AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಆರೋಪ; ಸಿಎಂ ವಿರುದ್ದ ಆರ್​ ಅಶೋಕ ಕಿಡಿ

‘ಕೇಸರಿ, ಕುಂಕುಮ ಕಂಡರೆ ದ್ವೇಷ ಕಾರುವ ಸಿಎಂ ಸಿದ್ದರಾಮಯ್ಯ ಅವರು, ಈಗ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಏಕವಚನ ಪ್ರಯೋಗ ಮಾಡಿ ನಿಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಧೋರಣೆ ಪ್ರದರ್ಶನ ಮಾಡಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಆರ್​ ಅಶೋಕ(R Ashok) ಕಿಡಿಕಾರಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Jun 29, 2024 | 3:39 PM

Share

ಬೆಂಗಳೂರು, ಜೂ.29: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಬೇಕು ಎಂದು ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದರು. ಈ ಕುರಿತು ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅವರು ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಆರ್​ ಅಶೋಕ(R Ashoka) ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ವಿರುದ್ದ ಆರ್​.ಅಶೋಕ ವಾಗ್ದಾಳಿ

‘ಕೇಸರಿ, ಕುಂಕುಮ ಕಂಡರೆ ದ್ವೇಷ ಕಾರುವ ಸಿಎಂ ಸಿದ್ದರಾಮಯ್ಯ ಅವರು, ಈಗ ಒಕ್ಕಲಿಗ ಸ್ವಾಮೀಜಿಗಳ ವಿರುದ್ಧ ಏಕವಚನ ಪ್ರಯೋಗ ಮಾಡಿ ನಿಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಹಿಂದೂ ವಿರೋಧಿ ಧೋರಣೆ ಪ್ರದರ್ಶನ ಮಾಡಿದ್ದಾರೆ. ಸ್ವಾಮಿ ಸಿದ್ದರಾಮಯ್ಯನವರೇ, ನಿಮ್ಮ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ನಡುವೆ ವೈಮನಸ್ಸು ಇದ್ದರೆ, ಅದನ್ನ ಪಕ್ಷದ ವೇದಿಕೆಯಲ್ಲಿ ನಾಲ್ಕು ಗೋಡೆಗಳ ಮಧ್ಯೆ ಪರಿಹರಿಸಿಕೊಳ್ಳಿ.

ಇದನ್ನೂ ಓದಿ:ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ನಾನು ಹೇಳಿದ್ದು, ಸಮುದಾಯದ ಪ್ರಸ್ತಾಪ ಮಾಡಿಲ್ಲ: ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ

ಅದು ಬಿಟ್ಟು, ಸ್ವಾಮೀಜಿಗಳು ವ್ಯಕ್ತಪಡಿಸಿದ ಅಭಿಪ್ರಾಯದ ಬಗ್ಗೆ ಈ ರೀತಿ ಅಗೌರವದಿಂದ ಮಾತನಾಡುವುದು ನಿಮಗೆ ಶೋಭೆ ತರುವುದಿಲ್ಲ. ಒಕ್ಕಲಿಗ ಸಮುದಾಯ ಇದನ್ನ ತೀವ್ರವಾಗಿ ಖಂಡನೆ ಮಾಡುತ್ತದೆ ಎಂದು ಆರ್​ ಅಶೋಕ ಎಕ್ಸ್​ ಖಾತೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಆಗಿದ್ದೇನು?

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಬೇಕು ಎಂದು ಹೇಳಿದ್ದೇನೆ. ಆದರೆ, ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡಲು ಗಡುವು ನೀಡಲು ನಾನು ಯಾರೂ ಅಲ್ಲ, ಚುನಾವಣೆಯಲ್ಲಿ ಶಿವಕುಮಾರ್ ಸಹ ಕಷ್ಟಪಟ್ಟಿದ್ದಾರೆ ಎಂಬ ಅಂಶವನ್ನು ಅವರು ಮನವರಿಕೆ ಮಾಡಿಕೊಂಡು ಅವರಾಗೇ ಸ್ಥಾನ ಬಿಟ್ಟುಕೊಟ್ಟರೆ ಚೆನ್ನಾಗಿರುತ್ತದೆ ಎಂದು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದ್ದರು. ಈ ಕುರಿತು ಸಿಎಂ ನವದೆಹಲಿಯಲ್ಲಿ ಲಿಪ್ಟ್​ನಲ್ಲಿ ಹೋಗುವಾಗ ಮಾತನಾಡಿದ್ದರು. ಇದೀಗ ಆರ್​ ಅಶೋಕ ಈ ಕುರಿತು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Sat, 29 June 24

Follow Us
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್