AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್ ಕಾಯಿನ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ,ವಿಚಾರಣೆಗೆ ಬಂದಿದ್ದ ಎಲ್ಲರೂ ಎಸ್​ಐಟಿ ವಶಕ್ಕೆ

ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆ ಬಿಟ್ ಕಾಯಿನ್ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಎಸ್​ಐಟಿ ಮತ್ತೊಂದು ಹೊಸ ಕೇಸ್ ದಾಖಲಿಸಿದ್ದು, ಇದರ ವಿಚಾರಣೆಗೆ ಬಂದವರನ್ನು ವಶಕ್ಕೆ ಪಡೆದುಕೊಂಡಿದೆ.

ಬಿಟ್ ಕಾಯಿನ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ,ವಿಚಾರಣೆಗೆ ಬಂದಿದ್ದ ಎಲ್ಲರೂ ಎಸ್​ಐಟಿ ವಶಕ್ಕೆ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jan 24, 2024 | 11:24 PM

Share

ಬೆಂಗಳೂರು, (ಜನವರಿ 24): ಬಿಟ್ ಕಾಯಿನ್ ಪ್ರಕರಣದಲ್ಲಿ(bitcoin case) ಮಹತ್ತರ ಬೆಳವಣಿಗೆ ನಡೆದಿದೆ. ಎಸ್ ಐಟಿ ಯಿಂದ ಇಂದು ಮಹತ್ತರ ಕಾರ್ಯಚರಣೆ ನಡೆಸಿ ಬಿಟ್ ಕಾಯಿನ್ ಹಗರಣದ ಬಗ್ಗೆ ಮತ್ತೊಂದು ಹೊಸ ಕೇಸ್ ದಾಖಲಿಸಿದೆ. ಈ ಕೇಸಿನಲ್ಲಿ ವಿಚಾರಣೆಗೆ ಕರೆದಿದ್ದವರನ್ನು ಇದೀಗ ಎಸ್​ಐಟಿ ತನ್ನ ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿದೆ.

ಇದುವರೆಗೆ ನಡೆದಿದ್ದ ತನಿಖೆ ಆಧಾರದ ಮೇಲೆ ಈಗ ಸಿಐಡಿಯಲ್ಲಿಯೇ ಎಸ್​ಐಟಿ ಮತ್ತೊಂದು ಹೊಸ ಎಫ್​ಐಆರ್ ದಾಖಲಿಸಿದ್ದು, ಸುಮಾರು ಮೂರು ಲಕ್ಷ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ಗಳ ವರ್ಗಾವಣೆ ಬಗ್ಗೆ ಮಾಹಿತಿ ಸಿಕ್ಕಿದೆ. ಜೊತೆಗೆ ಕಸ್ಟಡೊಯಲ್ಲಿ ತಾಂತ್ರಿಕ ವಸ್ತುಗಳು ಇದ್ದಾಗ ಅದನ್ನು ಟ್ಯಾಂಪರ್ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ಆರೋಪಿಗಳಿಗೆ ತಾತ್ಕಾಲಿಕ ವಿನಾಯಿತಿ ನೀಡಿದ ಹೈಕೋರ್ಟ್

ಸದ್ಯ ಹೊಸಾ ಎಫ್​ಐಆರ್ ಆದ ಬಳಿಕ ವಿಚಾರಣೆಗೆ ಆಗಮಿಸಿದ್ದ ಎಲ್ಲರನ್ನು ಎಸ್​ಐಟಿ ವಶದಲ್ಲೇ ಇಟ್ಟುಕೊಂಡಿರುವುದು ಸಂಚಲನ ಮೂಡಿಸಿದೆ. ಅಲ್ಲದೇ ಬಿಟ್ ಕಾಯಿನ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ ನಡೆಯುತ್ತಿದ್ದು, ವಶಕ್ಕೆ ಪಡೆದುಕೊಂಡವರ ವಿಚಾರಣೆ ವೇಳೆ ಏನೆಲ್ಲಾ ಮಾಹಿತಿ ಹೊರಬರುತ್ತೆ? ಆಗ ಎಸ್​ಐಟಿಯ ಮುಂದಿನ ನಡೆಯೇನು ಎನ್ನುವುದೇ ಕುತೂಹಲ ಮೂಡಿಸಿದೆ.

ಶ್ರೀಕಿಯನ್ನು ಬಂಧಿಸಿ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸಿತ್ತು. ಸಿಸಿಬಿ ತನಿಖೆಯಲ್ಲಿ ಲೋಪ ನಡೆದಿದೆ ಎಂದು ಎಸ್‍ಐಟಿ ತನಿಖೆಯಲ್ಲಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಎಫ್‍ಐಆರ್ ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದಾನೆ.

ಇನ್ನು ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರುಗಳ ಹೆಸರುಗಳು ಕೇಳಿಬಂದಿದ್ದವು. ಇದರಿಂದ ಈ ಬಿಟ್​ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ಯು. ಇದೀಗ ಎಸ್​ಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ತನಿಖೆಯಲ್ಲಿ ಏನೆಲ್ಲ ಅಂಶಗಳು ಬೆಳಕಿಗೆ ಬರಲಿವೆ ಎನ್ನುವುದುನ್ನು ಕಾದುನೋಡಬೇಕಿದೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ