನಲ್ಲಿ ಹಿಂದೂ ದೇವರನಾಮ ಹಾಡಿದ್ದ ಸುಹಾನಾ ವಿವಾದಕ್ಕೆ ಒಳಗಾಗಿದ್ದರು.

ಗಾಯಕಿ ಸುಹಾನಾ ಸೈಯದ್, ಸಿಂಗಿಂಗ್ ರಿಯಾಲಿಟಿ ಶೋ ನಲ್ಲಿ ಹಿಜಾಬ್ ಧರಿಸಿ ಶ್ರೀಕಾರನೇ ಶ್ರೀನಿವಾಸನೇ ಎಂಬ ಗೀತೆ ಹಾಡಿದ್ದರು. ಇದೇ ಕಾರಣಕ್ಕೆ ಸುಹಾನಾ ವಿರುದ್ಧ ಮುಸ್ಲಿಂ ಮೂಲಭೂತವಾದಿಗಳು ತಿರುಗಿಬಿದ್ದಿದ್ದರು. ಸದ್ಯದ ಹಿಜಾಬ್ ವಿವಾದದ ಬಗ್ಗೆ ಸುಹಾನಾ ಪ್ರತಿಕ್ರಿಯಿಸಿದ್ದಾರೆ. ನಾನು ಮುಸ್ಲಿಂ ಕುಟುಂಬಕ್ಕೆ ಸೇರಿದವಳು. ಆದರೆ ನಾನು ಹಿಜಾಬ್ ಹಾಕುವುದಿಲ್ಲ. ಹಾಗಂತ ನಾನು ಹಿಜಾಬ್ ವಿರೋಧಿ ಖಂಡಿತ ಅಲ್ಲ. ನಾನು ಹಿಜಾಬ್ ಹಾಕುವುದಿಲ್ಲ ಎಂದು ವಿರೋಧಿಸಿದವರೂ ಇದ್ದಾರೆ. ಬಟ್ಟೆ ಹಾಕೋದು ಅವರವರ ಸ್ವಾತಂತ್ರ್ಯ. ಆದರೆ ಶಿಕ್ಷಣ ಎಲ್ಲದನ್ನೂ ಮೀರಿ ನಿಂತಿದೆ. ಹೆಣ್ಣು ಮಕ್ಕಳ ಶಿಕ್ಷಣ ಅತ್ಯಂತ ಮಹತ್ವದ್ದಾಗಿದೆ. ಧರ್ಮ, ಜಾತಿ, ಲಿಂಗ, ಬಟ್ಟೆ ಎಲ್ಲದನ್ನೂ ಮೀರಿರೋದು ಶಿಕ್ಷಣ. ಹಿಂದೆ ಹೆಣ್ಣು ಮಕ್ಕಳು ಮನೆಯಿಂದ ಹೊರ ಬಂದು ಓದಲು ಕಷ್ಟಪಡುತ್ತಿದ್ದರು. ಆದರೀಗ ಕಾಲ ಬದಲಾಗಿದೆ. ಪ್ರತಿ ಹೆಣ್ಣು ಮಗುವಿಗೆ ಶಿಕ್ಷಣ ಸಿಕ್ತಿದೆ. ಇದಕ್ಕಿಂತ ಖುಷಿ ವಿಚಾರ ಇನ್ನೊಂದಿಲ್ಲ. ಶಿಕ್ಷಣ ಪಡೆಯುವ ಪ್ರತಿ ಹೆಣ್ಣಿನ ಪರ ನನ್ನ ಬೆಂಬಲವಿದೆ. ಕೇವಲ ಬಟ್ಟೆ ವಿಚಾರಕ್ಕೆ ಶಿಕ್ಷಣ ವಂಚಿತರಾಗೋದು ತಪ್ಪು ಎಂದು ಸುಹಾನಾ ಸೈಯದ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Hijab Row Hearing Live: ಹಿಜಾಬ್ v/s ಕೇಸರಿ ಸಂಘರ್ಷ! ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಚರ್ಚೆ

Published On - 10:23 am, Wed, 9 February 22

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ